Get Updates
Get notified of breaking news, exclusive insights, and must-see stories!

Cancer Treatment: 'ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ': ಮಹತ್ವದ ಮಾಹಿತಿ ಇಲ್ಲಿದೆ

ಬೆಳಗಾವಿ, ಡಿಸೆಂಬರ್‌ 16: ರಾಜ್ಯದಲ್ಲಿ ಜನ ಸಾಮಾನ್ಯರಿಗೆ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ವಿವಿಧ ಬಗೆಯ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರದ ವಿವಿಧ ಯೋಜನೆಯಡಿ, ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಕೈಗೆಟುಕುವ ಬೆಲೆಯಲ್ಲಿ ವಿಶ್ವದರ್ಜೆಯ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ಇಂದು (ಸೋಮವಾರ) ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಬಡತನ ರೇಖೆಗಿಂತ ಕಡಿಮೆ (BPL) ಇರುವ ಕುಟುಂಬಗಳಿಗೆ Ab-Ark (ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ) ಯೋಜನೆಯಡಿಯಲ್ಲಿ ರೂ.5.00 ಲಕ್ಷದವರೆಗೂ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಹಾಗೂ ಬಡತನ ರೇಖೆಗಿಂತ ಮೇಲಿರುವ (APL) ಕುಟುಂಬಗಳಿಗೆ ರಿಯಾಯಿತಿ ಅಂದರೆ 30% ಸರ್ಕಾರದ ಅಡಿಯಿಂದ ಮತ್ತು 70% ರೋಗಿಗಳಿಂದ ಪಡೆದು ಚಿಕಿತ್ಸೆಗಾಗಿ ಭರಿಸಲಾಗುತ್ತದೆ.

Cancer Treatment Is Being Provided At Affordable Rates To Common Man Says Sharan Prakash Patil

ಇದಲ್ಲದೇ SCP and TSP ಯೋಜನೆ ಅಡಿಯಲ್ಲಿ ಉಚಿತ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತದೆ (Rare Disease) ಯೋಜನೆಯಡಿಯಲ್ಲಿ ದುಬಾರಿ ಚಿಕಿತ್ಸೆಗಳಾದ ರೋಬೋಟಿಕ್ ಶಸ್ತ್ರಚಿಕಿತ್ಸೆ, ಅಸ್ಥಿಮಜ್ಜೆ (Bone Marrow) ಹಾಗೂ ಬಡತನ ರೇಖೆಗಿಂತ ಕಡಿಮೆ (BPL) ಇರುವ ಕುಟುಂಬಗಳಿಗೆ ಕ್ಯಾನ್ಸರ್ ತಪಾಸಣೆಗೆ PET-SCANಅನ್ನು ಸಂಪೂರ್ಣ ಉಚಿತವಾಗಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ನೀಡಲಾಗುತ್ತಿದೆ. ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ರಾಜ್ಯದಾದ್ಯಂತ 31 ಜಿಲ್ಲಾ ಆಸ್ಪತ್ರೆಗಳಲ್ಲಿ ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡಲು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದರು. ಶ್ರೀ ಪುನೀತ್ ಹೃದಯಜ್ಯೋತಿ ಯೋಜನೆಯಡಿ Hub and Spoke ಮಾದರಿಯಲ್ಲಿ 16 ಜಿಲ್ಲಾ ಆಸ್ಪತ್ರೆಗಳು ಮತ್ತು 70 ತಾಲ್ಲೂಕು ಆಸ್ಪತ್ರೆಗಳಲಿ ಹಠಾತ್ ಹೃದಯಾಘಾತ ಚಿಕಿತ್ಸೆಗೆ ಒಟ್ಟು 86 ಉಪಕರಣಗಳು ಲಭ್ಯವಿದೆ. ರಾಜ್ಯದಾದ್ಯಂತ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವವರಿಗೆ 193 ಕೇಂದ್ರಗಳಲ್ಲಿ ಒಟ್ಟು 763 ಡಯಾಲಿಸಿಸ್ ಯಂತ್ರಗಳು ಲಭ್ಯವಿದೆ ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗದಿಂದ ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆವಾರು ಆಸ್ಪತ್ರೆಗಳ ನಿರ್ಮಾಣ ಹಾಗೂ ದುರಸ್ತಿಗೆ 67084.35 ಲಕ್ಷ ರೂ ಅನುದಾನ ನಿಗದಿಪಡಿಸಿದ್ದು, ಈ ಅನುದಾನವನ್ನು ಆದ್ಯತೆ ಮೇರೆಗೆ ಅವಶ್ಯವಿರುವ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳಾದ ಕಟ್ಟಡ, ವಸತಿ, ನೀರು ಹಾಗೂ ಶೌಚಾಲಯ ಮತ್ತಿತರ ಅಭಿವೃದ್ಧಿ ಮತ್ತು ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ರೂ.5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದ ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು.

ಧನ ವಿನಿಯೋಗ ಅಧಿನಿಯಮದ ಆಧಾರದಲ್ಲಿ, ಹೊಸ ಸೇವೆಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರಕ ಅಥವಾ ಹೆಚ್ಚಿನ ವೆಚ್ಚದ ಅವಶ್ಯಕತೆ ಉಂಟಾದರೆ, ಅಂದಾಜು ಮಾಡಿದ ವೆಚ್ಚದ ಮೊಬಲಗನ್ನು ತೋರಿಸುವ ಮತ್ತೊಂದು ವಿವರಣೆಯನ್ನು ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸಲು ಸಂವಿಧಾನದ 205(1)(ಎ)ರ ಅನುಚ್ಛೇದವು ಅವಕಾಶ ಕಲ್ಪಿಸಿದೆ. ಇದರ ಅನುಸಾರ ಕಂದಾಯ ಸಚಿವ ರೂ.5317.83 ಕೋಟಿ ಪೂರಕ ಅಂದಾಜುಗಳು ಎರಡನೇ ಕಂತಿನ ಬೇಡಿಕೆಯನ್ನು ಸದನದಲ್ಲಿ ಮಂಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+