Lok Sabha Election 2024: ಉತ್ತರ ಕರ್ನಾಟಕದಲ್ಲಿ ಲಿಂಗಾಯತರ ಮನವೊಲಿಸುವಲ್ಲಿ ಯಶಸ್ವಿಯಾಗುವುದೇ ಬಿಜೆಪಿ? ವರದಿ, ವಿಶ್ಲೇಷಣೆ
ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗಳು ಮುಗಿದಿದೆ. ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿ ಮತದಾನ ನಡೆಯಲಿದ್ದು, ಎಲ್ಲ ಪಕ್ಷಗಳ ಚಿತ್ತ ಈಗ ಉತ್ತರಕ್ಕೆ ಶಿಫ್ಟ್ ಆಗಿದೆ. ಅಲ್ಲದೆ ಮತಗಳನ್ನು ತಮ್ಮತ್ತ ಸೆಳೆಯಲು ಮಾಡಿಕೊಳ್ಳಲು ಬೇಕಾದ ತಂತ್ರವನ್ನು ರಾಷ್ಟ್ರೀಯ ಪಕ್ಷಗಳು ಮಾಡಿಕೊಳ್ಳುತ್ತಿವೆ. ಎಲ್ಲ ಪಕ್ಷಗಳು ಆ ಒಂದು ಸಮುದಾಯವನ್ನು ಟಾರ್ಗೆಟ್ ಮಾಡೋದು ಗ್ಯಾರಂಟಿ..
14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಅತಿ ದೊಡ್ಡ ಸಮುದಾಯ ಎಂದೇ ಗುರುತಿಸಿಕೊಂಡಿರುವ ಲಿಂಗಾಯತ ಸಮುದಾಯವನ್ನೇ ಎಲ್ಲ ಪಕ್ಷಗಳು ಟಾರ್ಗೆಟ್ ಮಾಡಲಿವೆ. ರಾಜ್ಯದಲ್ಲಿ ಶೇಕಡಾ 17 ರಷ್ಟು ಇದೇ ಸಮುದಾಯ ಜನರಿದ್ದಾರೆ. ಇವರನ್ನು ಬಿಟ್ಟರೆ ಒಕ್ಕಲಿಗರು ಹೆಚ್ಚಾಗಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಈ ಸಮುದಾಯದ ಪಾತ್ರ ಶೇಕಡಾ 12 ರಷ್ಟಿದೆ.

ಕಳೆದ ಬಾರಿ ಕ್ಲೀನ್ ಸ್ವೀಪ್ ಸಾಧನೆ
ಲಿಂಗಾಯತರು ಇತ್ತೀಚಿನ ಕೆಲವು ದಶಕಗಳಿಗೆ ಬಿಜೆಪಿ ಪಕ್ಷದತ್ತ ಮುಖ ಮಾಡಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರಿಂದ, ಉತ್ತರ ಕರ್ನಾಟಕದಲ್ಲಿ ಮೈತ್ರಿ ಎಷ್ಟರ ಮಟ್ಟಿಗೆ ಕೈ ಹಿಡಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಂದಹಾಗೆ 2019ರ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿತ್ತು.
ಲಿಂಗಾಯತ ಶಾಸಕರ ಸಂಖ್ಯೆ ಎಷ್ಟು?
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ 37 ಲಿಂಗಾಯತ ಶಾಸಕರು ಗೆದ್ದು ಬೀಗಿದ್ದಾರೆ. 2018ಕ್ಕೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಕೇವಲ 15 ಲಿಂಗಾಯತ ಅಭ್ಯರ್ಥಿಗಳು ಗೆದ್ದಿದ್ದರು. ಇನ್ನು ಒಟ್ಟಾರೆ ಲಿಂಗಾಯತ ಶಾಸಕರ ಸಂಖ್ಯೆಯು ಹೆಚ್ಚಾಗಿದ್ದು, ಇದರ ಲಾಭವನ್ನು ಪಕ್ಷಗಳು ಹೇಗೆ ಪಡೆಯಲಿವೆ ಎಂಬುದು ದೊಡ್ಡ ಪ್ರಶ್ನೆ ಆಗಿದೆ.
ಕರ್ನಾಟಕದ 224 ಕ್ಷೇತ್ರಗಳಲ್ಲಿ 90 ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯವೇ ಡಾಮಿನೆಟೆಡ್ ಇದೆ. ಇನ್ನು ಈ ಸಮುದಾಯ ಬಿಜೆಪಿಯಿಂದ ಕಾಂಗ್ರೆಸ್ ಕಡೆ ಮುಖ ಮಾಡಿರಲು ಹಲವು ಕಾರಣಗಳಿವೆ. ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಬಿಎಸ್ ಯಡಿಯೂರಪ್ಪ ಅವರನ್ನು ಸೈಡಲೈನ್ ಮಾಡಿದ್ದು, ಪಕ್ಷಕ್ಕೆ ಪೆಟ್ಟು ನೀಡಿದೆ. ಈಗ ಮತ್ತೆ ಬಿಜೆಪಿಯತ್ತ ಲಿಂಗಾಯತ ಸಮುದಾಯ ಮುಖ ಮಾಡಿದೆ. ದೇಶದ ವಿಚಾರಕ್ಕೆ ಬಂದಾಗ ಈ ಸಮುದಾಯ ಒಟ್ಟಾಗಿ ನಿಲ್ಲುವುದು ಕಳೆದ ಹಲವು ಚುನಾವಣೆಗಳಲ್ಲಿ ಎದ್ದು ಕಾಣುತ್ತದೆ. ಈಗ ರಣ ರಂಗದಲ್ಲಿ ಮತ್ತೆ ಬಿಎಸ್ ವೈ ಕಾಣಿಸಿಕೊಂಡಿದ್ದು, ಇವರ ಮಗನಿಗೂ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ.

ಕಾಂಗ್ರೆಸ್ ಪಕ್ಷ ಸೇರಿದ ಮುಖಂಡರು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನೀಡದೇ ಇರುವ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಪಕ್ಷಕ್ಕೆ ಕೊಂಚ ಪೆಟ್ಟು ಬಿದ್ದಿತ್ತು. ಆದರೆ ಈಗ ರಾಜಕೀಯ ಸಮೀಕರಣ ಬದಲಾಗಿದೆ. ಕಾಂಗ್ರೆಸ್ಗೆ ಕೈ ನೀಡಿರುವ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಬಾವುಟ ಹಿಡಿದಿದ್ದಾರೆ. ಅಲ್ಲದೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾಚುನಾವಣೆಯ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಜಗದೀಶ್ ಶೆಟ್ಟರ್ ಘರ್ ವಾಪಸಿಯಿಂದ ಪಕ್ಷದಲ್ಲಿ ಕಾಣಿಸಿಕೊಂಡಿದ್ದ ಸಣ್ಣ ಬಿರುಕು ಸಹ ಮುಚ್ಚಿದಂತೆ ಕಾಣುತ್ತದೆ. ಈ ಬಾರಿ ಬಿಜೆಪಿ ಕಳೆದ ಬಾರಿಯಂತೆ ಈ ಬಾಗದಲ್ಲಿ ಕ್ಲೀನ್ ಸ್ವೀಪ್ ಸಾಧನೆಯನ್ನು ಮಾಡಲು ಎದುರು ನೋಡುತ್ತಿದೆ. ಈ ಬಾರಿ ಬೆಳಗಾವಿ ಕ್ಷೇತ್ರದ ಮೂಲಕ ಮೊದಲ ಬಾರಿಗೆ ಲೋಕಸಭಾ ಪ್ರವೇಶಿಸಲು ಜಗದೀಶ್ ಶೆಟ್ಟರ ಎದುರು ನೋಡುತ್ತಿದ್ದಾರೆ.
ಎಷ್ಟು ಲಿಂಗಾಯತ ಅಭ್ಯರ್ಥಿಗಳು ಕಣದಲ್ಲಿ?
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 9 ಲಿಂಗಾಯತ ಅಭ್ಯರ್ಥಿಗಳಿಗೆ ಅವಕಾಶ ನೀಡಿದರೆ, ಮೂವರು ಒಕ್ಕಲಿಗರಿಗೆ ಚುನಾವಣೆ ಸ್ಪರ್ಧಿಸುವ ಅವಕಾಶ ನೀಡಿದೆ. ಈ ಅಂಕಿ ಅಂಶದಲ್ಲಿ ಕಾಂಗ್ರೆಸ್ ಕೊಂಚ ಹಿಂದೆ ಬಿದ್ದಿದೆ. ಕಾಂಗ್ರೆಸ್ 5 ಲಿಂಗಾಯತ, 6 ಒಕ್ಕಲಿಗರಿಗೆ ಅವಕಾಶ ನೀಡಿದೆ. ಇನ್ನು ಜೆಡಿಎಸ್ ಇಬ್ಬರು ಒಕ್ಕಲಿಗ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.
ಕಾಂಗ್ರೆಸ್ ಸಹ ಈ ಹಿಂದೆ ಅಹಿಂದ ಮತಗಳನ್ನು ತನ್ನತ್ತ ಸೆಳೆಯಲು ಬೇಕಾದ ಪ್ರಯತ್ನಗಳು ಮಾಡಿಕೊಂಡಿದೆ. ಅಂದಹಾಗೆ ಕಾಂಗ್ರೆಸ್ ಲಿಂಗಾಯತ, ಒಕ್ಕಲಿಗರು ಈ ಎರಡು ಸಮುದಾಯಕ್ಕಿಂತಲೂ ಹೆಚ್ಚಿನ ಒತ್ತನ್ನು ಬೇರೆ ಸಮುದಾಯಕ್ಕೆ ನೀಡಿ ಮತದಾರರ ಮನವೊಲಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್ ಕುರುಬ ಸಮುದಾಯದ ಸಿದ್ಧರಾಮಯ್ಯ ಅವರನ್ನು ಸಿಎಂ ಮಾಡಿದ್ದು, ರಾಷ್ಟ್ರೀಯ ಅಧ್ಯಕ್ಷರನ್ನಾಗಿ ದಲಿತ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ನೇಮಕ ಮಾಡಿದ್ದು, ಮಾಸ್ಟರ್ ಸ್ಟ್ರೋಕ್ ನೀಡಲು ಪ್ಲ್ಯಾನ್ ಮಾಡಿದೆ.

ರಾಜಕೀಯ ಪಕ್ಷಗಳ ಲೆಕ್ಕಾಚಾರವೇ ಬೇರೆಯದ್ದಾಗಿರುತ್ತದೆ. ಆದರೆ ಮತದಾರರನ ಲೆಕ್ಕಾಚಾರ ಬೇರೆಯದ್ದಾಗಿರುತ್ತದೆ. ಈ ಬಾರಿ ಯಾವ ಸಮುದಾಯಕ್ಕೆ ಮತದಾರ ಮಣೆ ಹಾಕಿದ್ದಾನೆ ಎಂಬುದಕ್ಕೆ ಜೂನ 4ಕ್ಕೆ ಉತ್ತರ ಲಭಿಸಲಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications