ಸೆಪ್ಟೆಂಬರ್ 3ನೇ ವಾರದಲ್ಲಿ ಸಂಪುಟ ವಿಸ್ತರಣೆ, ಮತ್ತೆ ಶುರುವಾಯ್ತು ಲಾಭಿ
ಬೆಂಗಳೂರು, ಸೆಪ್ಟೆಂಬರ್ 01: ನಿನ್ನೆ ನಡೆದ ಸಮ್ಮಿಶ್ರ ಸರ್ಕಾರದ ಮೂರನೇ ಸಮನ್ವಯ ಸಮಿತಿ ಸಭೆಯಲ್ಲಿ ಸಂಪುಟ ವಿಸ್ತರಣೆ ಕೊನೆಗೂ ಅಸ್ತು ಎನ್ನಲಾಗಿದೆ.
ಸೆಪ್ಟೆಂಬರ್ ಮೂರನೇ ವಾರದಷ್ಟರಲ್ಲಿ ಹೊಸ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಎರಡೂ ಪಕ್ಷದ ಸಮಿತಿಯ ಸದಸ್ಯರು ಒಪ್ಪಿಗೆ ನೀಡಿದ್ದಾರೆ.
ಪ್ರಸ್ತುತ ಕಾಂಗ್ರೆಸ್ ಬಳಿ ಆರು ಸಚಿವ ಸ್ಥಾನಗಳು ಬಾಕಿ ಇದ್ದು. ಆ ಆರು ಸ್ಥಾನಗಳಿಗಾಗಿ ಅದರ ಎರಡರಷ್ಟು ಜನ ಲಾಭಿಗೆ ಇಳಿದಿದ್ದಾರೆ. ಆದರೆ ಜೆಡಿಎಸ್ಗೆ ಈ ಸಮಸ್ಯೆ ಇಲ್ಲ.
ನಿನ್ನೆಯಷ್ಟೆ ಸಿದ್ದರಾಮಯ್ಯ ಅವರು 'ಕೇಳಿದವರನ್ನೆಲ್ಲಾ ಸಚಿವರನ್ನು ಮಾಡಲು ಆಗುತ್ತದೇನ್ರಿ?' ಎನ್ನುವ ಮೂಲಕ ಸಚಿವ ಸ್ಥಾನಕ್ಕೆ ಲಾಭಿ ಮಾಡುವ ಶಾಸಕರಿಗೆ ಮಾತಿನ ಪೆಟ್ಟು ನೀಡಿದ್ದಾರೆ.

ಡಜನ್ಗೂ ಹೆಚ್ಚು ಆಕಾಂಕ್ಷಿಗಳು
ಡಜನ್ಗೂ ಹೆಚ್ಚು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಅವರಲ್ಲಿ ಕೆಲವರು ಅರ್ಹತೆ ಆಧಾರದ ಮೇಲೆ ಲಾಭಿ ಮಾಡಿದರೆ, ಇನ್ನು ಕೆಲವರು ಜಾತಿ, ಧರ್ಮ, ಪ್ರಾಂತ್ಯದ ಆಧಾರದ ಮೇಲೆ ಸಚಿವ ಸ್ಥಾನಕ್ಕೆ ಲಾಭಿ ಮಾಡುತ್ತಿದ್ದಾರೆ.

ಎಂಬಿ ಪಾಟೀಲ್ ಗೆ ಸಚಿವ ಸ್ಥಾನ ಪಕ್ಕಾ
ಮೊದಲ ಬಾರಿ ಸಂಪುಟ ವಿಸ್ತರಣೆ ಆದಾಗ ಸಚಿವ ಸ್ಥಾನ ವಂಚಿತರಾಗಿದ್ದ ಎಂಬಿ ಪಾಟೀಲ್ ಪಕ್ಷದ ವಿರುದ್ಧ ಬಂಡಾಯ ಏಳುವ ಸೂಚನೆ ನೀಡಿದ್ದರು. ಹೈಕಮಾಂಡ್ ನಿಂದ ಕೂಡ ಅವರಿಗೆ ಬುಲಾವ್ ಬಂದಿತ್ತು. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ನ ಪ್ರಬಲ ಮುಖಂಡರಾಗಿ ಹೊರಹೊಮ್ಮುತ್ತಿರುವ ಎಂಬಿ ಪಾಟೀಲ್ ಅವರಿಗೆ ಈ ಬಾರಿ ಸಚಿವ ಸ್ಥಾನ ಪಕ್ಕಾ ಎನ್ನಲಾಗುತ್ತಿದೆ.

ರೇಸ್ನಲ್ಲಿರುವ ಪ್ರಮುಖರು
ಸಚಿವ ಸ್ಥಾನ ಆಕಾಂಕ್ಷಿ ಪಟ್ಟಿಯಲ್ಲಿ ಮೊದಲ ಹೆಸರು ಎಂ.ಬಿ.ಪಾಟೀಲ್ ಅವರದ್ದಿದೆ. ಆ ನಂತರ ಎಚ್.ಕೆ.ಪಾಟೀಲ್ ಅವರ ಹೆಸರು ಕೇಳಿಬರುತ್ತಿದೆ. ಸತೀಶ್ ಜಾರಕಿಹೊಳಿ, ಆನಂದ್ ಸಿಂಗ್, ಬಿಸಿ ಪಾಟೀಲ್ ಸಹ ಪ್ರಮುಖರು. ಇನ್ನುಳಿದಂತೆ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜು, ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಎನ್ಎ ಹ್ಯಾರಿಸ್, ತನ್ವೀರ್ ಸೇಠ್ ಸಚಿವ ಸ್ಥಾನದ ರೇಸಿನಲ್ಲಿದ್ದಾರೆ. ರಮೇಶ್ ಜಾರಕಿಹೊಳಿ ಸಹ ಕೆಲವು ಆಪ್ತ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ಯತ್ನಿಸುತ್ತಿದ್ದಾರೆ.

ಉತ್ತರ ಕರ್ನಾಟಕ್ಕೆ ಅವಕಾಶ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಸ್ಥಾನಮಾನ ಕೇಳಿದ್ದ ಕಾರಣ ಈ ಬಾರಿ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ದಟ್ಟವಾಗಿದೆ. ಎಂಬಿ ಪಾಟೀಲ್, ಎಚ್.ಕೆ.ಪಾಟೀಲ್ ಜೊತೆಗೆ ಮತ್ತೊಬ್ಬ ಉತ್ತರ ಕರ್ನಾಟಕ ಶಾಸಕರಿಗೆ ಸಚಿವ ಕುರ್ಚಿ ದೊರಕುವ ಸಾಧ್ಯತೆ ಇದೆ.

ವೇಣುಗೋಪಾಲ್ ಇಂದು ಸಭೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಅಧ್ಯಕ್ಷರ ಜೊತೆ ಈ ಬಗ್ಗೆ ಪ್ರಮುಖ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications