ಕಾಂಗ್ರೆಸ್ ಇಲ್ಲದೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ: ದೇವೇಗೌಡ
ಬೆಂಗಳೂರು, ಫೆಬ್ರವರಿ 05: ಕಾಂಗ್ರೆಸ್ ಪಕ್ಷ ಇಲ್ಲದೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಮಹಾಘಟಬಂಧನ್ನ ಪ್ರಮುಖ ನಾಯಕ ದೇವೇಗೌಡ ಅವರು ಇಂದು ಹೇಳಿದ್ದಾರೆ.
ಪದ್ಮನಾಭನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಬಲ ಪ್ರಾದೇಶಿಕ ಪಕ್ಷಗಳಿಗೆ ಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

ಪ್ರಾದೇಶಿಕ ಪಕ್ಷಗಳೇ ಸೇರಿ ಬಿಜೆಪಿ ವಿರುದ್ಧವಾಗಿ ರಚಿಸಿರುವ ಮಹಾಘಟಬಂಧನ್ ಗೆ ಕಾಂಗ್ರೆಸ್ನ ಶಕ್ತಿಯ ಅವಶ್ಯಕತೆ ಇದ್ದೇ ಇದೆ ಎಂದು ದೇವೇಗೌಡ ಅವರು ಹೇಳಿದ್ದಾರೆ. ಮಹಾಘಟಬಂಧನ್ನಲ್ಲಿ ಕೆಲವು ಪಕ್ಷಗಳಿಗೆ ಕಾಂಗ್ರೆಸ್ ರಾಜಕೀಯ ವಿರೋಧಿಯಾಗಿದ್ದು, ಅವು ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳಲು ಹಿಂದೇಟು ಹಾಕಿವೆ ಹೀಗಾಗಿ ದೇವೇಗೌಡ ಅವರ ಈ ಹೇಳಿಕೆ ಮಹತ್ವದ್ದಾಗಿದೆ.
ಪ್ರಸ್ತುತ ಮಹಾಘಟಬಂಧನ್ಗೆ ಕಾಂಗ್ರೆಸ್ ಪಕ್ಷವು ಬಾಹ್ಯ ಬೆಂಬಲವನ್ನಷ್ಟೆ ನೀಡಿದೆ. ದೇವೇಗೌಡ ಅವರ ಹೇಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ ಲೋಕಸಭೆ ಅತಂತ್ರವಾಗಿ ಕಾಂಗ್ರೆಸ್ ಬೆಂಬಲದೊಂದಿಗೆ ಮಹಾಘಟಬಂಧನ್ ಅಥವಾ ಮಹಾಘಟಬಂಧನ್ ಬೆಂಬಲದಿಂದ ಕಾಂಗ್ರೆಸ್ ಅಧಿಕಾರ ಹಿಡಿಯುವ ಮುನ್ಸೂಚನೆಯನ್ನು ಅವರು ನೀಡಿದ್ದಾರೆ.












Click it and Unblock the Notifications