ಟ್ರಾಯ್ ದರ ನೀತಿಗೆ ವಿರೋಧ: ನಾಳೆ ರಾಜ್ಯದಾದ್ಯಂತ ಕೇಬಲ್ ಟಿವಿ ಬಂದ್
ಬೆಂಗಳೂರು, ಜನವರಿ 23: ಟ್ರಾಯ್ ಜಾರಿಗೆ ತರುತ್ತಿರುವ ಹೊಸ ಕೇಬಲ್ ನೀತಿಯನ್ನು ವಿರೋಧಿಸಿ ರಾಜ್ಯ ಕೇಬಲ್ ಟಿವಿ ಆಪರೇಟರ್ ನಾಳೆ ಪ್ರತಿಭಟನೆ ಮಾಡಲಿದ್ದು, ನಾಳೆ ಬೆಳಿಗ್ಗೆಯಿಂದ ಸಂಜೆ ವರೆಗೂ ಕೇಬಲ್ ಟಿವಿ ಬಂದ್ ಆಗಲಿವೆ.
ಬೆಳಿಗ್ಗೆ 6 ಗಂಟೆ ಇಂದ ರಾತ್ರಿ 10 ಗಂಟೆ ವರೆಗೂ ಟಿವಿಗಳಲ್ಲಿ ಕೇಬಲ್ ಸೆಟ್ಅಪ್ ಬಾಕ್ಸ್ ಹೊಂದಿದ ಮನೆಗಳ ಟಿವಿಯಲ್ಲಿ ಯಾವುದೇ ಚಾನೆಲ್ಗಳು ಬರುವುದಿಲ್ಲ. ಕರ್ನಾಟಕ ಮಾತ್ರವಲ್ಲದೆ ಆಂದ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡುಗಳಲ್ಲೂ ನಾಳೆ ಕೇಬಲ್ ಬಂದ್ ಆಗಲಿದೆ.
ಟ್ರಾಯ್ ಹೊಸ ಕೇಬಲ್ ದರ ನೀತಿಯನ್ನು ಫೆಬ್ರವರಿ ಒಂದರಿಂದ ಜಾರಿಗೆ ತರಲಲಿದೆ. ಹೊಸ ನೀತಿಯು ಜಾರಿಗೆ ಬಂದಲ್ಲಿ ಗ್ರಾಹಕ ತನಗೆ ಇಷ್ಟವಾದ ಚಾನೆಲ್ಗೆ ಮಾತ್ರವೇ ಹಣ ನೀಡಿ ನೋಡಬಹುದಾಗಿದೆ. ಇದು ಕೇಬಲ್ ಆಪರೇಟರ್ಗಳಿಗೆ ಆದಾಯ ಕಡಿಮೆ ಮಾಡುವ ಜೊತೆಗೆ ಶ್ರಮ ಹೆಚ್ಚಿಸುತ್ತದೆ ಎನ್ನಲಾಗುತ್ತಿದೆ. ಜೊತೆಗೆ ಗ್ರಾಹಕರಿಗೂ ಇದು ಹೊರೆಯಾಗುತ್ತದೆ ಕೇಬಲ್ ಟಿವಿ ಆಪರೇಟರ್ಗಳು ಹೇಳಿದ್ದಾರೆ.

ದೇಶದ ಕೆಲವು ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲೆಂದು ಹೊಸ ನೀತಿಯನ್ನು ಸರ್ಕಾರ ಹೇರಲು ಹೊರಟಿದೆ. ಸರ್ಕಾರವು 18% ತೆರಿಗೆಯನ್ನು ಕೇಬಲ್ ಉದ್ಯಮದ ಮೇಲೆ ಹೊರಿಸಿದೆ, ಈ ಉದ್ಯಮವು ಸರ್ಕಾರದ ಸಹಾಯವಿಲ್ಲದೆ ದಶಕಗಳಿಂದ ನಡೆದುಕೊಂಡು ಬಂದಿದೆ ಆದರೆ ಈಗ ಉದ್ಯಮವನ್ನೇ ನಾಶ ಮಾಡಲು ಸರ್ಕಾರ ಹೊರಟಿದೆ. ಕೇಬಲ ಉದ್ಯಮವನ್ನೇ ನಂಬಿಕೊಂಡಿರುವ ಹಲವು ಕುಟುಂಬಗಳು ಬೀದಿ ಪಾಲಾಗಲಿವೆ ಎಂದು ರಾಜ್ಯ ಕೇಬಲ್ ಸಂಘ ಹೇಳಿದೆ.
ಟ್ರಾಯ್ ನೀತಿಗಳ ವಿರುದ್ಧ ಕೇಬಲ್ ಆಪರೇಟರ್ಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ ಆದರೆ ಅಲ್ಲಿಯೂ ಅವರಿಗೆ ಹಿನ್ನಡೆ ಆಗಿದೆ. ಆದರೆ ಸುಪ್ರಿಂ ತೀರ್ಪನ್ನು ಮರುಪರಿಶೀಲನೆಗೆ ಅರ್ಜಿ ಹಾಕಿ ಕಾನೂನು ಹೋರಾಟ ಮುಂದುವರೆಸಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications