ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ!
ಬೆಂಗಳೂರು, 08: ಕೇಂದ್ರ ಸರ್ಕಾರ ಅನುಮೋದಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದ ಸಾಂಸ್ಕೃತಿಕ ಅವಶ್ಯಕತೆಗಳಿಗೆ ಒಗ್ಗೂಡುವ ರೀತಿಯಲ್ಲಿ ತಯಾರಿಸಲಾದ ರಾಜ್ಯದ ಕಾರ್ಯಪಡೆ ಸಲ್ಲಿಸಿರುವ ವರದಿಗೆ ಸಂಪುಟ ತಾತ್ವಿಕ ಅನುಮೋದನೆ ನೀಡಿದ್ದು, ಇದು ಶಾಲಾ ಶಿಕ್ಷಣದಲ್ಲಿ ಹೊಸ ಶಕೆಗೆ ನಾಂದಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಪುಟ ಅನುಮೋದನೆ ನೀಡಿದ ನಂತರ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಶಿಕ್ಷಣ ಆಯೋಗ ಸ್ಥಾಪನೆ ಸೇರಿದಂತೆ ಶಾಲಾ ಆಡಳಿತ, ನಿಯಂತ್ರಣ ನಿರ್ಣಯಗಳನ್ನು ತೆಗೆದುಕೊಳ್ಳುವಿಕೆ ಮತ್ತು ಶೈಕ್ಷಣಿಕ ಆಯಾಮಗಳ ಕುರಿತು ಮೌಲ್ಯಮಾಪನಗಳಿಗಾಗಿ ಸ್ವತಂತ್ರ ಸಂಸ್ಥೆಗಳನ್ನು ಸ್ಥಾಪನೆ ಸೇರಿದಂತೆ ಹಲವು ವೈಶಿಷ್ಟ್ಯಗಳ ಹಿನ್ನೆಲೆಯಲ್ಲಿ ಮಂದಿನ ದಿನಗಳಲ್ಲಿ ಶಾಲಾ ಶಿಕ್ಷಣದ ಚಿತ್ರಣವನ್ನೇ ಸಂಪೂರ್ಣವಾಗಿ ಪರಿವರ್ತಿಸಲಿದ್ದು, ಶಾಲಾಡಳಿತ ಮತ್ತು ಶೈಕ್ಷಣಿಕ ಆಯಾಮಗಳಲ್ಲಿ ಹೊಸ ಮನ್ವಂತರಕ್ಕೆ ಕಾರಣವಾಗಲಿದೆ ಎಂದಿದ್ದಾರೆ.

Recommended Video
ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆಕರ್ನಾಟಕ ಶಾಲಾ ಶಿಕ್ಷಣ ಕೌನ್ಸಿಲ್ (ಕೆಎಸ್ಇಸಿ) ಮತ್ತು ಸ್ಟೇಟ್ ಸ್ಕೂಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (ಎಸ್ಎಸ್ಎಸ್ಎ) ಸ್ಥಾಪನೆ, ಡಿಎಸ್ಇಆರ್ಟಿ ಪುನರ್ವಿನ್ಯಾಸ, ಆದರ್ಶ, ಮೊರಾರ್ಜಿ, ಕೆಜಿಬಿವಿ, ಕೆಪಿಎಸ್ ಮುಂತಾದ ಶಾಲಾ ಮಾದರಿಗಳನ್ನು ಶಾಲಾ ಸಂಕೀರ್ಣಗಳಾಗಿ ಬದಲಾವಣೆ, ವಿಶೇಷ ಶೈಕ್ಷಣಿಕ ವಲಯಗಳ -ಎಸ್ ಇ ಝಡ್ ಸ್ಥಾಪನೆ, ದಿವ್ಯಾಂಗ ವಿದ್ಯಾರ್ಥಿ ವೇತನ, ಶಿಕ್ಷಕರ ನೇಮಕಾತಿ, ಸೇವಾ ನಿಯಮಗಳು ಮತ್ತು ವೃತ್ತಿ ಪ್ರಗತಿಗಾಗಿ ಸೇವಾ ನಿಯಮಗಳ ಬದಲಾವಣೆ, ಗುರುಚೇತನ ಮಾದರಿಯನ್ನು ನಿರಂತರ ವೃತ್ತಿ ಅಭಿವೃದ್ಧಿಗಾಗಿ ವೇದಿಕೆಯನ್ನಾಗಿ ಬಳಸಿಕೊಳ್ಳವುದು ಸೇರಿದಂತೆ ಹಲವಾರು ಮಾರ್ಪಾಟುಗಳನ್ನು ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications