ಸಂಪುಟ ವಿಸ್ತರಣೆ : ಅತೃಪ್ತ ಎಂ.ಬಿ.ಪಾಟೀಲ್ ಜೊತೆ ಸಂಧಾನ!

ಬೆಂಗಳೂರು, ಜೂನ್ 06 : ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಅಸಮಾಧಾನಗೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಹೆಸರನ್ನು ಕೈ ಬಿಡಲಾಗಿದ್ದು, ಬೆಂಬಲಿಗರ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್‌ನ 15 ಶಾಸಕರ ಪಟ್ಟಿ ರಾಜಭವನಕ್ಕೆ ರವಾನೆಯಾಗಿದೆ. ನೂತನ ಸಚಿವರು ಇಂದು ಮಧ್ಯಾಹ್ನ 2.11ಕ್ಕೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಮೊದಲ ಹಂತದಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದ್ದರಿಂದ, ಅವರು ಅಸಮಾಧಾನಗೊಂಡಿದ್ದಾರೆ. ಮಾಜಿ ಸಚಿವರ ಬೆಂಬಲಿಗರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ.

 Cabinet Expansion : I will meet Siddaramaiah says MB Patil

'ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಯಾಕೆ ಕೈ ತಪ್ಪಿತು ಎಂಬುದು ಇನ್ನೂ ತಿಳಿದಿಲ್ಲ. ನಮ್ಮ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಯಾಗುತ್ತೇನೆ. ನಂತರ ಪ್ರತಿಕ್ರಿಯೆ ನೀಡುತ್ತೇನೆ' ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಎಂ.ಬಿ.ಪಾಟೀಲ್ ಅವರನ್ನು ಸಮಾಧಾನಪಡಿಸಲು ಕೃಷ್ಣ ಬೈರೇಗೌಡ ಸದಾಶಿವನಗರದ ಎಂ.ಬಿ.ಪಾಟೀಲ್ ನಿವಾಸಕ್ಕೆ ಆಗಮಿಸಿದ್ದರು. ಆಗ ಪಾಟೀಲ್ ಬೆಂಬಲಿಗರು ಅವರಿಗೆ ಮುತ್ತಿಗೆ ಹಾಕಿದರು.

ಎಂ.ಬಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂ.ಬಿ.ಪಾಟೀಲ್ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+