ಟ್ರಾಯ್ ದರ ನೀತಿಗೆ ವಿರೋಧ: ನಾಳೆ ರಾಜ್ಯದಾದ್ಯಂತ ಕೇಬಲ್ ಟಿವಿ ಬಂದ್
ಬೆಂಗಳೂರು, ಜನವರಿ 23: ಟ್ರಾಯ್ ಜಾರಿಗೆ ತರುತ್ತಿರುವ ಹೊಸ ಕೇಬಲ್ ನೀತಿಯನ್ನು ವಿರೋಧಿಸಿ ರಾಜ್ಯ ಕೇಬಲ್ ಟಿವಿ ಆಪರೇಟರ್ ನಾಳೆ ಪ್ರತಿಭಟನೆ ಮಾಡಲಿದ್ದು, ನಾಳೆ ಬೆಳಿಗ್ಗೆಯಿಂದ ಸಂಜೆ ವರೆಗೂ ಕೇಬಲ್ ಟಿವಿ ಬಂದ್ ಆಗಲಿವೆ.
ಬೆಳಿಗ್ಗೆ 6 ಗಂಟೆ ಇಂದ ರಾತ್ರಿ 10 ಗಂಟೆ ವರೆಗೂ ಟಿವಿಗಳಲ್ಲಿ ಕೇಬಲ್ ಸೆಟ್ಅಪ್ ಬಾಕ್ಸ್ ಹೊಂದಿದ ಮನೆಗಳ ಟಿವಿಯಲ್ಲಿ ಯಾವುದೇ ಚಾನೆಲ್ಗಳು ಬರುವುದಿಲ್ಲ. ಕರ್ನಾಟಕ ಮಾತ್ರವಲ್ಲದೆ ಆಂದ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡುಗಳಲ್ಲೂ ನಾಳೆ ಕೇಬಲ್ ಬಂದ್ ಆಗಲಿದೆ.
ಟ್ರಾಯ್ ಹೊಸ ಕೇಬಲ್ ದರ ನೀತಿಯನ್ನು ಫೆಬ್ರವರಿ ಒಂದರಿಂದ ಜಾರಿಗೆ ತರಲಲಿದೆ. ಹೊಸ ನೀತಿಯು ಜಾರಿಗೆ ಬಂದಲ್ಲಿ ಗ್ರಾಹಕ ತನಗೆ ಇಷ್ಟವಾದ ಚಾನೆಲ್ಗೆ ಮಾತ್ರವೇ ಹಣ ನೀಡಿ ನೋಡಬಹುದಾಗಿದೆ. ಇದು ಕೇಬಲ್ ಆಪರೇಟರ್ಗಳಿಗೆ ಆದಾಯ ಕಡಿಮೆ ಮಾಡುವ ಜೊತೆಗೆ ಶ್ರಮ ಹೆಚ್ಚಿಸುತ್ತದೆ ಎನ್ನಲಾಗುತ್ತಿದೆ. ಜೊತೆಗೆ ಗ್ರಾಹಕರಿಗೂ ಇದು ಹೊರೆಯಾಗುತ್ತದೆ ಕೇಬಲ್ ಟಿವಿ ಆಪರೇಟರ್ಗಳು ಹೇಳಿದ್ದಾರೆ.

ದೇಶದ ಕೆಲವು ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲೆಂದು ಹೊಸ ನೀತಿಯನ್ನು ಸರ್ಕಾರ ಹೇರಲು ಹೊರಟಿದೆ. ಸರ್ಕಾರವು 18% ತೆರಿಗೆಯನ್ನು ಕೇಬಲ್ ಉದ್ಯಮದ ಮೇಲೆ ಹೊರಿಸಿದೆ, ಈ ಉದ್ಯಮವು ಸರ್ಕಾರದ ಸಹಾಯವಿಲ್ಲದೆ ದಶಕಗಳಿಂದ ನಡೆದುಕೊಂಡು ಬಂದಿದೆ ಆದರೆ ಈಗ ಉದ್ಯಮವನ್ನೇ ನಾಶ ಮಾಡಲು ಸರ್ಕಾರ ಹೊರಟಿದೆ. ಕೇಬಲ ಉದ್ಯಮವನ್ನೇ ನಂಬಿಕೊಂಡಿರುವ ಹಲವು ಕುಟುಂಬಗಳು ಬೀದಿ ಪಾಲಾಗಲಿವೆ ಎಂದು ರಾಜ್ಯ ಕೇಬಲ್ ಸಂಘ ಹೇಳಿದೆ.
ಟ್ರಾಯ್ ನೀತಿಗಳ ವಿರುದ್ಧ ಕೇಬಲ್ ಆಪರೇಟರ್ಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ ಆದರೆ ಅಲ್ಲಿಯೂ ಅವರಿಗೆ ಹಿನ್ನಡೆ ಆಗಿದೆ. ಆದರೆ ಸುಪ್ರಿಂ ತೀರ್ಪನ್ನು ಮರುಪರಿಶೀಲನೆಗೆ ಅರ್ಜಿ ಹಾಕಿ ಕಾನೂನು ಹೋರಾಟ ಮುಂದುವರೆಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications