ಸಂಪುಟ ವಿಸ್ತರಣೆ : ಡಿ.20ರ ಸಂಜೆ 4 ಗಂಟೆಗೆ ಮಹತ್ವದ ಸಭೆ
ಬೆಂಗಳೂರು, ಡಿಸೆಂಬರ್ 19 : ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಸಭೆ ನಡೆಸಲಿದ್ದಾರೆ.
ಡಿಸೆಂಬರ್ 20ರ ಸಂಜೆ 4 ಗಂಟೆಗೆ ರಾಹುಲ್ ಗಾಂಧಿ ಅವರ ಜೊತೆ ಸಭೆ ನಿಗದಿಯಾಗಿದೆ. ಕೆಪಿಸಿಸಿ ಅಧ್ಯ್ಕಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಂಪುಟ ವಿಸ್ತರಣೆ : ಒನ್ ಇಂಡಿಯಾ ಸಮೀಕ್ಷೆಯಲ್ಲಿ ಓದುಗರು ಹೇಳಿದ್ದೇನು?
ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಸಿಗಲಿವೆ. ಸಂಪುಟ ಸೇರುವ 6 ಶಾಸಕರ ಪಟ್ಟಿಯನ್ನು ಹಿಡಿದು ನಾಯಕರು ದೆಹಲಿಗೆ ತೆರಳಲಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿ
ಸಂಪುಟ ಪುನಾರಚನೆಯಾಗಬೇಕು ಎಂಬ ಬೇಡಿಕೆಯೂ ಇದೆ. ಆದ್ದರಿಂದ, ಯಾರನ್ನು ಸಂಪುಟದಿಂದ ಕೈಬಿಡಲಾಗುತ್ತದೆ? ಎಂದು ದೆಹಲಿಯಲ್ಲಿಯೇ ತೀರ್ಮಾನವಾಗಲಿದೆ. ಡಿಸೆಂಬರ್ 22ರಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಡಿಸೆಂಬರ್ 22ರಂದು ಸಂಪುಟ ವಿಸ್ತರಣೆಯೋ?, ಪುನರ್ ರಚನೆಯೋ?