ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ ಮೇಲೆ ಕಣ್ಣು?
ಬೆಂಗಳೂರು, ಜೂನ್ 20: ಸಿದ್ದರಾಮಯ್ಯ ಅವರು ಕೊನೆಗೂ ತಮ್ಮ ಸಚಿವ ಸಂಪುಟ ಪುನರ್ ರಚನೆ ಮಾಡಿ 13 ಹೊಸ ಮುಖಗಳನ್ನು ಸೇರಿಸಿಕೊಂಡಿದ್ದಾರೆ. ಹಿರಿಯರಾದ ಕಾಗೋಡು ತಿಮ್ಮಪ್ಪ, ಕಿರಿಯರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ಜಾತಿ, ಪ್ರದೇಶ ಹಾಗೂ ಪ್ರಭಾವ ಎಲ್ಲಾ ರೀತಿಯಿಂದಲೂ ಸಮತೋಲನ ಆಯ್ಕೆ ಮಾಡಿಕೊಂಡು ಗೆದ್ದಿದ್ದಾರೆ. ಸಿದ್ದರಾಮಯ್ಯ ಅವರ ಮುಂದಿರುವ ಮುಂದಿನ ಪರೀಕ್ಷೆ ಖಾತೆ ಹಂಚಿಕೆ.
ಭಾನುವಾರ ಸಂಜೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ ಖಾತೆ ಹಂಚಿಕೆ ಪಟ್ಟಿ ಸಿದ್ಧಪಡಿಸಿದ್ದರು ಎನ್ನಲಾಗಿದೆ. ಆದರೆ, ಕಾವೇರಿ ಅಧಿಕೃತ ನಿವಾಸದಲ್ಲಿ ನೂತನ ಸಚಿವರುಗಳ ಜೊತೆ ಒಂದು ಸುತ್ತಿನ ಸಂಪುಟ ಸಭೆ ನಡೆಸಿದ್ದು ಬಿಟ್ಟರೆ ಖಾತೆ ಹಂಚಿಕೆ ಬಗ್ಗೆ ಇನ್ನೂ ಘೋಷಣೆ ಆಗಿಲ್ಲ.
ಆದರೆ, ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲ ಇದ್ದೇ ಇದೆ. ಈಗಾಗಲೇ ಹೊಸ ಸಚಿವರುಗಳು ತಮಗೆ ಬೇಕಾದ ಖಾತೆ ಬಗ್ಗೆ ಅಲ್ಲಲ್ಲಿ ಸುಳಿವು ನೀಡಿದ್ದಾರೆ. ಹಾಗೆ ಕಿವಿಗೆ ಬಿದ್ದ ಗಾಳಿಸುದ್ದಿ ಇಲ್ಲಿದೆ ಓದಿಕೊಳ್ಳಿ.[ಸಚಿವ ಸಂಪುಟಕ್ಕೆ 13 ಹೊಸಮುಖಗಳ ಸೇರ್ಪಡೆ]
9 ಮಂದಿ ಕ್ಯಾಬಿನೆಟ್ ಸಚಿವರಾಗಿ ಹಾಗೂ 4 ಮಂದಿ ಸ್ವತಂತ್ರ ಖಾತೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ 12 ಮಂದಿ ವಿಧಾನ ಸಭಾ ಸದಸ್ಯರು ಹಾಗೂ ಒಬ್ಬರು ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.[ಮೊದಲ ಬಾರಿಗೆ ಸಚಿವರಾದ ಏಳು ಶಾಸಕರು]
ಕ್ಯಾಬಿನೆಟ್ ಸಚಿವರು: ಕಾಗೋಡು ತಿಮ್ಮಪ್ಪ, ಕೆ.ಆರ್. ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ಎಚ್.ವೈ. ಮೇಟಿ, ತನ್ವೀರ್ ಸೇಠ್, ಎಸ್.ಎಸ್. ಮಲ್ಲಿಕಾರ್ಜುನ, ಎಂ.ಆರ್. ಸೀತಾರಾಂ, ಸಂತೋಷ್ ಲಾಡ್ ಹಾಗೂ ರಮೇಶ್ ಲಕ್ಷ್ಮಣ ಜಾರಕಿಹೊಳಿ.[ಸಂಪುಟ ವಿಸ್ತರಣೆ:1 ಕಲ್ಲಿನಲ್ಲಿ 5 ಹಕ್ಕಿ ಹೊಡೆದ ಸಿದ್ದು ಚಾಣಾಕ್ಷತನ!]
ಸ್ವತಂತ್ರ ಖಾತೆಯ ರಾಜ್ಯ ಸಚಿವರು: ಪ್ರಿಯಾಂಕ ಎಂ. ಖರ್ಗೆ, ರುದ್ರಪ್ಪ ಲಮಾಣಿ, ಈಶ್ವರ ಖಂಡ್ರೆ ಹಾಗೂ ಪ್ರಮೋದ್ ಮಧ್ವರಾಜ್ [ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ರಮ್ಯಾ?]

ಯಾರು ಯಾವ ಖಾತೆ ಬಯಸಿದ್ದಾರೆ? ಯಾರಿಗೆ ಯಾವ ಖಾತೆ ಸಿಗಬಹುದು?
* ಪ್ರಮೋದ್ ಮಧ್ವರಾಜ್ (ಉಡುಪಿ)- ಮೀನುಗಾರಿಕೆ ಹಾಗೂ ಬಂದರು
* ಕಾಗೋಡು ತಿಮ್ಮಪ್ಪ (ಸಾಗರ)- ಕಂದಾಯ
* ರಮೇಶ್ ಕುಮಾರ್ (ಶ್ರೀನಿವಾಸಪುರ)- ಕೃಷಿ
* ತನ್ವೀರ್ ಸೇಠ್ (ನರಸಿಂಹರಾಜ)- ವಕ್ಫ್, ಮುನ್ಸಿಪಾಲಿಟಿ ಹಾಗೂ ಸ್ಥಳೀಯ ಸಂಸ್ಥೆ
* ಎಸ್ ಎಸ್ ಮಲ್ಲಿಕಾರ್ಜುನ (ದಾವಣಗೆರೆ ಉತ್ತರ)- ಯುವ ಮತ್ತು ಕ್ರೀಡಾ ಖಾತೆ
ಸಿದ್ದು ಸಂಪುಟ : ಯಾರಿಗೆ ಯಾವ ಖಾತೆ ಸಿಗಬಹುದು?
* ಬಸವರಾಜ ರಾಯರೆಡ್ಡಿ (ಯಲಬುರ್ಗಾ)-ಪ್ರಾಥಮಿಕ ಶಿಕ್ಷಣ
* ಈಶ್ವರ ಖಂಡ್ರೆ (ಭಾಲ್ಕಿ)- ಸಣ್ಣ ನೀರಾವರಿ
* ಪ್ರಿಯಾಂಕ್ ಖರ್ಗೆ (ಚಿತ್ತಾಪುರ)- ಆಹಾರ ಮತ್ತು ನಾಗರಿಕ ಸರಬರಾಜು
* ಸಂತೋಷ್ ಲಾಡ್ (ಕಲಘಟಗಿ)- ಕಾರ್ಮಿಕ ಖಾತೆ
* ಜಾರಕಿಹೊಳಿ ರಮೇಶ್ ಲಕ್ಷ್ಮಣರಾವ್ (ಗೋಕಾಕ)- ಅಬಕಾರಿ
* ಎಂಆರ್ ಸೀತಾರಾಮ್ (ಬೆಂಗಳೂರು ಸಿಟಿ, ಶಾಸಕ)- ನಗರಾಭಿವೃದ್ಧಿ
(ಒನ್ ಇಂಡಿಯಾ ಸುದ್ದಿ)
-
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications