ಜಾತಿ ಗಣತಿ ವರದಿ; ಪ್ರಮಾಣ ಪತ್ರ ಸಲ್ಲಿಸಿ ಎಂದ ಹೈಕೋರ್ಟ್
ಬೆಂಗಳೂರು, ಮಾರ್ಚ್ 02: ರಾಜ್ಯಾದ್ಯಂತ ಜನಗಣತಿ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿರುವುದರ ಮಧ್ಯೆಯೇ ಹೈಕೋರ್ಟ್ ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ ಜಾತಿ ಗಣತಿ ವರದಿ ಸ್ವೀಕರಿಸಿರುವ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಹಾಗಾಗಿ ಇದೀಗ ಸರ್ಕಾರ ಅಧಿಕೃತವಾಗಿ ವರದಿ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲೇಬೇಕಾಗಿದೆ. ಈ ಮಧ್ಯೆ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರವೇ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ತೀವ್ರ ಆಕ್ಷೇಪ ಎತ್ತಿದ್ದಾರೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವಂತೆ (ಜಾತಿ ಗಣತಿ) ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಿ 2014ರ ಜ.23ರಂದು ಸರ್ಕಾರ ಹೊರಡಿಸಿದ ಆದೇಶ ರದ್ದು ಕೋರಿ ಬೀದರ್ನ ಶಿವರಾಜ್ ಕಣಶೆಟ್ಟಿ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಿದೆ.

ಕೇಂದ್ರಕ್ಕೆ ಮಾತ್ರ ಅಧಿಕಾರ: ಅರ್ಜಿದಾರರ ವಕೀಲರು, 2015ರ ಮೇ 5ರಂದು ಜಾತಿ ಗಣತಿ ಮುಗಿದಿದೆ ಎಂದು ಮತ್ತೋರ್ವ ಅರ್ಜಿದಾರ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಈ ವರದಿಯು 9 ವರ್ಷಗಳಿಂದ ಹಾಗೇ ಇತ್ತು. ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರು ಗುರುವಾರ ಸಂಜೆ ವರದಿ ಸಲ್ಲಿಸಿದ್ದಾರೆ. ಜಾತಿ ಗಣತಿ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂಬ ವಿಚಾರ ಸಹ ಅರ್ಜಿಯಲ್ಲಿ ಒಳಗೊಂಡಿದೆ ಎಂದು ವಿವರಿಸಿದರು.
ಅಲ್ಲದೆ, ಸಂವಿಧಾನದ ಪರಿಚ್ಛೇಧ 245 ಮತ್ತು 246ರ ಪ್ರಕಾರ ಜಾತಿ ಸಮೀಕ್ಷೆ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇಲ್ಲ. ಕೇಂದ್ರ ಸರ್ಕಾರ ಸಹ ಆಕ್ಷೇಪಣೆ ಸಲ್ಲಿಸಿ ನಮ್ಮ ಅರ್ಜಿಯನ್ನು ಬೆಂಬಲಿಸಿದೆ ಹಾಗೂ ನಮ್ಮ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಾಲಯವನ್ನು ಕೋರಿದೆ.
ಜಾತಿ ಗಣತಿ ವರದಿ ಸಲ್ಲಿಕೆ ಅಥವಾ ಅದರ ಸ್ವೀಕಾರದ ಸಂದರ್ಭದ ಬಗ್ಗೆ ನಾವು ಆಕ್ಷೇಪಿಸುವುದಿಲ್ಲ. ಜಾತಿ ಸಮೀಕ್ಷೆ ನಡೆಸುವ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಅಧಿಕಾರದ ವಿಚಾರಕ್ಕಷ್ಟೇ ನಮ್ಮ ವಾದ ಸೀಮಿತವಾಗಿದೆ. ಆದ್ದರಿಂದ ಆಯೋಗದ ವರದಿ ಆಧರಿಸಿ ಮುಂದೆ ಯಾವುದೇ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಿದರು.
ಮಾಹಿತಿ ಇಲ್ಲವೆಂದ ಸರ್ಕಾರಿ ವಕೀಲರು: ರಾಜ್ಯ ಸರ್ಕಾರ ಪರ ವಕೀಲರು, ಸರ್ಕಾರಕ್ಕೆ ಗುರುವಾರ ಜಾತಿ ಗಣತಿ ಸಲ್ಲಿಸಲಾಗಿದೆ ಎಂಬ ವಿಚಾರ ನಮಗೆ ತಿಳಿದಿಲ್ಲ. ಈ ಮಾಹಿತಿ ಅರ್ಜಿದಾರರಿಗೆ ಎಲ್ಲಿಂದ ಬಂದಿದೆಯೋ ಗೊತ್ತಿಲ್ಲ. ಇದೊಂದು ಸೂಕ್ಷ್ಮ ವಿಚಾರವಾಗಿದೆ. ನಮಗೆ ಸಮಯ ನೀಡಿದರೆ, ಅಡ್ವೊಕೇಟ್ ಜನರಲ್ ಅವರನ್ನು ಕರೆತರಲಾಗುವುದು. ಎಲ್ಲಾ ವಿಚಾರವನ್ನು ನ್ಯಾಯಪೀಠಕ್ಕೆ ತಿಳಿಸಲಾಗುವುದು. ಆದರೆ, ವರದಿಗೆ ಸಂಬಂಧಿಸಿದಂತೆ ಮುಂದುವರಿಯುವುದಿಲ್ಲ ಎಂಬುದಾಗಿ ಸರ್ಕಾರದ ಪರವಾಗಿ ಹೇಳಿಕೆ ನೀಡುವಂತೆ ಅರ್ಜಿದಾರರ ಪರ ವಕೀಲರು ಮೌಖಿಕವಾಗಿ ಕೇಳುವುದು ಸೂಕ್ತವಲ್ಲ ಎಂದು ಆಕ್ಷೇಪಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಸರ್ಕಾರವು ಜಾತಿ ಸಮೀಕ್ಷಾ ವರದಿ ಸ್ವೀಕರಿಸಿರುವ ಬಗ್ಗೆ ಎಲ್ಲಾ ಸುದ್ದಿ ಮಾಧ್ಯಮ ಮತ್ತು ಪತ್ರಿಕೆಗಳು ವರದಿ ಮಾಡಿವೆ ಎಂದರು. ಅಂತಿಮವಾಗಿ ಅರ್ಜಿದಾರರ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಆಯೋಗದ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿರುವ ಬಗ್ಗೆ ಸತ್ಯ ಸಂಗತಿಗಳನ್ನು ತಿಳಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications