ಹೈಕಮಾಂಡ್ ಸೂಚನೆ ಬಳಿಕ ಸಂಪುಟ ವಿಸ್ತರಣೆ, ಪುನಾರಚನೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮಾ.13: ಸಚಿವ ಸಂಪುಟವನ್ನು ವಿಸ್ತರಣೆ ಮಾಡುವ ಪ್ರಸ್ತಾಪ ಇದೆ. ಆದರೆ, ಹೈಕಮಾಂಡ್ ನಾಯಕರು ಯಾವಾಗ ಸೂಚನೆ ಕೊಡುತ್ತಾರೋ ಆಗ ವಿಸ್ತರಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಆಗುತ್ತದೆ. ಆದರೆ, ಪಕ್ಷದ ವರಿಷ್ಠರು ಇನ್ನೂ ಸೂಚನೆ ನೀಡಿಲ್ಲ. ಸೂಕ್ತ ಸೂಚನೆಗಳು ಬಂದ ಬಳಿಕ ದೆಹಲಿಗೆ ಹೋಗಿ ಈ ಬಗ್ಗೆ ಅಂತಿಮಗೊಳಿಸಲಾಗುವುದು ಎಂದು ಅವರು ಭಾನುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ನಮ್ಮ ಪಕ್ಷವನ್ನು ಬಿಟ್ಟು ಯಾರೂ ಹೊರ ಹೋಗುವುದಿಲ್ಲ. ಬೇರೆ ಪಕ್ಷಗಳಿಂದ ಬರುವವರ ಬಗ್ಗೆ ನೀವೆ ಕಾದು ನೋಡಿ. ಬಿಜೆಪಿ ಕಾರ್ಯಕಾರಣಿ ಸಭೆ ಮಾ.30 ಮತ್ತು 31ರಂದು ನಡೆಯುತ್ತದೆ. ಪ್ರಮುಖ ನಾಯಕರುಗಳ ರಾಜ್ಯ ಪ್ರವಾಸ, ಮುಂದಿನ ಚುನಾವಣೆಗಳಿಗೆ ತಯಾರಿ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ಅವಧಿಪೂರ್ವ ಚುನಾವಣೆ ಇಲ್ಲ:
ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆಗೆ ಹೋಗುವ ಯಾವುದೇ ಆಲೋಚನೆಗಳು ಇಲ್ಲ, ಈ ಬಗ್ಗೆ ಚರ್ಚೆಯೂ ಆಗಿಲ್ಲ. ಇದೆಲ್ಲವೂ ಊಹಾಪೋಹ ಮತ್ತು ಕೆಲವರ ಸೃಷ್ಟಿ ಮಾತ್ರ. ಐದು ವರ್ಷದ ಅಧಿಕಾರ ಪೂರ್ಣಗೊಳಿಸಿಯೇ ಚುನಾವಣೆಗೆ ಹೋಗಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ನವೀನ್ ಮೃತದೇಹ ತರುವ ಪ್ರತ್ನ ನಡೆಯುತ್ತಿದೆ:
ಉಕ್ರೇನ್ನಲ್ಲಿ ಮೃತಪಟ್ಟಿರುವ ಹಾವೇರಿಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
ಸದ್ಯ ಉಕ್ರೇನ್ನಲ್ಲಿ ಬಾಂಬಿಂಗ್ ನಡೆಯುತ್ತಿದೆ. ಬಾಂಬಿಂಗ್ ಸ್ಥಗಿತಗೊಂಡ ಬಳಿಕ ಏರ್ಲಿಫ್ಟ್ ಮಾಡಲಾಗುವುದು. ಉಕ್ರೇನ್ನಲ್ಲಿರುವ ಭಾರತೀಯರ ಸ್ಥಳಾಂತರ ಅಂತಿಮ ಹಂತಕ್ಕೆ ಬಂದಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications