Get Updates
Get notified of breaking news, exclusive insights, and must-see stories!

ಗಂಟೆಗೆ 150 ಜನರನ್ನು ಕೊಲ್ಲುವ ತಂಬಾಕು: ಮೈಮರೆತರೆ ಮೈ ಸೇರುತ್ತೆ ಮಾರಕ ರೋಗ!

ಮೈಸೂರು ಫೆಬ್ರವರಿ 6: ಕೆಡುಕಿಗೆ ಆಕರ್ಷಣೆ ಹೆಚ್ಚು ಎನ್ನುವ ಮಾತು ಇಂದಿಗೂ ಸುಳ್ಳಲ್ಲ. ಬೀಡಿ, ಸಿಗರೇಟು ಸೇರಿದಂತೆ ತಂಬಾಕನ್ನು ಬೇರೆ ಬೇರೆ ರೂಪಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ ಎಂದು ಇಳಿದೂ ಅದನ್ನು ಜನ ಸೇವಿಸುತ್ತಾರೆ. ಇದು ಕೇವಲ ಜೀವನ ನಷ್ಟವಷ್ಟೇ ಆಲ್ಲ, ಆರ್ಥಿಕ ನಷ್ಟವನ್ನೂ ತರುತ್ತದೆ. ಇದು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು ವೈದ್ಯಕೀಯ ಲೋಕ ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುತ್ತಿದೆ. ಇತ್ತೀಚೆಗೆ ಐಸಿಎಂಆರ್ ನಡೆಸಿದ ಅಧ್ಯಯನದ ಪ್ರಕಾರ ಕರ್ನಾಟಕದಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 2 ವರ್ಷಗಳಲ್ಲಿ ಹೆಚ್ಚಾಗಲಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

2025ರ ವೇಳೆಗೆ ಕರ್ನಾಟಕದಲ್ಲಿ ಕ್ಯಾನ್ಸರ್ ಪ್ರಕರಣಗಳು ಇನ್ನೂ 90,000 ರಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನ ಹೇಳಿದೆ. ಈ ಬಗ್ಗೆ ಹಿರಿಯ ಆಂಕೊಲಾಜಿಸ್ಟ್ ಡಾ.ಬಿ.ಎಸ್.ಅಜಯಕುಮಾರ್ ಮಾಹಿತಿ ನೀಡಿದ್ದಾರೆ.

ಸಾವಿಗೆ ಕೂಪಕ್ಕೆ ತಳ್ಳುವ ಕ್ಯಾನ್ಸರ್

ಸಾವಿಗೆ ಕೂಪಕ್ಕೆ ತಳ್ಳುವ ಕ್ಯಾನ್ಸರ್

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಭಾರತ್ ಆಸ್ಪತ್ರೆ ಮತ್ತು ಆಂಕೊಲಾಜಿ ಸಂಸ್ಥೆಯು ಸೈಕಲ್ ಪ್ಯೂರ್ ಅಗರಬತ್ತಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಹೋಪ್-ಎ-ಥಾನ್ 'ಟಾರ್ಚ್ ಲೈಟ್ ಪರೇಡ್'ನಲ್ಲಿ ಅವರು ಮಾತನಾಡಿದರು. ಭಾರತ್ ಆಸ್ಪತ್ರೆ ಮತ್ತು ಆಂಕೊಲಾಜಿ ಸಂಸ್ಥೆಯ ಎಂಡಿ ಮತ್ತು ಎಚ್‌ಸಿಜಿ ಆಸ್ಪತ್ರೆಯ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಅಜೈಕುಮಾರ್, "2022 ರಲ್ಲಿ ಭಾರತದಲ್ಲಿ 14.61 ಲಕ್ಷ ಜನರಿಗೆ ಕ್ಯಾನ್ಸರ್ ಹೆಚ್ಚಾಗಿದೆ. ಇದು ಭಾರತದಲ್ಲಿ ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ" ಎಂದಿದ್ದಾರೆ.

ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ

ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ

ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು, ಬದಲಾವಣೆಯನ್ನು ಪ್ರೇರೇಪಿಸಲು ಮತ್ತು ಕ್ಯಾನ್ಸರ್‌ನ ಜಾಗತಿಕ ಪರಿಣಾಮಗಳನ್ನು ಕಡಿಮೆ ಮಾಡಲು ಪ್ರತಿ ವರ್ಷ ಈ ವಿಶ್ವದಾದ್ಯಂತ ವಿಶ್ವ ಕ್ಯಾನ್ಸರ್ ದಿನವನ್ನು ಫೆಬ್ರವರಿ 4 ರಂದು ಆಚರಣೆ ಮಾಡಲಾಗುತ್ತದೆ. ಈ ದಿನದಂದು ಸರ್ಕಾರ ಮತ್ತು ಇತರೆ ಸಂಘ ಸಂಸ್ಥೆಗಳು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ಯಾನ್ಸರ್ ಬಗ್ಗೆ ಮತ್ತು ಮುನ್ನೆಚ್ಚೆರಿಕೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ. ಈ ದಿನ ಮಾತನಾಡಿದ ಅಜೈಕುಮಾರ್,

'2018 ಮತ್ತು 2020 ರ ನಡುವೆ ಕ್ಯಾನ್ಸರ್ ನಿಂದಾಗಿ ದೇಶವು 22 ಲಕ್ಷ ಸಾವುಗಳನ್ನು ಕಂಡಿದೆ. ದುರದೃಷ್ಟವಶಾತ್ ಈ ಪ್ರವೃತ್ತಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದರು. 2025 ರ ವೇಳೆಗೆ, ಭಾರತದಲ್ಲಿ 29 ಮಿಲಿಯನ್ ಕ್ಯಾನ್ಸರ್ ಪ್ರಕರಣಗಳನ್ನು ನಿರೀಕ್ಷಿಸಲಾಗಿದೆ' ಎಂದರು.

ಧೂಮಪಾನದಿಂದ ಶ್ವಾಸಕೋಶದ ಕ್ಯಾನ್ಸರ್

ಧೂಮಪಾನದಿಂದ ಶ್ವಾಸಕೋಶದ ಕ್ಯಾನ್ಸರ್

"ನಾನೊಬ್ಬ ಕ್ಯಾನ್ಸರ್ ತಜ್ಞನಾಗಿ, ತಂಬಾಕು ಜನರಿಗೆ ಕ್ಯಾನ್ಸರ್ ಬರುವ ಏಕೈಕ ದೊಡ್ಡ ಕೊಡುಗೆ ಎಂದು ನಾನು ದೃಢವಾಗಿ ಹೇಳಬಲ್ಲೆ. ಧೂಮಪಾನಕ್ಕೆ ವ್ಯಸನಿಯಾಗಿರುವವರು ಶ್ವಾಸಕೋಶದ ಕ್ಯಾನ್ಸರ್ ಅನ್ನು ಅಭಿವೃದ್ಧಿಪಡಿಸುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ" ಎಂದು ಅವರು ಹೇಳಿದರು.

ಡಾ ಅಜೈಕುಮಾರ್ ಪ್ರಕಾರ, ಪ್ರತಿ ಗಂಟೆಗೆ ತಂಬಾಕು 150 ಭಾರತೀಯರನ್ನು ಮತ್ತು ಪ್ರತಿದಿನ 3,500 ಜನರನ್ನು ಕೊಲ್ಲುತ್ತದೆ ಮತ್ತು ತಂಬಾಕು ಪ್ರತಿ ವರ್ಷ 13 ಲಕ್ಷ ಭಾರತೀಯರನ್ನು ಕೊಲ್ಲುತ್ತದೆ.

ಜಾಗತಿಕವಾಗಿ ಪ್ರತಿವರ್ಷ ಸಾಯುವವರ ಸಂಖ್ಯೆ 70ಲಕ್ಷಕ್ಕಿಂತ ಅಧಿಕ

ಜಾಗತಿಕವಾಗಿ ಪ್ರತಿವರ್ಷ ಸಾಯುವವರ ಸಂಖ್ಯೆ 70ಲಕ್ಷಕ್ಕಿಂತ ಅಧಿಕ

ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ಇಡೀ ಪ್ರಪಂಚದಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ ಭಾರತ 2ನೇ ಸ್ಥಾನದಲ್ಲಿದೆ. ತಂಬಾಕು ಸೇವನೆಯಿಂದ ಜಾಗತಿಕವಾಗಿ ಪ್ರತಿವರ್ಷ ಸಾಯುವವರ ಸಂಖ್ಯೆ 70ಲಕ್ಷಕ್ಕಿಂತ ಅಧಿಕ. ಭಾರತದಲ್ಲಿ 13 ಲಕ್ಷ ಜನರು ಬೀಡಿ, ಸಿಗರೇಟ್‌, ತಂಬಾಕಿನ ನೇರ ಸೇವನೆಯಿಂದ ಉಂಟಾಗುವ ಕ್ಯಾನ್ಸರ್‌ ಹಾಗೂ ಇತರೆ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಈ ಪ್ರಮಾಣ 8 ಸಾವಿರಕ್ಕೂ ಅಧಿಕವಿದೆ. ತಂಬಾಕು ಸೇವೆನೆಯಿಂದ ಕೇವಲ ಗಂಟಲು, ಶ್ವಾಸಕೋಶ ಮಾತ್ರವಲ್ಲದೆ ಅಡಿಯಿಂದ ಮುಡಿವರೆಗೆ ನಮ್ಮ ದೇಹದ ಪ್ರತಿಯೊಂದು ಜೀವ ಕೋಶದ ಮೇಲೆ ಅದು ಮಾರಕ ಪರಿಣಾಮವನ್ನುಂಟು ಮಾಡುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+