CAA Implementation: ರಾಜ್ಯದಲ್ಲಿ ಸಿಎಎ ಜಾರಿಯಾಗುತ್ತಾ: ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 13: ಸಾರ್ವತ್ರಿಕ ಚುನಾವಣೆಯ ಘೋಷಣೆಯ ಕೆಲವೇ ದಿನಗಳ ಮೊದಲು, ಗೃಹ ವ್ಯವಹಾರಗಳ ಸಚಿವಾಲಯವು ಮಾರ್ಚ್ 11 ರಂದು ಪೌರತ್ವ ತಿದ್ದುಪಡಿ ನಿಯಮಗಳು, 2024 ಅನ್ನು ಅಧಿಸೂಚನೆ ಹೊರಡಿಸಿದೆ. ಇದು 2019 ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ಅನುವು ಮಾಡಿಕೊಡುತ್ತದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರ ವಲಸಿಗರಿಗೆ ಅಂದರೆ, ಹಿಂದೂ, ಸಿಖ್, ಬೌದ್ಧ, ಪಾರ್ಸಿ, ಕ್ರಿಶ್ಚಿಯನ್ ಮತ್ತು ಜೈನ ಸಮುದಾಯಕ್ಕೆ ಸೇರಿದ ದಾಖಲೆ ರಹಿತ ಜನರಿಗೆ ಪೌರತ್ವವನ್ನು ನೀಡುತ್ತದೆ. ಆದರೆ, ಅರ್ಜಿದಾರರು ಆರು ರೀತಿಯ ದಾಖಲೆಗಳನ್ನು ಒದಗಿಸಬೇಕು ಮತ್ತು ಭಾರತದಲ್ಲಿ 'ಪ್ರವೇಶ ದಿನಾಂಕ' ಸೂಚಿಸಬೇಕು ಎಂದು ನಿಯಮಗಳು ಹೇಳುತ್ತವೆ.

ಈ ಕಾಯಿದೆಯನ್ನು ಕರ್ನಾಟಕದಲ್ಲಿ ಜಾರಿ ಮಾಡುವ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ. ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನದ ವಿಷಯವನ್ನು ಕರ್ನಾಟಕ ಸರ್ಕಾರವು ಇನ್ನೂ ಚರ್ಚಿಸಿಲ್ಲ ಮತ್ತು ಈ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಮಾಹಿತಿ ನೀಡಿದ್ದಾರೆ.
ಈ ಕಾಯಿದೆಯನ್ನು ಡಿಸೆಂಬರ್ 11, 2019 ರಂದು ಅಂಗೀಕರಿಸಲಾಗಿತ್ತು. ಅದೇ ವರ್ಷ ಡಿಸೆಂಬರ್ 12 ರಂದು ರಾಷ್ಟ್ರಪತಿಗಳಿಂದ ಒಪ್ಪಿಗೆಯನ್ನು ಪಡೆಯಲಾಯಿತು. ಈ ಕಾಯಿದೆಯು ಜನವರಿ 10, 2020 ರಿಂದ ಜಾರಿಗೆ ಬರಲಿದೆ ಎಂದು ಗೃಹ ಸಚಿವಾಲಯ ಈ ಹಿಂದೆ ಸೂಚಿಸಿತ್ತು. ಇನ್ನೂ ನಿಯಮಗಳನ್ನು ರೂಪಿಸದ ಕಾರಣ, ಕಾಯಿದೆಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ.

ಗೃಹ ಸಚಿವಾಲಯ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದರೂ ಕೂಡ, ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. "ನಾವು ಇನ್ನೂ ಈ ಬಗ್ಗೆ ಚರ್ಚೆ ಮಾಡಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರೆ ಅದನ್ನು ಒಪ್ಪಿಕೊಳ್ಳುತ್ತೇವೆ ಅಥವಾ ತಿರಸ್ಕರಿಸುತ್ತೇವೆ ಎಂಬುದನ್ನು ಸಂಪುಟ ಸಭೆ ನಿರ್ಧರಿಸಬೇಕು" ಎಂದು ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜಕೀಯ ಉದ್ದೇಶದಿಂದ ಸಿಎಎ ಜಾರಿ
ಸಿಎಎ ಜಾರಿ ಅಧಿಸೂಚನೆ ಹೊರಬಿದ್ದ ಸಮದರ್ಭದಲ್ಲಿ ಮಾತನಾಡಿದ್ದ ಗೃಹ ಸಚಿವ ಜಿ ಪರಮೇಶ್ವರ್ "ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ" ಎಂದು ಕಿಡಿಕಾರಿದ್ದರು.
'ಪೌರತ್ವ ತಿದ್ದುಪಡಿ ಕಾಯ್ದೆಗೆ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆಯೂ ಕೇಂದ್ರ ಸರ್ಕಾರ ಅದನ್ನು ಜಾರಿ ಮಾಡುವ ನಿರ್ಧಾರಕ್ಕೆ ಬಂದಿದೆ. ಬಿಜೆಪಿಯವರಿಗೆ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೀಗಾಗಿ ಇದನ್ನು ಜಾರಿ ಮಾಡಲು ಅಧಿಸೂಚನೆ ಹೊರಡಿಸಿದ್ದಾರೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿದೆ' ಎಂದು ತಿಳಿಸಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications