Caste Census Report: ಕಾಂತರಾಜು ಆಯೋಗ ವರದಿ ಒಪ್ಪಿದ್ದ ಬಿಜೆಪಿ ಸರ್ಕಾರ: ಡಿ ಕೆ ಸುರೇಶ್‌

ಬೆಂಗಳೂರು, ಏಪ್ರಿಲ್‌ 22: ಕಾಂತರಾಜು ಆಯೋಗವು ಯಾವುದೇ ರೀತಿಯ ಜಾತಿಗಣತಿಯನ್ನು ಮಾಡಿಲ್ಲ. ಆ ಸಮಿತಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಿ ಸರ್ಕಾರದ ಮುಂದಿಟ್ಟಿದೆ. ನಂತರ ಬಂದ ಜಯಪ್ರಕಾಶ್ ಹೆಗ್ಡೆ ಅವರು ವರದಿಯನ್ನು ಪೂರ್ಣಗೊಳಿಸಿ ಅಂಕಿ ಅಂಶಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ಮಧ್ಯೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂತರಾಜು ಅವರು ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ಮಧ್ಯಂತರ ವರದಿ ಒಪ್ಪಿಕೊಂಡ ಬಿಜೆಪಿ ಇದು ಸರಿ ಇದೆ ಎಂದು ಒಳಮೀಸಲಾತಿ ಗೆಜೆಟ್ ನೋಟಿಫಿಕೇಶನ್ ಮಾಡಿತ್ತು ಎಂದು ಮಾಜಿ ಸಂಸದ ಡಿ ಕೆ ಸುರೇಶ್‌ ಅವರು ಹೇಳಿದರು.

ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿದ್ದು ಕೂಡ ಬಿಜೆಪಿ ಸರ್ಕಾರ. ಇಂದು ಈ ವಿಚಾರವಾಗಿ ಸಾಕಷ್ಟು ಚರ್ಚೆಯಾಗುತ್ತಿದೆ. 2015-16ರಲ್ಲಿ ಆರಂಭವಾದ ಸಮೀಕ್ಷೆ ರಾಜ್ಯದಲ್ಲಿ ಸರ್ಕಾರಿ ನೌಕರರು ಮನೆ ಮನೆಗೆ ಹೋಗಿ ಮಾಹಿತಿ ಕಲೆಹಾಕಿದ್ದಾರೆ. ಕೆಲವರು ಮಾಹಿತಿ ಕೊಟ್ಟರೆ ಮತ್ತೆ ಕೆಲವರು ಮಾಹಿತಿ ಕೊಟ್ಟಿಲ್ಲ. ಸಮಾಜದ ಬಗ್ಗೆ ಕಾಳಜಿ ಇರುವವರು ಈ ಬಗ್ಗೆ ಪೇಪರ್ ನೋಟಿಫಿಕೇಶನ್ ಕೂಡ ನೀಡಿದ್ದರು. ಇದರಲ್ಲಿ ತಮ್ಮ ಸಮುದಾಯದವರು ಇಂತಹ ಜಾತಿ, ಇಂತಹುದೇ ಉಪಜಾತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದರು.

Caste Census Report BJP Government Accepts Kantharaj Commission Report Says DK Suresh

ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ನಗರ ಪ್ರದೇಶದಲ್ಲಿ ಸರಿಯಾದ ಮಾಹಿತಿ ಸಿಕ್ಕಿಲ್ಲ ಎಂದು ಆಯೋಗ ಹೇಳಿದ್ದು, ಕಳೆದ 15 ವರ್ಷಗಳಲ್ಲಿ ಸಾಕಷ್ಟು ಜನ ನಗರ ಪ್ರದೇಶಗಳಿಗೆ ವಲಸೆ ಬಂದಿದ್ದಾರೆ.

ಇವರನ್ನು ವರದಿಯಲ್ಲಿ ಸೇರಿಸಲಾಗಿದೆಯೇ ಇಲ್ಲವೇ ಎಂಬ ಗೊಂದಲವಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿದ್ದು, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದು, ಎಲ್ಲಾ ಸಮುದಾಯಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ನಂಬಿಕೆ ಇದೆ. ಎಲ್ಲರಿಗೂ ಸರಿಯಾದ ರೀತಿ ನ್ಯಾಯ ಒದಗಿಸುವುದು ಅವರ ಜವಾಬ್ದಾರಿಯೂ ಆಗಿದೆ. ಈ ಪ್ರಕ್ರಿಯೆಯಲ್ಲಿ ಅನುಮಾನಗಳನ್ನು ನಿವಾರಿಸುವುದು ಮೊದಲ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.

ವರದಿ ಸಿದ್ಧವಾಗಿ 10 ವರ್ಷಗಳಾಗಿರುವುದರಿಂದ ಸಾಕಷ್ಟು ಗೊಂದಲಗಳಿವೆ. 1.34 ಕೋಟಿ ಕುಟುಂಬಗಳ ಸಮೀಕ್ಷೆ ಮಾಡಲಾಗಿದೆ ಎಂದು ವರದಿಯಲ್ಲಿ ಸಲ್ಲಿಸಲಾಗಿದೆ. ಅಂದಿನ ಸಮೀಕ್ಷೆ ಅನೇಕ ಮಾನದಂಡಗಳನ್ನು ಆಧರಿಸಿ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿತ್ತು. ಈ ವರದಿ ಅಂಕಿ ಅಂಶಗಳು ಬಹಿರಂಗವಾದ ನಂತರ ಜಾತಿ ವಿಚಾರ ಚರ್ಚೆಯಾಗುತ್ತಿದೆಯೇ ಹೊರತು, ಯಾರು ಎಷ್ಟು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಮಾಜಿಕವಾಗಿ ಪ್ರಗತಿ ಸಾಧಿಸಿವೆ, ಯಾರು ಪ್ರಗತಿ ಸಾಧಿಸಿಲ್ಲ ಎಂಬ ಚರ್ಚೆಯಾಗುತ್ತಿಲ್ಲ. ಉದಾಹರಣೆಗೆ ಬ್ರಾಹ್ಮಣರಲ್ಲಿ, ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಆರ್ಥಿಕವಾಗಿ ಕೆಳಗಿರುವವರು.

ಇನ್ನು ಗೊಲ್ಲ ಸಮುದಾಯದವರು ಎಸ್ ಟಿ ಪ್ರವರ್ಗದಲ್ಲಿ ಸೇರಲು ಹೋರಾಟ ಮಾಡುತ್ತಿದ್ದಾರೆ. ಅವರ ಬಗ್ಗೆ ಪೂರ್ಣ ಪ್ರಮಾಣದ ವರದಿ ಇಲ್ಲ, ಇನ್ನು ಈ ಭಾಗದಲ್ಲಿ ಬೆಸ್ತರು ಎಂದು ಕರೆಯಲ್ಪಡುವ ಸಮುದಾಯವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಅಂಬಿಗರು ಎಂದು ಕರೆಯುತ್ತಾರೆ, ಕರಾವಳಿ ಭಾಗದಲ್ಲಿ ಮೊಗವೀರರು ಎಂದು ಕರೆಯಲಾಗುತ್ತದೆ. ಈ ಸಮುದಾಯವೂ ಎಸ್ ಟಿ ಪ್ರವರ್ಗಕ್ಕೆ ಸೇರಲು ಪಟ್ಟು ಹಿಡಿದಿದ್ದಾರೆ. ಈ ಸಮುದಾಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಚರ್ಚೆ ಇಲ್ಲ ಎಂದು ತಿಳಿಸಿದರು.

ಕಾಂತರಾಜು ಅವರ ವರದಿ ಹಾಗೂ ಜಯಪ್ರಕಾಶ್ ಹೆಗ್ಡೆ ಅವರ ವರದಿ ಸಚಿವರ ಬಳಿ ಇದೆಯೇ ಹೊರತು ಸಾರ್ವಜನಿಕರ ಬಳಿ ಇಲ್ಲ. ಈ ಮಧ್ಯೆ ಕೆಲವು ಮಾಧ್ಯಮಗಳು ನಿತ್ಯ ಅರ್ಧರ್ಧ ಪುಟ ಮಾಹಿತಿ ಕೊಡುತ್ತಿವೆ. ಈ ವರದಿಗಳು ಗೊಂದಲಗಳನ್ನು ಸೃಷ್ಟಿಸುತ್ತಿವೆ. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಸ್ವಾತಂತ್ರ್ಯ ಪೂರ್ವದಿಂದ ಸ್ವಾತಂತ್ರ್ಯ ಬಂದ ನಂತರ ನೆಹರೂ ಅವರ ಕಾಲದಿಂದ ಮಲ್ಲಿಕಾರ್ಜುನ ಖರ್ಗೆ ಅವರ ಕಾಲದವರೆಗೂ ಶೋಷಿತರು, ರೈತರು, ದೀನದಲಿತರ ಪರವಾಗಿದ್ದು, ಇದರಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+