ಶಾಸಕ ಕೃಷ್ಣಾರೆಡ್ಡಿ ವಿರುದ್ಧದ ಪ್ರಕರಣ ಸಿಐಡಿಗೆ

krishna reddy mla
ಬೆಂಗಳೂರು, ಜು.2: ಚಿಂತಾಮಣಿ ಶಾಸಕ ಎಂ. ಕೃಷ್ಣಾರೆಡ್ಡಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ನಿಯಮ 69 ರ ಮೇರೆಗೆ ಅಲ್ಪ ಕಾಲಾವಧಿ ಚರ್ಚೆಯ ಸಂದರ್ಭದಲ್ಲಿ ಶಾಸಕ ವೈ.ಎಸ್.ವಿ.ದತ್ತ ಅವರು ಮಾತನಾಡಿ, ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವ ಸಂಬಂಧದಲ್ಲಿ ಕಾರ್ಯನಿರತರಾಗಿದ್ದ ವಿಧಾನಸಭೆ ಸದಸ್ಯ ಎಂ. ಕೃಷ್ಣಾರೆಡ್ಡಿ ಅವರ ಮೇಲೆ ಸುಳ್ಳು ಕೊಲೆ ಮೊಕದ್ದಮೆ ದಾಖಲಿಸಲಾಗಿದೆ. ತಹಸೀಲ್ದಾರರ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದ್ದು, ಇದರ ನಿಷ್ಪಕ್ಷಪಾತ ತನಿಖೆಯಾಗಬೇಕು. ಅದಕ್ಕಾಗಿ ಈ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಒತ್ತಾಯಿಸಿದ್ದರು.[ಪೊಲೀಸ್ ಪೇದೆಗಳಿಗೆ ಥಳಿಸಿದ ಹುನಗುಂದ ಶಾಸಕ]

ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು ಕೃಷ್ಣಾರೆಡ್ಡಿ ಅವರ ವಿರುದ್ಧ ಯಾವುದೇ ಕೊಲೆ ಪ್ರಕರಣ ದಾಖಲಾಗಿಲ್ಲ. ಜನರನ್ನು ಪ್ರಚೋದಿಸಿ ಸರ್ಕಾರಿ ಸ್ಥಳದಲ್ಲಿ ಮೃತನ ಶವವನ್ನು ದಫನ್ ಮಾಡಲು ಪ್ರಚೋದಿಸಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು ಎಂದು ಮಾಹಿತಿ ನೀಡಿದರು. ನಂತರ ಈ ಪ್ರಕರಣವನ್ನು ಸಿಐಡಿಗೆ ನೀಡುವುದಾಗಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+