ಫಾಲಿ ಎಸ್.ನಾರಿಮನ್ ವಿರುದ್ಧ ಅಕ್ರೋಶವೇಕೆ?
ಬೆಂಗಳೂರು, ಸೆಪ್ಟೆಂಬರ್ 10 : ಪ್ರತಿ ಬಾರಿ ಕಾವೇರಿ ವಿವಾದ ಭುಗಿಲೆದ್ದಾಗಲೂ ಪ್ರತಿಭಟನಾನಿರತರ ಟಾರ್ಗೆಟ್ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ. ಆದರೆ, ಬಾರಿ ಕರ್ನಾಟಕದ ಪರ ವಾದ ಮಾಡುವ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿರುದ್ಧ ಅಕ್ರೋಶ ವ್ಯಕ್ತವಾಗುತ್ತಿದೆ.
ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು ಕಾವೇರಿ ವಿಚಾರದಲ್ಲಿ ಸರಿಯಾಗಿ ವಾದ ಮಂಡನೆ ಮಾಡದಿರುವ ನಾರಿಮನ್ ವಿರುದ್ಧ ದೂರು ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ನಾರಿಮನ್ ಅವರನ್ನು ಬದಲಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಮನವಿ ಮಾಡಲಾಗಿದೆ.[ಕಾವೇರಿ ಕೇಸ್ : ನಾರಿಮನ್ ಆಯ್ಕೆ ಮಾಡಿದ್ದು ಯಾರು?]

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವು ಬಾರಿ ನಾರಿಮನ್ ಅವರನ್ನು ಸಮರ್ಥಿಸಿ ಕೊಂಡಿದ್ದಾರೆ. ಕಳೆದ ವಾರ ಸುಪ್ರೀಂಕೋರ್ಟ್ 10 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶ ನೀಡಿದೆ. ನಂತರ, ಪ್ರತಿಭಟನೆಗಳು ನಡೆಯುತ್ತಿವೆ. ನಾರಿಮನ್ ಬದಲಾವಣೆ ಬಗ್ಗೆ ಎದ್ದಿರುವ ಚರ್ಚೆಗಳಿಗೆ ಕರ್ನಾಟಕ ಕಾನೂನು ತಂಡ ಅಸಮಾಧಾನ ವ್ಯಕ್ತವಪಡಿಸಿದೆ.[ತಮಿಳುನಾಡಿಗೆ ಕಾವೇರಿ ನೀರು, ಸೋಮವಾರ ಸುಪ್ರೀಂಗೆ ಅರ್ಜಿ]
ಒನ್ ಇಂಡಿಯಾ ಜೊತೆ ಮಾತನಾಡಿರುವ ವಕೀಲ ಮೋಹನ್ ಕಾತರಕಿ ಅವರು, 'ಈ ಬಗ್ಗೆ ಮೊದಲ ಚರ್ಚೆ ನಡೆದಿದ್ದು ಸರ್ವಪಕ್ಷಗಳ ಸಭೆಯಲ್ಲಿ. ಕೆ.ಎಸ್.ಈಶ್ವರಪ್ಪ, ವೈಎಸ್ವಿ ದತ್ತಾ ಅವರು ನಾರಿಮನ್ ಯಾವುದಾದರೂ ಕೇಸು ಗೆದ್ದುಕೊಟ್ಟಿದ್ದಾರೆಯೇ?' ಎಂದು ಕೇಳಿದ್ದರು, ಇದು ದುರದೃಷ್ಟಕರ' ಎಂದು ಹೇಳಿದ್ದಾರೆ.
ಕಡಿಮೆ ಶುಲ್ಕ ಪಡೆತ್ತಾರೆ : ಮೋಹನ್ ಕಾತರಕಿ ಅವರು ನಾರಿಮನ್ ಅವರ ಶುಲ್ಕದ ಬಗ್ಗೆ ನಡೆಯುತ್ತಿರುವ ಚರ್ಚೆ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 'ಕರ್ನಾಟಕದ ಪರವಾಗಿ ವಾದ ಮಂಡನೆ ಮಾಡಲು ಅವರು ಕಡಿಮೆ ಶುಲ್ಕವನ್ನು ತೆಗೆದುಕೊಳ್ಳುತ್ತಿದ್ದಾರೆ. ಅವರ ಹಲವು ಜ್ಯೂನಿಯರ್ಗಳು ಹೆಚ್ಚು ಶುಲ್ಕ ಪಡೆಯುತ್ತಿದ್ದಾರೆ' ಎಂದು ಹೇಳಿದ್ದಾರೆ.
'ಜಯಲಲಿತಾ ಅವರ ಪರವಾಗಿ ನಾರಿಮನ್ ವಾದ ಮಂಡನೆ ಮಾಡಿರುವ ಬಗ್ಗೆ ಚರ್ಚೆ ನಡೆಸುವ ಅಗತ್ಯವಿಲ್ಲ. ವಕೀಲರಾಗಿ ಅವರು ಯಾರ ಪರವಾಗಿ ಬೇಕಾದರೂ ವಾದ ಮಾಡಬಹುದು. ಅದಕ್ಕೆ ಯಾವುದೇ ಅಡೆ-ತಡೆ ಇಲ್ಲ. ಇದಕ್ಕೂ ಕಾವೇರಿ ವಿವಾದದ ವಾದ ಮಂಡನೆಗೂ ಸಂಬಂಧವಿಲ್ಲ' ಎಂದು ಹೇಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications