ಶಾಸಕ ಕೃಷ್ಣಾರೆಡ್ಡಿ ವಿರುದ್ಧದ ಪ್ರಕರಣ ಸಿಐಡಿಗೆ

ವಿಧಾನ ಸಭೆಯಲ್ಲಿ ನಿಯಮ 69 ರ ಮೇರೆಗೆ ಅಲ್ಪ ಕಾಲಾವಧಿ ಚರ್ಚೆಯ ಸಂದರ್ಭದಲ್ಲಿ ಶಾಸಕ ವೈ.ಎಸ್.ವಿ.ದತ್ತ ಅವರು ಮಾತನಾಡಿ, ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವ ಸಂಬಂಧದಲ್ಲಿ ಕಾರ್ಯನಿರತರಾಗಿದ್ದ ವಿಧಾನಸಭೆ ಸದಸ್ಯ ಎಂ. ಕೃಷ್ಣಾರೆಡ್ಡಿ ಅವರ ಮೇಲೆ ಸುಳ್ಳು ಕೊಲೆ ಮೊಕದ್ದಮೆ ದಾಖಲಿಸಲಾಗಿದೆ. ತಹಸೀಲ್ದಾರರ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದ್ದು, ಇದರ ನಿಷ್ಪಕ್ಷಪಾತ ತನಿಖೆಯಾಗಬೇಕು. ಅದಕ್ಕಾಗಿ ಈ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಒತ್ತಾಯಿಸಿದ್ದರು.[ಪೊಲೀಸ್ ಪೇದೆಗಳಿಗೆ ಥಳಿಸಿದ ಹುನಗುಂದ ಶಾಸಕ]
ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು ಕೃಷ್ಣಾರೆಡ್ಡಿ ಅವರ ವಿರುದ್ಧ ಯಾವುದೇ ಕೊಲೆ ಪ್ರಕರಣ ದಾಖಲಾಗಿಲ್ಲ. ಜನರನ್ನು ಪ್ರಚೋದಿಸಿ ಸರ್ಕಾರಿ ಸ್ಥಳದಲ್ಲಿ ಮೃತನ ಶವವನ್ನು ದಫನ್ ಮಾಡಲು ಪ್ರಚೋದಿಸಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು ಎಂದು ಮಾಹಿತಿ ನೀಡಿದರು. ನಂತರ ಈ ಪ್ರಕರಣವನ್ನು ಸಿಐಡಿಗೆ ನೀಡುವುದಾಗಿ ತಿಳಿಸಿದರು.












Click it and Unblock the Notifications