ಗೃಹ ಸಚಿವ ಆರಗ ಜ್ಞಾನೇಂದ್ರ ತಲೆದಂಡ?: ಸಂಪುಟಕ್ಕೆ ಸೇರ್ಪಡೆಯಾಗುವ ಸಚಿವರ ಪಟ್ಟಿ ಬಹುತೇಕ ಸಿದ್ಧ

ಬೆಂಗಳೂರು, ಏ. 06: ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ.

ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ ಹರಿದಾಡುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮತ್ತು ಪುನಾರಚನೆಗೆ ಕೇಂದ್ರ ನಾಯಕರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಗೃಹ ಖಾತೆಯಿಂದ ಬಿಡುಗಡೆಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎನ್ನಲಾಗಿದೆ.

Karnataka Cabinet Expansion: Araga Jnanendra Likely to Lose Home Minister Post

ಆರಗ ಜ್ಞಾನೇಂದ್ರ ಅವರಿಂದ ಕಿತ್ತುಕೊಳ್ಳುವ ಗೃಹ ಖಾತೆಯನ್ನು ಮತ್ತೊಬ್ಬ ಕರಾವಳಿ ಭಾಗದ ಯುವ ಸಚಿವ ವಿ. ಸುನೀಲ್ ಕುಮಾರ್ ಅವರಿಗೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಸುನೀಲ್ ಕುಮಾರ್ ಸದ್ಯ ಇಂಧನ ಸಚಿವರಾಗಿದ್ದು, ಮುಖ್ಯಮಂತ್ರಿ ಜೊತೆಯಲ್ಲಿಯೇ ದೆಹಲಿಗೆ ತೆರಳಿದ್ದಾರೆ.

Karnataka Cabinet Expansion: Araga Jnanendra Likely to Lose Home Minister Post

ವಿಜಯೇಂದ್ರ ಸಂಪುಟಕ್ಕೆ:

ರಾಜ್ಯ ಬಿಜೆಪಿ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಸಂಪುಟ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ವಿಜೇಯಂದ್ರ ಅವರಿಗೆ ಇಂಧನ ಖಾತೆ ನೀಡಬಹುದು ಎಂದು ಹೇಳಲಾಗುತ್ತಿದೆ.

Karnataka Cabinet Expansion: Araga Jnanendra Likely to Lose Home Minister Post

ಜಾರಕಿಹೊಳಿಯೂ ಸಂಪುಟಕ್ಕೆ?:

ಸೆಕ್ಸ್ ಸಿಡಿ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬೆಳಗಾವಿ ಭಾಗದ ಪ್ರಭಾವಿ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆಯಾಗುವುದು ಖಚಿತವಾಗುತ್ತಿದೆ. ಜಾರಕಿಹೊಳಿ ಅವರಿಗೆ ಗ್ರಾಮೀಣಾಭಿವೃದ್ದಿ ಖಾತೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಸದ್ಯ ಆರ್‌ಡಿಪಿಆರ್ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ತೊಡಗಿಸುವ ಸಾಧ್ಯತೆ ಇದೆ.

ಆರ್‌.ಅಶೋಕ್‌ಗೆ ಬೆಂಗಳೂರು ಉಸ್ತುವಾರಿ:

ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನ ಮುಖ್ಯಮಂತ್ರಿ ಬಳಿಯಲ್ಲಿಯೇ ಇದೆ. ರಾಜಧಾನಿಯ ಉಸ್ತುವಾರಿಗಾಗಿ ಆರ್. ಅಶೋಕ್, ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತು ವಿ. ಸೋಮಣ್ಣ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಆದರೆ, ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಆರ್. ಅಶೋಕ್ ಅವರಿಗೆ ಬೆಂಗಳೂರು ಉಸ್ತುವಾರಿ ನೀಡುವ ಸಾಧ್ಯತೆ ಇದೆ.

ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎನ್‌. ಮಹೇಶ್, ಸತೀಶ್ ರೆಡ್ಡಿ, ಜಿ.ಎಚ್. ತಿಪ್ಪಾರಡ್ಡಿ, ಶಿವನಗೌಡನಾಯಕ ಅವರೂ ಸಹ ಸಂಪುಟ ಸೇರ್ಪಡೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+