ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವಾದಾತ್ಮಕ ಹೇಳಿಕೆ: ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲು

|
Google Oneindia Kannada News

ಮಂಗಳೂರು, ಜನವರಿ 24: ಶ್ರೀ ರಾಮ ಹಾಗೂ ಅಲ್ಲಾಹ್ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯಲ್ಲಿ ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪೊಲೀಸರು ಐಪಿಸಿ ಕಲಂ 153(ಎ), 505(2) ಅಡಿಯಲ್ಲಿ ಕಾರ್ಕಳ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಧಾರ್ಮಿಕ ದ್ವೇಷ ಉಂಟಾಗುವಂತೆ ಭಾಷಣ ಮಾಡಿದ ಮತ್ತು ಧರ್ಮ-ಧರ್ಮಗಳ ನಡುವೆ ಸೌಹಾರ್ದತೆಗೆ ಭಂಗ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ.

ಅಸೆಂಬ್ಲಿ ಚುನಾವಣೆ: 'ಅಲ್ಲಾ ಹಾಗೂ ರಾಮನ ವಿರುದ್ಧದ ಸೆಣಸು'ಅಸೆಂಬ್ಲಿ ಚುನಾವಣೆ: 'ಅಲ್ಲಾ ಹಾಗೂ ರಾಮನ ವಿರುದ್ಧದ ಸೆಣಸು'

ಬಂಟ್ವಾಳ ದಲ್ಲಿ ಸೋಮವಾರ ರಾತ್ರಿ ನಡೆದ ಬಹಿರಂಗ ಸಭೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್, "ಮುಂಬರುವ ವಿಧಾನಸಭೆ ಚುನಾವಣೆ ಅಲ್ಲಾಹ್ ಮತ್ತು ಶ್ರೀ ರಾಮನ ನಡುವೆ ನಡೆಯುವ ಚುನಾವಣೆಯಾಗಿದೆ" ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.

Case registered against MLA Sunil Kumar for his 'Allah - Ram' statement

ಈ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

English summary
Case has been registered against Karkala MLA Sunil Kumar in Bantwal town police station for his speech, based on a complaint filed by local youth Congress president Prashanth Kulal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X