ಕೊನೆಯ ಕ್ಷಣದ ವರೆಗೆ ತಲೆನೋವೇ ಆಗಿರುವ ಸಂಪುಟ ವಿಸ್ತರಣೆ
ಬೆಂಗಳೂರು, ಜೂನ್ 06: ಇಂದು ಮಧ್ಯಾಹ್ವ 2:12 ಕ್ಕೆ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಈ ವರೆಗೆ ಎರಡೂ ಪಕ್ಷಗಳಲ್ಲಿ ಗೊಂದಲಗಳ ನಿವಾರಣೆ ಆಗಿಲ್ಲ.
ಪ್ರಮಾಣ ವಚನ ಸ್ವೀಕರಕ್ಕೆ ಕೆಲವೇ ಗಂಟೆಗಳು ಉಳಿದಿರುವಾಗಲೂ ಕೂಡ ಪರಮೇಶ್ವರ್, ಸಿಎಂ ಕುಮಾರಸ್ವಾಮಿ ಅವರಂತಹಾ ಹಿರಿಯ ನಾಯಕರುಗಳು ಸಂಪುಟ ವಿಸ್ತರಣೆ ಸಂಬಂಧಿಸಿದ ಮಾಧ್ಯಮಗಳ ಪ್ರಶ್ನೆಗಳಿಗೆ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆಂದರೆ ಸಂಪುಟ ವಿಸ್ತರಣೆಯಲ್ಲಿ ಪಕ್ಷದಲ್ಲಿ ಒಮ್ಮತವಿಲ್ಲ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇದು.
ಜೆಡಿಎಸ್ 12 ಖಾತೆ ಹಾಗೂ ಕಾಂಗ್ರೆಸ್ 22 ಖಾತೆಗಳನ್ನು ಹಂಚಿಕೊಂಡಿವೆ ಆದರೆ ಎರಡೂ ಪಕ್ಷಗಳು ಎಲ್ಲಾ ಸ್ಥಾನವನ್ನು ತುಂಬಿಕೊಳ್ಳದೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗುತ್ತಿವೆ. ಇದಕ್ಕೆ ಪ್ರಮುಖ ಕಾರಣ ಎರಡೂ ಪಕ್ಷಗಳಿಗೆ ಕಾಡುತ್ತಿರುವ ಬಂಡಾಯದ ಭಯ.

ಎರಡೂ ಪಕ್ಷಗಳ ಅತ್ಯಂತ ಪ್ರಮುಖ ನಾಯಕರುಗಳೇ ಸಚಿವ ಸ್ಥಾನಕ್ಕೆ ರಚ್ಚೆ ಹಿಡಿದಿದ್ದು ಈ ರೀತಿಯ ಗೊಂದಲಗಳಿಗೆ ಮುಖ್ಯ ಕಾರಣ ಎನ್ನಬಹುದು. ಎತ್ತೇ ಕೆಸರಿಗಳಿದರೆ ಎಮ್ಮೆ ಇಳಿಯದೇ ಇರುತ್ತದೆಯೇ. ದೊಡ್ಡ ನಾಯಕರೇ ರಚ್ಚೆ ಹಿಡಿದಮೇಲೆ ಸಣ್ಣ-ಪುಟ್ಟ ನಾಯಕರೂ ಸಚಿವ ಸ್ಥಾನಕ್ಕಾಗಿ ಅರ್ಜಿಗಳನ್ನು ಹಾಕಿ ಸಂಪುಟ ವಿಸ್ತರಣೆಯನ್ನು ಮತ್ತಷ್ಟು ಗೊಂದಲದ ಗೂಡಾಗಿ ಮಾಡಿದರು.
ಮೈತ್ರಿ ಸರ್ಕಾರದ ಸಮಸ್ಯೆಗಳಲ್ಲಿ ಇದೂ ಒಂದು. ಮೈತ್ರಿ ಸರ್ಕಾರದಲ್ಲಿ ಆಕಾಂಕ್ಷಿಗಳು ಹೆಚ್ಚು ಆದರೆ ಅವಕಾಶಗಳು ಕಡಿಮೆ ಹಾಗಾಗಿ ಸಚಿವ ಸ್ಥಾನ ಹಂಚಿಕೆ ಎಂಬುದು ಇಲ್ಲಿ ಸದಾ ಕಬ್ಬಿಣದ ಕಡಲೆ. ಒಮ್ಮೊಮ್ಮೆ ಯೋಗ್ಯರಿಗೆ ಅವಕಾಶ ಸಿಗದೇ ಅಯೋಗ್ಯರಿಗೆ ಪರಿಸ್ಥತಿಗೆ ಸಿಲುಕಿ ಮಣೆ ಹಾಕಲೇ ಬೇಕಾಗುತ್ತದೆ.
ಎರಡೂ ಪಕ್ಷದ ಮುಖಂಡರುಗಳಿಗೆ ತಮ್ಮ ಶಾಸಕರ ಮೇಲೆ ಹಿಡಿತ ಕಡಿಮೆ ಆದಂತೆಯೂ ಕಾಣುತ್ತಿದೆ. ಜೆಡಿಎಸ್ನಲ್ಲಿಯಂತೂ ದೇವೇಗೌಡರ ಮಾನಸ ಪುತ್ರ ಶರವಣ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವರು ಮಂತ್ರಿ ಸ್ಥಾನ ನೀಡದಿದ್ದರೆ ಪಕ್ಷ ಬಿಡುವುದಾಗಿ ಬೆದರಿಸಿದ್ದಾರೆ ಎಂಬ ಸುದ್ದಿಯೂ ಇದೆ.
'ಖಾತೆ ಹಂಚಿಕೆ ಮುಗಿಯುವುದರೊಳಗೆ ಸರ್ಕಾರ ಉರುಳಿ ಬೀಳುತ್ತದೆ' ಎಂದು ಯಡಿಯೂರಪ್ಪ ಅವರು ಹೇಳಿದ್ದರು. ಈಗ ನೋಡಿದರೆ ಎರಡೂ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಹತ್ತಿರದಿಂದ ಗಮನಿಸುತ್ತಿರುವ ಬಿಜೆಪಿ ಮನಸ್ಸಿನಲ್ಲೇ ಮಂಡಿಗೆ ತಿನ್ನುತ್ತಿರುವುದು ಖಂಡಿತ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications