ಪತಿ ಕಪ್ಪು ಬಣ್ಣದವನೆಂದು ಜರಿಯುವುದೂ ಕ್ರೌರ್ಯ; ಹೈಕೋರ್ಟ್
ಬೆಂಗಳೂರು, ಆಗಸ್ಟ್ 09: ಪತಿಯನ್ನು ಸದಾ ಕಪ್ಪು ಚರ್ಮದವನು ಎಂದು ಸಂಭೋದಿಸುವುದೂ ಕೂಡ ಮಾನಸಿಕ ಕ್ರೌರ್ಯವಾಗಲಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಸದಾ ಹಾಗೆ ಅವಮಾನಿಸುತ್ತಿದ್ದ ಪತ್ನಿಯ ಧೋರಣೆಯನ್ನು 'ಕ್ರೌರ್ಯ' ವೆಂದು ಪರಿಗಣಿಸಿರುವ ಆಕೆಯಿಂದ ಪತಿಯ ಮದುವೆ ಅಸಿಂಧುಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ.
ಕೌಟುಂಬಿಕ ನ್ಯಾಯಾಲಯದ ವಿಚ್ಛೇದನ ಮಂಜೂರಾತಿಗೆ ನಿರಾಕರಿಸಿದ್ದನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿರುವ ನ್ಯಾ. ಅಲೋಕ್ ಅರಾಧೆ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಪತಿಗೆ ವಿಚ್ಛೇದನ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಿತು. ಜತೆಗೆ, ಪತಿಯ ಮೇಲ್ಮನವಿ ಪುರಸ್ಕರಿಸಿ ವಿವಾಹ ಅನೂರ್ಜಿತಗೊಳಿಸಿ ವಿಚ್ಛೇದನ ನೀಡಿದೆ.

ಪ್ರಕರಣದಲ್ಲಿ ಲಭ್ಯವಿರುವ ದಾಖಲೆಗಳನ್ನು ಆಳವಾಗಿ ಪರಿಶೀಲಿಸಿದಾಗ 'ಕಪ್ಪು ಚರ್ಮದವರು' ಎಂದು ಸದಾ ಹೇಳುವ ಮೂಲಕ ಪತಿಗೆ ಪತ್ನಿ ಅವಮಾನ ಮಾಡುತ್ತಿದ್ದರು. ಸಕಾರಣವಿಲ್ಲದಿದ್ದರೂ ಪತಿಯ ಜೊತೆ ಇರದೇ ಪತ್ನಿ ತವರು ಮನೆ ಸೇರಿದ್ದಾರೆ. ಆದರೆ, ಈ ವಿಷಯ ಮರೆಮಾಚಲು ಪತಿ ಮೇಲೆ ಅಕ್ರಮ ಸಂಬಂಧ ಕುರಿತು ಸುಳ್ಳು ಆರೋಪ ಹೊರಿಸಿದ್ದಾರೆ. ಇದು ನಿಸ್ಸಂದೇಹವಾಗಿ ಕ್ರೌರ್ಯ ಆಗಲಿದೆ ಎಂದು ನ್ಯಾಯಾಲಯ ಹೇಳಿದೆ.
ಹೈಕೋರ್ಟ್ ಆದೇಶವೇನು?; ಪತಿಯ ಅಕ್ರಮ ಸಂಬಂಧ ಕುರಿತಂತೆ ಪತ್ನಿ ಆಧಾರ ರಹಿತ ಆರೋಪ ಮಾಡಿದ್ದಾರೆ. ಇಂತಹ ಆರೋಪ ಮಾಡುವುದರಿಂದ ಅಪರಿಮಿತ ಮಾನಸಿಕ ಹಿಂಸೆ (ಕ್ರೌರ್ಯ) ಉಂಟಾಗಲಿದೆ. ಇನ್ನೂ ಪತಿ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಹಲವು ಕ್ರಿಮಿನಲ್ ಕೇಸು ದಾಖಲಿಸಿದ್ದಾರೆ. ಹಲವು ವರ್ಷಗಳಿಂದ ಪತಿಯ ಸಂಪರ್ಕದಲ್ಲಿ ಇಲ್ಲದ ಪತ್ನಿ, ಪತಿಯೊಂದಿಗೆ ಸಹಬಾಳ್ವೆ ನಡೆಸಲು ಸಿದ್ಧಳಿದ್ದೇನೆ. ಆದರೆ, ಯಾವ ಕಾರಣಕ್ಕೂ ಅವರ ವಿರುದ್ಧ ದಾಖಲಿಸಿರುವ ದೂರು ಹಿಂಪಡೆಯವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಇದರಿಂದ ಪತಿಯೊಂದಿಗೆ ಮತ್ತೆ ಬಾಳುವ ಆಸಕ್ತಿ ಪತ್ನಿ ಇಲ್ಲವಾಗಿದ್ದು, ಅವರ ನಡುವೆ ದೊಡ್ಡ ಬಿರುಕು ಇರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ ಕ್ರೌರ್ಯದ ಆಧಾರದ ಮೇಲೆ ಪತಿಗೆ ವಿಚ್ಛೇದನ ನೀಡಬಹುದಾಗಿದೆ ಎಂದು ಆದೇಶದಲ್ಲಿ ಹೇಳಿದೆ. ಇದೇ ವೇಳೆ ಪತ್ನಿ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದರೆ ಕೌಟುಂಬಿಕ ನ್ಯಾಯಾಲಯ ಪರಿಶೀಲಿಸಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಆತ ಮತ್ತು ಆಕೆ 2007ರಲ್ಲಿ ಮದುವೆಯಾಗಿದ್ದರು. ಆದರೆ, 2012ರಲ್ಲಿ ವಿಚ್ಛೇದನ ಕೋರಿ ಪತಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸುವ ಮೂಲಕ ವಿಚ್ಛೇದನ ನಿರಾಕರಿಸಿ ಬೆಂಗಳೂರಿನ 2ನೇ ಹೆಚ್ಚುವರಿ ಪ್ರಧಾನ ಕೌಟುಂಬಿಕ ನ್ಯಾಯಾಲಯ 2017ರ ಜ.13ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಆತ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ವಿವಾಹದ ನಂತರ ಪತ್ನಿ ಸದಾ ನನ್ನನ್ನು ಕಪ್ಪು ಚರ್ಮದವರೆಂದು ಹೇಳುತ್ತಾ ಅವಮಾನಿಸುತ್ತಿದ್ದರು. ಮಗಳಿಗಾಗಿ ನಾನು ಆ ಅವಮಾನ ಸಹಿಕೊಳ್ಳುತ್ತಿದ್ದೆ. ಇದಲ್ಲದೇ ಪತ್ನಿ 2011ರ ಅ.29ರಂದು ನನ್ನ ಹಾಗೂ ವೃದ್ಧ ತಾಯಿ ಸೇರಿ ಕುಟುಂಬ ಸದಸ್ಯರೆಲ್ಲರ ವಿರುದ್ಧ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಆ ದೂರಿನ ಸಂಬಂಧ ಪೊಲೀಸರು ನನಗೆ ಸಾಕಷ್ಟು ಕಿರುಕುಳ ನೀಡಿದ್ದಾರೆ.
ಹಲವು ದಿನಗಳ ಕಾಲ ಪೊಲೀಸ್ ಠಾಣೆ ಮತ್ತು ಕೋರ್ಟ್ಗೆ ಅಲೆದಾಡುವಂತಾಯಿತು. ಬಳಿಕ ನನ್ನ ತೊರೆದು ತವರು ಮನೆ ಸೇರಿದ ಪತ್ನಿ ವಾಪಸ್ಸಾಗಲೇ ಇಲ್ಲ. ನನ್ನೊಂದಿಗೆ ದಾಂಪತ್ಯ ಜೀವನ ಮುಂದುವರಿಸಲು ಆಕೆ ಆಸಕ್ತಿ ಹೊಂದಿಲ್ಲ. ನನಗೆ ಉದ್ಯೋಗ ನೀಡಿದವರಿಗೂ ಪತ್ನಿ ದೂರು ನೀಡಿದ್ದರು. ಅವರು ನನ್ನನ್ನು ಕರೆದು ವಿವರಣೆ ಪಡೆದರು. ಪತ್ನಿಯ ನಡೆಯಿಂದ ನನಗೆ ಮಾನಸಿಕ ಯಾತನೆ ಉಂಟಾಯಿತು. ಅದರಿಂದ ನಾನು ಖಿನ್ನತೆಗೂ ಒಳಗಾದೆ. ಪತ್ನಿಯ ಎಸಗಿರುವ ಕ್ರೌರ್ಯ ಪರಿಗಣಿಸಿ ವಿಚ್ಛೇದನ ಮಂಜೂರು ಮಾಡಬೇಕು ಮೇಲ್ಮನವಿಯಲ್ಲಿ ಎಂದು ಪತಿ ಕೋರಿದ್ದರು.
ಮೇಲ್ಮನವಿ ವಜಾಗೊಳಿಸಲು ಕೋರಿದ್ದ ಪತ್ನಿ, ಪತಿ ಬೇರೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಅವರಿಗೆ ಮಗು ಸಹ ಜನಿಸಿದೆ. ಮೊದಲಿಗೆ ಗಂಡನ ಮನೆಯಲ್ಲಿಯೇ, ಅತ್ತೆ, ನಾದಿನಿ ಮತ್ತು ಮೈದುನ ಜೊತೆಗೆ ವಾಸವಾಗಿದ್ದೆ. 2011ರ ಏ.7ರಂದು ಪ್ರತ್ಯೇಕ ಮನೆ ಮಾಡಿದಾಗಲೂ ಗಂಡನ ಕುಟುಂಬ ಸದಸ್ಯರು ಮನೆಗೆ ಬರುತ್ತಿದ್ದರು. ಪತಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಠೋರವಾಗಿ ವರ್ತಿಸುತ್ತಿದ್ದರು. ನಿತ್ಯ ಮನೆಗೆ ತಡರಾತ್ರಿ ಬರುತ್ತಿದ್ದರು. ಮನೆಯಿಂದ ಹೊರ ಹೋಗಲು ಬಿಡುತ್ತಿರಲಿಲ್ಲ ಎಂದು ಪ್ರತ್ಯಾರೋಪ ಮಾಡಿದ್ದರು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications