ಕಾವೇರಿ ನದಿ ಕಾಲುವೆಗಳ ಮೇಲೆ ಸೌರ ಫಲಕ ಸ್ಥಾಪನೆ
ಬೆಂಗಳೂರು, ಸೆಪ್ಟೆಂಬರ್ 02 : ಆಮಲಟ್ಟಿ ಬಲದಂಡೆ ಕಾಲುವೆಗಳ ಮೇಲೆ ಸೌರ ವಿದ್ಯುತ್ ಉತ್ಪಾದಿಸುವ ಯೋಜನೆ ಯಶಸ್ವಿಯಾಗಿದೆ. ಸದ್ಯ, ಇಂಧನ ಇಲಾಖೆ ನೀರಾವರಿ ಇಲಾಖೆ ಸಹಯೋಗದಿಂದ ಕಾವೇರಿ ನದಿಯ ನಾಲೆಗಳ ಮೇಲೆ ಸೌರ ಫಲಕ ಅಳವಡಿಸಲು ಯೋಜನೆ ರೂಪಿಸಿದೆ.
ಪ್ರತಿದಿನ 120 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲು ಕಾವೇರಿ ನದಿ ಪಾತ್ರದ ನಾಲೆಗಳ ಮೇಲೆ ಸೌರ ಫಲಕ ಅಳವಡಿಸಲಾಗುತ್ತದೆ. ನೀರಾವರಿ ಉದ್ದೇಶಕ್ಕೆ ಅಗತ್ಯವಿರುಷ್ಟು ವಿದ್ಯುತ್ ಬಳಸಿಕೊಂಡು, ಉಳಿದ್ದನ್ನು ಗ್ರೀಡ್ಗೆ ಸಂಪರ್ಕಿಸಲು ನಿರ್ಧರಿಸಲಾಗಿದೆ.[ಸೋಲಾರ್ ವಿದ್ಯುತ್ ಉತ್ಪಾದನೆಗೆ ಸರ್ಕಾರದಿಂದಲೇ ಸಾಲ ಸೌಲಭ್ಯ]

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಮಲಟ್ಟಿ ಬಲದಂಡೆ ಕಾಲುವೆಗಳ ಮೇಲೆ ಸೌರ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿತ್ತು. ಈ ಯೋಜನೆ ಯಶಸ್ವಿಯಾದ ಹಿನ್ನಲೆಯಲ್ಲಿ ಕಾವೇರಿ ಪಾತ್ರದಲ್ಲೂ ಇದನ್ನು ಜಾರಿಗೆ ತರಲು ಯೋಜನೆ ಸಿದ್ಧವಾಗಿದೆ.[ಕರ್ನಾಟಕ ಹೈಕೋರ್ಟಿಗೆ ಸೌರಶಕ್ತಿ ಬಲ]
ಕಾವೇರಿ ನೀರಾವರಿ ನಿಗಮ ನಿಯಮಿತ ಇಂಧನ ಇಲಾಖೆಗೆ ಈ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸಿದೆ. ಎಲ್ಲಿ ಎಷ್ಟು ಸ್ಥಳವಿದೆ?, ಎಲ್ಲಿ ಯೋಜನೆ ಜಾರಿಗೊಳಿಸಬಹುದು? ಮುಂತಾದ ವಿವರಗಳನ್ನು ಈ ಯೋಜನಾ ವರದಿ ಒಳಗೊಂಡಿದೆ.[ಪಾವಗಡಕ್ಕೆ ಬಂತು ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್]
ನೀರಾವರಿ ಮತ್ತು ಇಂಧನ ಇಲಾಖೆ ಈ ಯೋಜನಾ ವರದಿ ಬಗ್ಗೆ ಚರ್ಚೆ ನಡೆಸಿದ್ದು, ಯೋಜನೆಗೆ ಎಷ್ಟು ವೆಚ್ಚ ವಾಗಲಿದೆ ಎಂದು ಅಂದಾಜು ನಡೆಸಲಾಗುತ್ತಿದೆ. ವಿದ್ಯುತ್ ಖರೀದಿ ಒಪ್ಪಂದದ ಅನ್ವಯ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂಬುದು ಸದ್ಯದ ಮಾಹಿತಿ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications