ಸಂಪುಟ ವಿಸ್ತರಣೆಗೆ ದೆಹಲಿಗೆ ಹೊರಟು ನಿಂತ ಸಿಎಂ ಬಿಎಸ್ವೈ: ಮತ್ತೆ 'ನಾಳೆ ಬಾ' ಎಂದ ಹೈಕಮಾಂಡ್
ಬೆಂಗಳೂರು, ನ 14: ಅದೇನೋ ಸಂಪುಟ ಸೇರಲು ಬಯಸುತ್ತಿರುವವರ ಗ್ರಹಗತಿ ಸರಿಯಿಲ್ಲವೇನೋ ಏನೋ, ಮುಖ್ಯಮಂತ್ರಿ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಒಂದಲ್ಲಾ ಒಂದು ವಿಘ್ನಗಳು ಎದುರಾಗುತ್ತಲೇ ಇದೆ.
ಉಪಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದ ಯಡಿಯೂರಪ್ಪನವರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ. ಈಗ, ಉಪಚುನಾವಣೆ ಗೆದ್ದ ನಂತರವೂ, ವರಿಷ್ಠರ ಭೇಟಿಗೆ ಸಮಯ ಸಿಗುತ್ತಿಲ್ಲ. ಈ ಬಾರಿ, ಬಿಹಾರ ಸರಕಾರ ರಚನೆಯ ಕಾರಣ.
ಈ ಬಗ್ಗೆ ಮಾತನಾಡಿರುವ ಸಿಎಂ ಬಿಎಸ್ವೈ, "ಇಂದು (ನ 14) ದೆಹಲಿಗೆ ಹೋಗಿ ನಮ್ಮ ನಾಯಕರನ್ನು ಭೇಟಿ ಮಾಡಲು ಬಯಸಿದ್ದೆ. ಆದರೆ, ಹೈಕಮಾಂಡ್ ಬಿಹಾರ ರಚನೆಯ ವಿಚಾರದಲ್ಲಿ ಬ್ಯೂಸಿಯಾಗಿದ್ದಾರೆ"ಎಂದು ಹೇಳಿದರು.

"ಬಿಹಾರದಲ್ಲಿ ಸರಕಾರ ರಚನೆಯಾದ ನಂತರ ನೀವು ದೆಹಲಿಗೆ ಬರಬೇಕು ಎನ್ನುವುದು ನಮ್ಮ ಅಪೇಕ್ಷೆ. ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರ, ನಾವೇ ನಿಮಗೆ ಫೋನ್ ಮಾಡುತ್ತೇವೆ. ಇದಾದ ನಂತರ ದೆಹಲಿಗೆ ಬನ್ನಿ ಎನ್ನುವ ಉತ್ತರ ನಮ್ಮ ಹೈಕಮಾಂಡ್ ನಿಂದ ಬಂದಿದೆ"ಎಂದು ಯಡಿಯೂರಪ್ಪ ಹೇಳಿದರು.
ಉಪಚುನಾವಣೆಯ ಗೆಲುವಿನ ನಂತರ, "ದೊಡ್ಡ ಮಟ್ಟದಲ್ಲಿ ಸಂಪುಟ ವಿಸ್ತರಣೆ ಮಾಡಬೇಕೆಂದು ಇದ್ದೇನೆ. ಸಂಪುಟ ಪುನರ್ ರಚನೆಯೋ ಅಥವಾ ಸಂಪುಟ ವಿಸ್ತರಣೆಯೋ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ"ಎಂದು ಯಡಿಯೂರಪ್ಪ ಹೇಳಿದ್ದರು.
ಉಪಚುನಾವಣಾ ಫಲಿತಾಂಶದ ನಂತರ, ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ, ಸಚಿವ ಸ್ಥಾನದ ಆಕಾಂಕ್ಷಿಗಳ ಸಭೆ ನಡೆದಿತ್ತು. ಇದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು.
Recommended Video
-
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು












Click it and Unblock the Notifications