ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2020-21ನೇ ಸಾಲಿನ ನೌಕರರ ಗಳಿಕೆ ರಜೆ ನಗದೀಕರಣ ರದ್ದುಗೊಳಿಸಿದ ಸರ್ಕಾರ

|
Google Oneindia Kannada News

ಬೆಂಗಳೂರು, ಜನವರಿ 05: ಕರ್ನಾಟಕ ಸರ್ಕಾರವು 2020-21ನ ಸಾಲಿನ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರವು ಪ್ರಸ್ತುತ ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಈ ಆದೇಶವು ಸರ್ಕಾರದಿಂದ ಸಹಾಯಾನುದಾನ, ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿಗೂ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

2021 ರ ಜನವರಿ ತಿಂಗಳಿಂದ ಡಿಸೆಂಬರ್ ಅಂತ್ಯದ ಅವಧಿಯಲ್ಲಿ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು, ಅಧಿಕಾರಿಗಳು, ಅವರು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Karnataka Cancelled The Provision For Govt Employees To Encash Their Earned Leaves

ಈ ಆದೇಶದ ಪ್ರಕಾರ 2021ನೇ ಸಾಲಿನ ಕ್ಯಾಲೆಂಡರ್ ವರ್ಷ ದಿನಾಂಕ 01-01-2021 ರಿಂದ 31-12-2021 ರವರೆಗಿನ ಅವಧಿಯಲ್ಲಿ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ.

ಜತೆಗೆ ಈ ವರ್ಷ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು ಮತ್ತು ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

Recommended Video

ಗೋಲ್ಡ್ ಖರೀದಿ ಮಾಡೋರಿಗೆ ಶಾಕಿಂಗ್ ನ್ಯೂಸ್..! | Oneindia Kannada

English summary
Karnataka, which is under financial stress due to the Covid-19 pandemic, has cancelled the provision for government employees to encash their earned leaves in the 2021 calendar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X