ನ್ಯಾಯಮೂರ್ತಿ ಭಕ್ತವತ್ಸಲ ಆಯೋಗದ 3 ಶಿಫಾರಸ್ಸುಗಳಿಗೆ ಸಂಪುಟ ಒಪ್ಪಿಗೆ
ಬೆಂಗಳೂರು ಅಕ್ಟೋಬರ್ 6: ನ್ಯಾಯಮೂರ್ತಿ ಭಕ್ತವತ್ಸಲ ಆಯೋಗದ 3 ಶಿಫಾರಸಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ನ್ಯಾಯಮೂರ್ತಿ ಕೆ ಭಕ್ತವತ್ಸಲ ಆಯೋಗದ ಶಿಫಾರಸಿನಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ಶೇ 33 ಮೀಸಲಾತಿಯನ್ನು ನೀಡಲು ಕರ್ನಾಟಕ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಇದರಿಂದ ಒಬಿಸಿಗಳಿಗೆ ಶೇ 33ರಷ್ಟು ಮೀಸಲಾತಿ ಜಾರಿಯಾಗಲಿದೆ.
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಸುವ ಸಲುವಾಗಿ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಡಾ ಜಸ್ಟೀಸ್ ಕೆ, ಭಕ್ತವತ್ಸಲ ಆಯೋಗದ ಮೂರು ಶಿಫಾರಸಿಗಳಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

ಒಬಿಸಿಗಳಿಗೆ ಶೇ 33 ಮೀಸಲಾತಿ ಸೇರಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಸ್ಥಾನಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಿರಿಸುವುದು ಮತ್ತು ಎಲ್ಲಾ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ಶಾಖೆಗಳನ್ನು ಡಿಪಿಎಆರ್ ಹತೋಟಿಗೆ ನೀಡಲು ಭಕ್ತವತ್ಸಲ ಮಾಡಿದ ಶಿಫಾರಸಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸಚಿವ ಸಂಪುಟದಲ್ಲಿ ಗುರುವಾರ ಈ ಬಗ್ಗೆ ಚರ್ಚೆ ನಡೆಡಿತು. ಐದು ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸುಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಒಪ್ಪಿಗೆಯನ್ನು ಸೂಚಿಸಿದೆ. ಆಯೋಗವು ಮಾಡಿದ ಇತರ ಎರಡು ಶಿಫಾರಸುಗಳನ್ನು ಕ್ಯಾಬಿನೆಟ್ ತಿರಸ್ಕರಿಸಿದೆ. ಅದರಲ್ಲಿ ಒಂದು ಒಬಿಸಿಗಳನ್ನು ಮರುವರ್ಗೀಕರಿಸುವುದು ಮತ್ತು ಮತ್ತೊಂದು ಮೇಯರ್ ಮತ್ತು ಉಪ ಮೇಯರ್ಗಳ ಅಧಿಕಾರಾವಧಿಯನ್ನು ಹೆಚ್ಚಿಸುವುದು.
ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಕಂಡುಹಿಡಿಯಲು ಆಯೋಗವನ್ನು ರಚಿಸಲಾಗಿದೆ. ಅದು ತನ್ನ ವರದಿಯನ್ನು 2022ರ ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿತ್ತು. ಅದನ್ನು ಸಚಿವ ಸಂಪುಟ ಅಂಗೀಕರಿಸಿತು.
ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ಮೂರನೇ ಒಂದು ಅಥವಾ 33 ಪ್ರತಿಶತ ಮೀಸಲಾತಿಯನ್ನು ಮುಂದುವರಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಹೇಳಿದರು. ಆಯೋಗವು ಐದು ಶಿಫಾರಸುಗಳನ್ನು ಮಾಡಿದ್ದು, ಮೂರು ಶಿಫಾರಸುಗಳನ್ನು ಸಂಪುಟ ಅನುಮೋದಿಸಿದೆ ಎಂದು ಪಾಟೀಲ್ ಹೇಳಿದರು.
ಬಿಬಿಎಂಪಿಯಲ್ಲಿ ಮೇಯರ್ ಮತ್ತು ಉಪಮೇಯರ್ ಕಚೇರಿಗಳನ್ನು ಒಬಿಸಿಗಳಿಗೆ ಮೀಸಲಿಡುವುದು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಪಿಎಆರ್ ವ್ಯಾಪ್ತಿಯಲ್ಲಿ ತರುವುದು ಸೇರಿದಂತೆ ಇತರ ಎರಡು ಶಿಫಾರಸುಗಳಿಗೆ ಸಂಪುಟ ಅನುಮೋದನೆ ನೀಡಿದೆ.
ಆದರೆ ಬಿಬಿಎಂಪಿಯಲ್ಲಿ ಮೇಯರ್ ಮತ್ತು ಉಪಮೇಯರ್ ಅವರ ಅಧಿಕಾರಾವಧಿಯನ್ನು 30 ತಿಂಗಳಿಗೆ ಪರಿಷ್ಕರಿಸುವ ಸಲುವಾಗಿ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಯ ಸೆಕ್ಷನ್ 10 ಅನ್ನು ತಿದ್ದುಪಡಿ ಮಾಡುವ ಆಯೋಗದ ಶಿಫಾರಸನ್ನು ಸರ್ಕಾರ ತಿರಸ್ಕರಿಸಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications