ಟಿವಿ ಜ್ಯೋತಿಷ್ಯ ಕಾರ್ಯಕ್ರಮದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 08 : 'ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಜ್ಯೋತಿಷ್ಯ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರುವ ಚಿಂತನೆ ಇದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಚರ್ಚೆಗೆ ಕಾರಣವಾಗಿದೆ. ಟಿವಿ ವಾಹಿನಿಗಳು ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. [ಟಿವಿ ಜ್ಯೋತಿಷ್ಯ ಕಾರ್ಯಕ್ರಮ ಬೇಕೆ?, ವೋಟ್ ಹಾಕಿ]
ಬೆಂಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿ ಸೋಮವಾರ ಆಯೋಜಿಸಿದ್ದ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಜ್ಯೋತಿಷ್ಯ ಕಾರ್ಯಕ್ರಮ ನಿರ್ಬಂಧಿಸುವ ವಿಚಾರ ಪ್ರಸ್ತಾಪಿಸಿದ್ದಾರೆ. [ಟಿವಿ ವಾಹಿನಿಗಳ ಜ್ಯೋತಿಷ್ಯ ಕಾರ್ಯಕ್ರಮ ನಿರ್ಬಂಧ?]

ಸಿದ್ದರಾಮಯ್ಯ ಹೇಳಿದ್ದೇನು? : ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, 'ಇವತ್ತು ಟಿವಿಗಳಲ್ಲಿ ಮೌಢ್ಯ ಬಿತ್ತುವಂತಹ ಜ್ಯೋತಿಷ್ಯ ಕಾರ್ಯಕ್ರಮಗಳು ಹೆಚ್ಚು ಪ್ರಸಾರವಾಗುತ್ತಿವೆ. ಈ ವ್ಯವಸ್ಥಿತ ಹುನ್ನಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು' ಎಂದು ಹೇಳಿದರು. [ಕಾರ್ತಿಕ-ಮಾರ್ಗಶಿರ ಮಾಸದ ವಾರದ ಪಂಚಾಂಗ]
ಈ ನಡುವೆ ಸಭಿಕರೊಬ್ಬರು 'ಜ್ಯೋತಿಷ್ಯ ಕಾರ್ಯಕ್ರಮಗಳನ್ನು ನಿರ್ಬಂಧಿಸಿ' ಎಂದು ಕೂಗಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, 'ಯೋಚನೆ ಇದೆ ನೋಡೋಣ' ಎಂದು ತಿಳಿಸಿದರು. [ಶಾಸ್ತ್ರೋಕ್ತವಾಗಿ ನಡೆದ ಶಾಸ್ತ್ರ ನಂಬದ ಮುಖ್ಯಮಂತ್ರಿ ಗೃಹಪ್ರವೇಶ]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಮಾತು ಟಿಆರ್ಪಿಗಾಗಿ ಹೆಚ್ಚು ಹೊತ್ತು ಜ್ಯೋತಿಷ್ಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಟಿವಿ ವಾಹಿನಿಗಳಿಗೆ ಎಚ್ಚರಿಕೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕರ್ನಾಟಕ ಸರ್ಕಾರ ಜ್ಯೋತಿಷ್ಯದ ವಿಚಾರದಲ್ಲಿ ಮಾತನಾಡುತ್ತಿರುವುದು ಇದೇ ಮೊದಲಲ್ಲ. 2014ರಲ್ಲಿ 'ಕರ್ನಾಟಕ ಮೂಢನಂಬಿಕೆಗಳ ತಡೆ ಪ್ರತಿಬಂಧಕ ವಿಧೇಯಕ'ವನ್ನು ಸದನದಲ್ಲಿ ಮಂಡನೆ ಮಾಡಲು ಸಿದ್ಧತೆ ನಡೆಸಿತ್ತು. ಈ ವಿಧೇಯಕಕ್ಕೆ ರಾಜ್ಯದಲ್ಲಿ ಹಲವಾರು ಅಪಸ್ವರಗಳು ಕೇಳಿಬಂದಿತು.
ಸ್ವತಃ ಕಾಂಗ್ರೆಸ್ ಪಕ್ಷದವರೇ ಕಾಯ್ದೆ ವಿರುದ್ಧವಾಗಿ ಹೇಳಿಕೆ ನೀಡಿದರು. ವಿವಿಧ ಮಠಾಧೀಶರು, ಬುದ್ಧಿಜೀವಿಗಳು ಕಾಯ್ದೆ ಬಗ್ಗೆ ಸ್ಪಷ್ಟನೆ ಇಲ್ಲದ ಕಾರಣ ಇದನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು. ನಂತರ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯಿತು. ಈಗ ಜ್ಯೋತಿಷ್ಯ ಕಾರ್ಯಕ್ರಮದ ನಿಷೇಧದ ಬಗ್ಗೆ ಚರ್ಚೆ ಆರಂಭವಾಗಿದೆ.
-
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ











Click it and Unblock the Notifications