ನಿತ್ಯಾನಂದ ಸ್ವಾಮಿಗೆ ಸಂಕಷ್ಟ; ಜಾಮೀನು ರದ್ದು ಮಾಡಲು ಅರ್ಜಿ
ಬೆಂಗಳೂರು, ಜನವರಿ 24 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ನಿತ್ಯಾನಂದ ಸ್ವಾಮಿ ಭಾರತ ಬಿಟ್ಟು ಪರಾರಿಯಾಗಿದ್ದು, ಈಗಾಗಲೇ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ.
ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಲೆನಿನ್ ಕರುಪ್ಪನ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ರಾಮನಗರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂದು ಅರ್ಜಿ ಸಲ್ಲಿಕೆಯಾಗಿದೆ.
ನಿತ್ಯಾನಂದ ಸ್ವಾಮಿ ಕಾರು ಚಾಲಕರಾಗಿದ್ದ ಲೆನಿನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನ್ಯಾಯಾಲಯ ನಡೆಸಿತು. ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಏಕ ಸದಸ್ಯ ಪೀಠ ಸಿಐಡಿಗೆ ನೋಟಿಸ್ ಜಾರಿಗೊಳಿಸಿದೆ.
ಗುಜರಾತ್ನಲ್ಲಿರುವ ಆಶ್ರಮದಿಂದ ಇಬ್ಬರು ಬಾಲಕಿಯರು ನಾಪತ್ತೆಯಾದ ಪ್ರಕರಣದಲ್ಲಿಯೂ ನಿತ್ಯಾನಂದ ಆರೋಪಿ. ಗುಜರಾತ್ ಪೊಲೀಸರ ಮನವಿ ಮೇರೆಗೆ ಇಂಟರ್ ಪೋಲ್ ಆತನ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ.

ಅರ್ಜಿಯಲ್ಲಿ ಮನವಿ ಏನು?
ನಿತ್ಯಾನಂದ ಸ್ವಾಮಿ ಜಾಮೀನು ಷರತ್ತುಗಳನ್ನು ಉಲ್ಲಂಘಸಿದ್ದಾನೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗುತ್ತಿಲ್ಲ. ಅವಧಿ ಮುಗಿದಿರುವ ಪಾಸ್ ಪೋರ್ಟ್ ಬಳಸಿಕೊಂಡು ದೇಶದಿಂದ ಪರಾರಿಯಾಗಿದ್ದಾನೆ. ಹೀಗಾಗಿ ಜಾಮೀನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

ಭಕ್ತೆ ಮೇಲೆ ಅತ್ಯಾಚಾರ ಪ್ರಕರಣ
ಭಕ್ತೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿ ಆರೋಪಿ. 2010ರಲ್ಲಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ನಲ್ಲಿಯೂ ನಿತ್ಯಾನಾಂದ ಸ್ವಾಮಿ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ, ಪ್ರಕರಣದ ರದ್ದಾಗಿಲ್ಲ.

ವಿಚಾರಣೆಗೆ ಹಾಜರಾಗುತ್ತಿಲ್ಲ
ನಿತ್ಯಾನಂದ ಸ್ವಾಮಿ ಮತ್ತು ಆತನ ಮೂವರು ಶಿಷ್ಯರು ಸಹ ಈ ಪ್ರಕರಣದಲ್ಲಿ ಆರೋಪಿಗಳು. ರಾಮನಗರ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿತ್ಯಾನಂದ ಮತ್ತು ಅವರ ಶಿಷ್ಯರು ಗೈರಾಗಿದ್ದರು. ಇದನ್ನು ಆಧಾರವಾಗಿ ಇಟ್ಟುಕೊಂಡು ಜಾಮೀನು ಅರ್ಜಿಗೆ ವಜಾಗೊಳಿಸಲು ಮನವಿ ಸಲ್ಲಿಸಲಾಗಿದೆ.

ಪ್ರಕರಣವನ್ನು ವರ್ಗಾವಣೆ ಮಾಡಿ
ಲೆನಿನ್ ಹೈಕೋರ್ಟ್ಗೆ ಮತ್ತೊಂದು ಅರ್ಜಿ ಹಾಕಿದ್ದು, ರಾಮನಗರ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ವಿಳಂಬವಾಗುತ್ತಿದೆ. ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಎಂದು ಮನವಿ ಮಾಡಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?











Click it and Unblock the Notifications