ಯಡಿಯೂರಪ್ಪ ಸಂಪುಟ ಸೇರಿದ ಸಿದ್ದರಾಮಯ್ಯ ಆಪ್ತ ಎಂಬಿಟಿ ನಾಗರಾಜ್ ವ್ಯಕ್ತಿಚಿತ್ರಣ!
ಬೆಂಗಳೂರು, ಜ. 13: ಅತ್ಯಂತ ಶ್ರೀಮಂತ ರಾಜಕಾರಣಿ, ಕಲರ್ಫುಲ್ ವ್ಯಕ್ತಿತ್ವದ, ಹೊಸಕೋಟೆ ಮಾಜಿ ಶಾಸಕ ಎಂ.ಟಿ.ಬಿ. ನಾಗರಾಜ್ ಅವರು ಎರಡನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸಕೋಟೆಯಿಂದ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೂ ಹೌದು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಶಾಸಕಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಬಿಜೆಪಿ ಸೇರಿದ್ದರೂ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶರತ್ ಬಚ್ಚೇಗೌಡ ಅವರ ಎದುರು ಸೋಲನ್ನು ಅನುಭವಿಸಿದ್ದರು. ಆದರೂ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ, ಇದೀಗ ಮಂತ್ರಿ ಪದವಿ ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ಮೈತ್ರಿ ಸರ್ಕಾರದಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರು. ಆಗ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರಿಂದ ಯಾವುದೇ ಕಾರಣಕ್ಕೂ ಎಂಟಿಬಿ ನಾಗರಾಜ್ ಅವರು ಬಿಜೆಪಿಗೆ ಹೋಗುವುದಿಲ್ಲ ಎನ್ನಲಾಗಿತ್ತು. ಎಲ್ಲರ ನಿರೀಕ್ಷೆ ತಲೆಕೆಳಗಾಗಿಸಿ ಬಿಜೆಪಿ ಸೇರಿ ಅಂತಂತ್ರರಾಗಿದ್ದ ಎಂಟಿಬಿ ನಾಗರಾಜ್ ಅವರು ಇದೀಗ ಎರಡನೇ ಬಾರಿ ಸಚಿವರಾಗಿದ್ದಾರೆ.
ಕುರುಬ ಸಮುದಾಯಕ್ಕೆ ಸೇರಿರುವ ಎಂಬಿಟಿ ನಾಗರಾಜ್ ಅವರು ಐಟಿಐ ಶಿಕ್ಷಣ ಪಡೆದಿದ್ದಾರೆ. ಅವರ ರಾಜಕೀಯ ಜೀವನದ ವಿವರ ಹೀಗಿದೆ.

ಎಂಟಿಬಿ ನಾಗರಾಜ್ ರಾಜಕೀಯ ಜೀವನ
* 2013 - ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆ
* 2018 - 2019ರವರೆಗೆ ವಸತಿ ಸಚಿವರಾಗಿ ಕಾರ್ಯ ನಿರ್ವಹಣೆ
* 2019 - ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
* 2019 - ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ
* 2019 - ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಸೋಲು
* 2020 - ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ
* 2021 - ನೂತನ ಸಚಿವರಾಗಿ ಪ್ರಮಾಣವಚನ ಸ್ಪೀಕಾರ
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications