ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮಲಿಂಗಾ ರೆಡ್ಡಿಗೆ ಗೃಹ ಖಾತೆ, ರೇವಣ್ಣ ಸಾರಿಗೆ, ಗೀತಾಗೆ ಸಕ್ಕರೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆ ಮಾಡಿದ್ದಾರೆ. ಗೀತಾ ಮಹದೇವಪ್ರಸಾದ್, ಎಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರಗೆ ಮಂತ್ರಿಗಿರಿ ಸಿಕ್ಕಿದೆ. ಇನ್ನು ರಾಮಲಿಂಗಾ ರೆಡ್ಡಿ ಅವರಿಗೆ ಗೃಹ ಖಾತೆ, ಎಚ್.ಎಂ.ರೇವಣ್ಣಗೆ ಸಾರಿಗೆ ಖಾತೆ ಸಿಕ್ಕಿದೆ.

ಸಚಿವರಾಗಿ ಗೀತಾ, ರೇವಣ್ಣ, ತಿಮ್ಮಾಪುರ ಪ್ರಮಾಣ ವಚನ ಸ್ವೀಕಾರಸಚಿವರಾಗಿ ಗೀತಾ, ರೇವಣ್ಣ, ತಿಮ್ಮಾಪುರ ಪ್ರಮಾಣ ವಚನ ಸ್ವೀಕಾರ

ತಿಮ್ಮಾಪುರ ಅವರಿಗೆ ಅಬಕಾರಿ, ಗೀತಾ ಮಹದೇವ ಪ್ರಸಾದ್ ಗೆ ಸಕ್ಕರೆ-ಸಣ್ಣ ಕೈಗಾರಿಕೆ, ರಮೇಶ್ ಜಾರಕಿಹೊಳಿ ಸಹಕಾರ ಹಾಗೂ ಸಂತೋಷ್ ಲಾಡ್ ಗೆ ಕಾರ್ಮಿಕ ಖಾತೆ ಜತೆಗೆ ಕೌಶಲ ಅಭಿವೃದ್ಧಿ ಸಹ ಸಿಕ್ಕಿದೆ. ಈ ಬಾರಿಯೂ ಜಾತಿ ಲೆಕ್ಕಾಚಾರದಲ್ಲೇ ವಿಸ್ತರಣೆ ಆಗಿರುವುದು ಗೊತ್ತಾಗುತ್ತದೆ.

'ಒನ್ ಇಂಡಿಯಾ' ಜೊತೆ ಸಚಿವೆ ಗೀತಾ ಮಹದೇವ ಪ್ರಸಾದ್ ಮಾತು'ಒನ್ ಇಂಡಿಯಾ' ಜೊತೆ ಸಚಿವೆ ಗೀತಾ ಮಹದೇವ ಪ್ರಸಾದ್ ಮಾತು

Cabinet expansion: Ramalinga Reddy home minister, Revanna transport

ಆದರೆ, ತಿಪಟೂರಿನ ಶಾಸಕ ಷಡಕ್ಷರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದ್ದದ್ದು ಹುಸಿಯಾಗಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸ್ವತಃ ಅಸಮಾಧಾನಗೊಂಡಿದ್ದಾರೆ ಎಂಬ ಮಾತು ಚಾಲ್ತಿಯಲ್ಲಿದೆ. ಇನ್ನು ಪಕ್ಷದ ನಾಯಕಿ ಮೋಟಮ್ಮ ಸಹ ಬಹಿರಂಗವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸಂಪುಟ ವಿಸ್ತರಣೆ ಎಂಬುದು ಜೇನುಗೂಡಿಗೆ ಕೈ ಹಾಕಿದಂತಾಗಿದೆ.

English summary
Chief minister Siddaramaiah finally expands the cabinet. Ramalinga Reddy home minister, Revanna transport, Geeta Mahadeva Prasad Sugar, R.B.Timmapur excise and other portfolio details are here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X