ಅತೃಪ್ತ ಕಾಂಗ್ರೆಸ್ ಶಾಸಕರಿಂದ ಸಭೆ, ಮುಂದಿನ ನಡೆ ನಿಗೂಢ
ಬೆಂಗಳೂರು, ಡಿಸೆಂಬರ್ 22: ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದಂತೆ ಇತ್ತ ಕಾಂಗ್ರೆಸ್ನಲ್ಲಿ ಅಸಮಾಧಾನವೂ ಸ್ಪೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ಪಕ್ಷದ ವಿರುದ್ಧ ಬಂಡಾಯದ ಸೂಚನೆ ನೀಡಿದ್ದಾರೆ.
ಸಚಿವ ಭೀಮಾನಾಯ್ಕ, ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಆರ್.ಶಂಕರ್, ಎನ್.ಎ.ಹ್ಯಾರಿಸ್, ಶಾಮನೂರು ಶಿವಶಂಕರಪ್ಪ ಅವರುಗಳು ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಇಂದು ಸಂಜೆ ಹೊಸ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಮುಗಿದ ನಂತರ ಅತೃಪ್ತ ಶಾಸಕರಾದ ಬಿ.ಸಿ.ಪಾಟೀಲ್, ಆನಂದ್ ಸಿಂಗ್, ಭೀಮಾಶಂಕರ್ ಅವರುಗಳು ಸಭೆ ಸೇರಲಿದ್ದು, ಇನ್ನೂ ಕೆಲವು ಅತೃಪ್ತ ಶಾಸಕರನ್ನು ಜೊತೆ ಮಾಡಿಕೊಳ್ಳಲಿದ್ದಾರೆ.

ಎಸ್.ಆರ್.ಪಾಟೀಲ್ ಭೇಟಿ ಸಾಧ್ಯತೆ
ಎಸ್.ಆರ್.ಪಾಟೀಲ್ ಅವರನ್ನು ಅತೃಪ್ತ ಶಾಸಕರ ಗುಂಪಿನ ನೇತೃತ್ವ ವಹಿಸುವಂತೆ ಕೇಳುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಸುಧಾಕರ್ ಅವರನ್ನು, ಎನ್.ಎ.ಹ್ಯಾರಿಸ್ ಅವರನ್ನು ಅತೃಪ್ತ ಶಾಸಕರು ಇಂದು ಭೇಟಿಯಾಗಿ ಮಾತನಾಡುವ ಸಂಭವ ಹೆಚ್ಚಿದೆ.

ರಮೇಶ್ ಜಾರಕಿಹೊಳಿ ಸೇರ್ಪಡೆಗೊಂಡರೆ ಸಂಕಷ್ಟ
ಸಭೆ ಸೇರಲಿರುವ ಅತೃಪ್ತರು ತಮ್ಮ ಮುಂದಿನ ನಡೆಯ ಬಗ್ಗೆ ನಿರ್ಧರಿಸಲಿದ್ದಾರೆ. ಈ ಅತೃಪ್ತರ ಪಡೆಗೆ ರಮೇಶ್ ಜಾರಕಿಹೊಳಿ ಜೊತೆ ಆದರೆ ಸರ್ಕಾರಕ್ಕೆ ಆತಂಕ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ. ಆದರೆ ಸಿದ್ದರಾಮಯ್ಯ ಅವರು ಅಸಾಧಾನ ಶಮನ ಮಾಡುವ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ ಆದ್ದರಿಂದ ಪರಿಸ್ಥಿತಿ ಕೈಮೀರದಂತೆ ತಡೆಯುವ ಸಾಧ್ಯತೆ ಇದೆ.

ಅತೃಪ್ತರನ್ನು ವಿಶ್ವಾಸಕ್ಕೆ ಪಡೆವ ಜವಾಬ್ದಾರಿ
ಅತೃಪ್ತ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾರ್ಯವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರುಗಳು ಸಿದ್ದರಾಮಯ್ಯ ನೇತೃತ್ವದಲ್ಲಿ ಮಾಡಬೇಕಾಗಿದೆ. ಸಿದ್ದರಾಮಯ್ಯ ಅವರು ನಿನ್ನೆಯಷ್ಟೆ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾತನಾಡಿದ್ದಾರೆ. ಉಳಿದ ಅತೃಪ್ತ ಶಾಸಕರೊಂದಿಗೆ ನಾಳೆ ಮಾತನಾಡುವ ನಿರೀಕ್ಷೆ ಇದೆ.

ಎಂಟು ಮಂದಿ ಸಚಿವರಾಗಲು ತಯಾರು
ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜಭವನದಲ್ಲಿ ಸಕಲ ಸಿದ್ದತೆ ಮುಗಿದಿದ್ದು, ಸಂಜೆ 5:20 ಕ್ಕೆ ಸರಿಯಾಗಿ ಎಂಟು ಮಂದಿ ಶಾಸಕರು ಸಚಿವರಾಗಿ ಬಡ್ತಿ ಪಡೆಯಲಿದ್ದಾರೆ. ಅವರಿಗೆ ಖಾತೆಗಳನ್ನು ನಾಳೆ ಅಥವಾ ನಾಡಿದ್ದು ಹಂಚಿಕೆ ಮಾಡಲಾಗುತ್ತದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications