ಕಾವೇರಿ ನದಿ ಕಾಲುವೆಗಳ ಮೇಲೆ ಸೌರ ಫಲಕ ಸ್ಥಾಪನೆ
ಬೆಂಗಳೂರು, ಸೆಪ್ಟೆಂಬರ್ 02 : ಆಮಲಟ್ಟಿ ಬಲದಂಡೆ ಕಾಲುವೆಗಳ ಮೇಲೆ ಸೌರ ವಿದ್ಯುತ್ ಉತ್ಪಾದಿಸುವ ಯೋಜನೆ ಯಶಸ್ವಿಯಾಗಿದೆ. ಸದ್ಯ, ಇಂಧನ ಇಲಾಖೆ ನೀರಾವರಿ ಇಲಾಖೆ ಸಹಯೋಗದಿಂದ ಕಾವೇರಿ ನದಿಯ ನಾಲೆಗಳ ಮೇಲೆ ಸೌರ ಫಲಕ ಅಳವಡಿಸಲು ಯೋಜನೆ ರೂಪಿಸಿದೆ.
ಪ್ರತಿದಿನ 120 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲು ಕಾವೇರಿ ನದಿ ಪಾತ್ರದ ನಾಲೆಗಳ ಮೇಲೆ ಸೌರ ಫಲಕ ಅಳವಡಿಸಲಾಗುತ್ತದೆ. ನೀರಾವರಿ ಉದ್ದೇಶಕ್ಕೆ ಅಗತ್ಯವಿರುಷ್ಟು ವಿದ್ಯುತ್ ಬಳಸಿಕೊಂಡು, ಉಳಿದ್ದನ್ನು ಗ್ರೀಡ್ಗೆ ಸಂಪರ್ಕಿಸಲು ನಿರ್ಧರಿಸಲಾಗಿದೆ.[ಸೋಲಾರ್ ವಿದ್ಯುತ್ ಉತ್ಪಾದನೆಗೆ ಸರ್ಕಾರದಿಂದಲೇ ಸಾಲ ಸೌಲಭ್ಯ]

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಮಲಟ್ಟಿ ಬಲದಂಡೆ ಕಾಲುವೆಗಳ ಮೇಲೆ ಸೌರ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿತ್ತು. ಈ ಯೋಜನೆ ಯಶಸ್ವಿಯಾದ ಹಿನ್ನಲೆಯಲ್ಲಿ ಕಾವೇರಿ ಪಾತ್ರದಲ್ಲೂ ಇದನ್ನು ಜಾರಿಗೆ ತರಲು ಯೋಜನೆ ಸಿದ್ಧವಾಗಿದೆ.[ಕರ್ನಾಟಕ ಹೈಕೋರ್ಟಿಗೆ ಸೌರಶಕ್ತಿ ಬಲ]
ಕಾವೇರಿ ನೀರಾವರಿ ನಿಗಮ ನಿಯಮಿತ ಇಂಧನ ಇಲಾಖೆಗೆ ಈ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸಿದೆ. ಎಲ್ಲಿ ಎಷ್ಟು ಸ್ಥಳವಿದೆ?, ಎಲ್ಲಿ ಯೋಜನೆ ಜಾರಿಗೊಳಿಸಬಹುದು? ಮುಂತಾದ ವಿವರಗಳನ್ನು ಈ ಯೋಜನಾ ವರದಿ ಒಳಗೊಂಡಿದೆ.[ಪಾವಗಡಕ್ಕೆ ಬಂತು ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್]
ನೀರಾವರಿ ಮತ್ತು ಇಂಧನ ಇಲಾಖೆ ಈ ಯೋಜನಾ ವರದಿ ಬಗ್ಗೆ ಚರ್ಚೆ ನಡೆಸಿದ್ದು, ಯೋಜನೆಗೆ ಎಷ್ಟು ವೆಚ್ಚ ವಾಗಲಿದೆ ಎಂದು ಅಂದಾಜು ನಡೆಸಲಾಗುತ್ತಿದೆ. ವಿದ್ಯುತ್ ಖರೀದಿ ಒಪ್ಪಂದದ ಅನ್ವಯ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂಬುದು ಸದ್ಯದ ಮಾಹಿತಿ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications