ಲೋಕಸಭೆ ಉಪ ಚುನಾವಣೆ ರದ್ದುಪಡಿಸಲು ರಾಷ್ಟ್ರಪತಿಗಳಿಗೆ ಪತ್ರ
ಶಿವಮೊಗ್ಗ, ಅಕ್ಟೋಬರ್ 09 : ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಲೋಕಸಭೆ ಉಪ ಚುನಾವಣೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
ಮಂಗಳವಾರ ಕಿಮ್ಮನೆ ರತ್ನಾಕರ ಅವರು ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ಈಗ ಸಂಸದರಾಗಿ ಆಯ್ಕೆಯಾದವರ ಅಧಿಕಾರ 6 ತಿಂಗಳು ಇರುತ್ತದೆ. ಆದ್ದರಿಂದ, ಜನರ ತೆರಿಗೆ ಹಣ ವ್ಯರ್ಥ ಮಾಡಿ ಚುನಾವಣೆ ನಡೆಸುವುದು ಬೇಡ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಘೋಷಣೆಯಾಗಿರುವ ಉಪ ಚುನಾವಣೆಯನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಪ್ರಧಾನಿ ಕಚೇರಿ, ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗಕ್ಕೂ ಪತ್ರವನ್ನು ಕಳಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಶಿವಮೊಗ್ಗ, ಬಿ.ಶ್ರೀರಾಮುಲು ರಾಜೀನಾಮೆಯಿಂದ ತೆರವಾದ ಬಳ್ಳಾರಿ ಮತ್ತು ಸಿ.ಎಸ್.ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾದ ಮಂಡ್ಯ ಕ್ಷೇತ್ರಕ್ಕೆ ನ.3ರಂದು ಉಪ ಚುನಾವಣೆ ನಡೆಯಲಿದೆ.
ಆದರೆ, ಮೂರು ರಾಜಕೀಯ ಪಕ್ಷಗಳ ಕೆಲವು ನಾಯಕರು ಉಪ ಚುನಾವಣೆ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಮೇ ಅಥವ ಜೂನ್ ತಿಂಗಳಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಆದ್ದರಿಂದ, ಈಗ ಉಪ ಚುನಾವಣೆ ನಡೆಸಿ ಹಣ ಖರ್ಚು ಮಾಡುವ ಅಗತ್ಯವೇನಿದೆ? ಎಂದು ಹಲವು ನಾಯಕರು ಪ್ರಶ್ನಿಸಿದ್ದಾರೆ.
ಮತ್ತೊಂದು ಕಡೆ ತುಮಕೂರು ಮೂಲದ ರಮೇಶ್ ನಾಯ್ಕ್ ಎಂಬುವವರು ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಮೂರು ಕ್ಷೇತ್ರಗಳ ಉಪ ಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications