ಅಮಾನತುಗೊಂಡ ಜೆಡಿಎಸ್ ಶಾಸಕರಿಗೆ ಮತದಾನ ಹಕ್ಕು ಇದ್ಯಾ?
ಬೆಂಗಳೂರು, ಮಾರ್ಚ್ 12: 2016ರ ರಾಜ್ಯಸಭೆ ಚುನಾವಣೆ ವೇಳೆಯಲ್ಲಿ 'ಕ್ರಾಸ್ ವೋಟಿಂಗ್' ಮಾಡಿದ ಜೆಡಿಎಸ್ ನ ಶಾಸಕರು ಈ ಬಾರಿಯ ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಬಹುದೇ? ಎಂಬ ಕುತೂಹಲದ ಪ್ರಶ್ನೆಗೆ ಉತ್ತರ ಹೌದು.
ಅಂದಿನ ಅಸೆಂಬ್ಲಿ ಸ್ಪೀಕರ್ ಕೆ.ಬಿ ಕೋಳಿವಾಡ ಅವರು ರೆಬೆಲ್ ಶಾಸಕರ ಕೇಸನ್ನು ಇನ್ನೂ ಬಾಕಿ ಉಳಿಸಿದ್ದಾರೆ. ಹೀಗಾಗಿ, 7 ಮಂದಿ ಶಾಸಕರು ಈ ಬಾರಿ ಮತದಾನ ಮಾಡಬಹುದಾಗಿದೆ.
ಮಾರ್ಚ್ 23ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಳಿವಾಡ ಅವರು ಇನ್ನೂ ಯಾವುದೇ ಆದೇಶ ನೀಡಿಲ್ಲ. ಹೀಗಾಗಿ, ಅವರು ಇನ್ನೂ ಶಾಸಕರಾಗಿ ಪರಿಗಣಿಸಲಾಗುತ್ತದೆ. ಮತದಾನ ಮಾಡಬಹುದು. ಪ್ರಕರಣ ಕೋರ್ಟಿನಲ್ಲಿ ವಿಚಾರಣೆ ಹಂತದಲ್ಲಿದೆ.

ಚುನಾವಣೆ ನಿಯಮಗಳ ಪ್ರಕಾರ, ರೆಬೆಲ್ ಶಾಸಕರು ಮತದಾನ ಮಾಡುವಾಗ, ತಾವು ಹಾಕಿದ ಮತವನ್ನು ಜೆಡಿಎಸ್ ನ ಎಲೆಕ್ಷನ್ ಏಜೆಂಟ್ ಗೆ ತೋರಿಸಬೇಕು. ಮತ ಯಾರಿಗೆ ಬೇಕಾದರೂ ಹಾಕಬಹುದು.
Recommended Video

ಜೆಡಿಎಸ್ ನಿಂದ ಅಮಾನತುಗೊಂಡಿರುವ ಶಾಸಕರ ನೆರವಿನಿಂದ ಮೂರನೇ ಅಭ್ಯರ್ಥಿಯ ಗೆಲುವಿನ ನಿರೀಕ್ಷೆಯನ್ನು ಕಾಂಗ್ರೆಸ್ ಹೊತ್ತುಕೊಂಡಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
'ಗುಂಡ್ಲುಪೇಟೆ, ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ, ಬೆಂಗಳೂರು ಮಹಾನಗರಪಾಲಿಕೆಯಲ್ಲಿ ನಿಮ್ಮನ್ನು ಬೆಂಬಲಿಸಿದ್ದೇವೆ. ನಮಗೆ ಒಂದು ಸ್ಥಾನ ಬಿಟ್ಟುಕೊಡಿ' ಎಂದು ಜೆಡಿಎಸ್ ನಾಯಕರು ಕೇಳಿದ್ದಾರೆ. ಕಾಂಗ್ರೆಸ್ನ ಕೆಲವು ನಾಯಕರು ಜೆಡಿಎಸ್ ಪರ ವಕಾಲತ್ತು ವಹಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಇದಕ್ಕೆ ವಿರುದ್ಧವಾಗಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications