ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ : ಡಿ.20ರ ಸಂಜೆ 4 ಗಂಟೆಗೆ ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 19 : ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಸಭೆ ನಡೆಸಲಿದ್ದಾರೆ.

ಡಿಸೆಂಬರ್ 20ರ ಸಂಜೆ 4 ಗಂಟೆಗೆ ರಾಹುಲ್ ಗಾಂಧಿ ಅವರ ಜೊತೆ ಸಭೆ ನಿಗದಿಯಾಗಿದೆ. ಕೆಪಿಸಿಸಿ ಅಧ್ಯ್ಕಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಂಪುಟ ವಿಸ್ತರಣೆ : ಒನ್ ಇಂಡಿಯಾ ಸಮೀಕ್ಷೆಯಲ್ಲಿ ಓದುಗರು ಹೇಳಿದ್ದೇನು?ಸಂಪುಟ ವಿಸ್ತರಣೆ : ಒನ್ ಇಂಡಿಯಾ ಸಮೀಕ್ಷೆಯಲ್ಲಿ ಓದುಗರು ಹೇಳಿದ್ದೇನು?

ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್‌ ಪಕ್ಷಕ್ಕೆ ಸಿಗಲಿವೆ. ಸಂಪುಟ ಸೇರುವ 6 ಶಾಸಕರ ಪಟ್ಟಿಯನ್ನು ಹಿಡಿದು ನಾಯಕರು ದೆಹಲಿಗೆ ತೆರಳಲಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿ

Cabinet Expansion : Meeting with Rahul Gandhi on Dec 20

ಸಂಪುಟ ಪುನಾರಚನೆಯಾಗಬೇಕು ಎಂಬ ಬೇಡಿಕೆಯೂ ಇದೆ. ಆದ್ದರಿಂದ, ಯಾರನ್ನು ಸಂಪುಟದಿಂದ ಕೈಬಿಡಲಾಗುತ್ತದೆ? ಎಂದು ದೆಹಲಿಯಲ್ಲಿಯೇ ತೀರ್ಮಾನವಾಗಲಿದೆ. ಡಿಸೆಂಬರ್ 22ರಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಡಿಸೆಂಬರ್ 22ರಂದು ಸಂಪುಟ ವಿಸ್ತರಣೆಯೋ?, ಪುನರ್ ರಚನೆಯೋ?ಡಿಸೆಂಬರ್ 22ರಂದು ಸಂಪುಟ ವಿಸ್ತರಣೆಯೋ?, ಪುನರ್ ರಚನೆಯೋ?

English summary
All set for Cabinet Expansion in Karnataka. State Congress leaders will meet AICC president Rahul Gandhi on December 20, 2018 to discuss about cabinet expansion and reshuffle.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X