ಡಿ.22ಕ್ಕೆ ಸಂಪುಟ ವಿಸ್ತರಣೆ ಅಲ್ಲ, ಪುನಾರಚನೆ: ಸಚಿವರಿಗೆ ಆತಂಕ
Recommended Video

ಬೆಳಗಾವಿ, ಡಿಸೆಂಬರ್ 18: ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹೇಳಿರುವ ಮಾತು ಕಾಂಗ್ರೆಸ್ ಸಚಿವರು ಕೆಲವರಿಗೆ ನಡುಕ ಹುಟ್ಟಿಸಿದೆ.
ಡಿಸೆಂಬರ್ 22 ರಂದು ನಡೆಯುವುದು ಸಂಪುಟ ವಿಸ್ತರಣೆ ಅಲ್ಲ ಸಂಪುಟ ಪುನಾರಚನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಮಾತಿನ ಒಳ ಅರ್ಥ ಕೆಲವು ಸಚಿವರು ತಮ್ಮ ಸ್ಥಾನ ಕಳೆದುಕೊಂಡು ಹೊಸಬರಿಗೆ ಸ್ಥಳ ಬಿಟ್ಟುಕೊಡಲಿದ್ದಾರೆ.
ಸಚಿವ ಸ್ಥಾನ ಕಳೆದುಕೊಳ್ಳುವ ಪಟ್ಟಿಯಲ್ಲಿ ಮೊದಲ ಹೆಸರು ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿದ್ದು, ಅವರ ಅಶಿಸ್ತನ್ನು ಮುಂದೆ ಇಟ್ಟುಕೊಂಡು ಕೆಪಿಸಿಸಿ ಈ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ರಾಹುಲ್ ಗಾಂಧಿ ಅವರೇ ಈ ನಿಯಮ ಪಾಲಿಸುವಂತೆ ಕೆಪಿಸಿಸಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಉತ್ತಮ ಪ್ರದರ್ಶನ ತೋರದ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಸ್ಥಾನ ನೀಡುವಂತೆ ಅವರೇ ಹೇಳಿದ್ದಾರೆ.

ಪರಮೇಶ್ವರ್ ಸಹ ಒಂದು ಖಾತೆ ಬಿಡಬೇಕು?
ಎರಡೆರಡು ಖಾತೆಯನ್ನು ಹೊಂದಿರುವ ಕಾಂಗ್ರೆಸ್ ಸಚಿವರಿಂದ ಒಂದು ಖಾತೆಯನ್ನು ವಾಪಸ್ ಪಡೆದು ಹೊಸಬರಿಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. ಉಪಮುಖ್ಯಮಂತ್ರಿಗಳು ಸಹ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನವನ್ನು ಬಿಟ್ಟುಕೊಡಬೇಕಾಗಿ ಬಂದಿದೆ ಎಂದು ಮೂಲಗಳು ಹೇಳುತ್ತಿವೆ.

ಶಿವಾನಂದ ಪಾಟೀಲ್ ಸ್ಥಾನಕ್ಕೆ ಕುತ್ತು ಸಾಧ್ಯತೆ?
ಕಾಂಗ್ರೆಸ್ನ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಆರೋಗ್ಯ ಮಂತ್ರಿ ಸಹ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅವರ ಪ್ರದರ್ಶನ ಕೆಪಿಸಿಸಿಗೆ ತೃಪ್ತಿ ತಂದಿಲ್ಲವಾದ ಕಾರಣ ಅವರನ್ನು ಬದಲಾಯಿಸುವ ನಿರ್ಣಯ ಕೈಗೊಳ್ಳುವ ಸಾಧ್ಯತೆ ಸಹ ಇದೆ.

ಸಂಪುಟಕ್ಕೆ ಮತ್ತೊಬ್ಬ ಮಹಿಳೆ
ಸಂಪುಟಕ್ಕೆ ಮಹಿಳೆ ಒಬ್ಬರನ್ನು ಸೇರಿಸಿಕೊಳ್ಳಬೇಕು ಎಂಬ ಉದ್ದೇಶ ಕೆಪಿಸಿಸಿಗೆ ಇದ್ದು, ಜಯಮಾಲಾ ಅವರ ಬಳಿ ಇರುವ ಎರಡು ಖಾತೆಗಳಲ್ಲಿ ಒಂದನ್ನು ಹಿಂಪಡೆಯಲಾಗುತ್ತದೆ. ಅರಣ್ಯ ಸಚಿವ ಆರ್.ಶಂಕರ್ ಅವರ ಸಚಿವ ಸ್ಥಾನದ ಮೇಲೆಯೂ ಕತ್ತಿ ತೂಗುತ್ತಿದೆ ಎನ್ನಲಾಗಿದೆ.

ಡಿಸೆಂಬರ್ 22 ಸಂಪುಟ ವಿಸ್ತರಣೆ ಪಕ್ಕಾ
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಪಕ್ಕಾ ಎಂದು ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಇಬ್ಬರೂ ಹೇಳಿದ್ದಾರೆ. ಅಂದೇ ನಿಗಮ ಮಂಡಳಿಗಳಿಗೂ ನೇಮಕಾತಿ ಅಂತಿಮವಾಗಲಿದೆ. ಅತೃಪ್ತ ಶಾಸಕರು ಬಂಡಾಯ ಏಳದಂತೆ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಮುಖಂಡರು ಯತ್ನಿಸುತಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ












Click it and Unblock the Notifications