Cauvery dispute; ಸುಪ್ರೀಂನಲ್ಲಿ ಇಂದು ಅರ್ಜಿ ವಿಚಾರಣೆ ಅನುಮಾನ
ಬೆಂಗಳೂರು, ಸೆಪ್ಟೆಂಬರ್ 01; ಕರ್ನಾಟಕದಲ್ಲಿ ಮುಂಗಾರು ಕೊರತೆಯ ನಡುವೆಯೇ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ಕಾವೇರಿ ನೀರಿ ಹರಿಸಲಾಗುತ್ತಿದೆ. ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯುವುದು ಅನುಮಾನವಾಗಿದೆ.
ತಮಿಳುನಾಡು ಸರ್ಕಾರ ಕಾವೇರಿ ನದಿ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚನೆ ಕೊಡಬೇಕು ಎಂದು ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಆಗಸ್ಟ್ 25ರಂದು ಅರ್ಜಿ ವಿಚಾರಣೆ ನಡೆಸಿದ್ದ ತ್ರಿ ಸದಸ್ಯ ಪೀಠ ಕೆಲವು ಸೂಚನೆಗಳನ್ನು ನೀಡಿ, ಸೆಪ್ಟೆಂಬರ್ 1ಕ್ಕೆ ವಿಚಾರಣೆ ಮುಂದೂಡಿತ್ತು.

ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿರುವ ಅರ್ಜಿಯ ವಿರುದ್ಧ ಕರ್ನಾಟಕ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಬಿ. ಆರ್. ಗವಾಯಿ, ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಬಿ. ಕೆ. ಮಿಶ್ರಾ ಒಳಗೊಂಡ ತ್ರಿ ಸದಸ್ಯಪೀಠದಲ್ಲಿ ನಡೆಯಬೇಕಿದೆ.
ಏಕೆ ವಿಚಾರಣೆ ಇಲ್ಲ?; ಸುಪ್ರೀಂಕೋರ್ಟ್ಗೆ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಕುರಿತು ಅರ್ಜಿಯೊಂದು ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪಂಚ ನ್ಯಾಯಮೂರ್ತಿಗಳ ಪೀಠ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.
ಈ ಪೀಠದಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಸುವ ಪೀಠದ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಬಿ. ಆರ್. ಗವಾಯಿ ಸಹ ಇದ್ದಾರೆ. ಆದ್ದರಿಂದ ತ್ರಿ ಸದಸ್ಯ ಪೀಠ ಮಧ್ಯಾಹ್ನದ ತನಕ ತಮಿಳುನಾಡು ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ.
ಮಧ್ಯಾಹ್ನದ ಬಳಿಕ ಬಿ. ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಬಿ. ಕೆ. ಮಿಶ್ರಾ ಅವರು ಅರ್ಜಿ ವಿಚಾರಣೆಗೆ ಕೂತರೂ ಸಹ ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಗೈರು ಇರಲಿದ್ದಾರೆ. ಆದ್ದರಿಂದ ತಮಿಳುನಾಡು, ಕರ್ನಾಟಕ ನಡುವಿನ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯುವುದು ಅನುಮಾನವಾಗಿದೆ.
ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡುವ ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಖಾತೆ ಸಚಿವ ಡಿ. ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಗುರುವಾರ ಅವರು ರಾಜ್ಯದ ವಕೀಲರ ತಂಡದ ಜೊತೆ ಸಭೆಯನ್ನು ನಡೆಸಿ, ರಾಜ್ಯದ ಪರವಾಗಿ ಮಂಡಿಸಲಿರುವ ವಾದದ ಕುರಿತು ಚರ್ಚೆ ನಡೆಸಿದರು.
ಆಗಸ್ಟ್ 25ರ ವಿಚಾರಣೆ ಸಮಯದಲ್ಲಿ ಸುಪ್ರೀಂಕೋರ್ಟ್ ಎರಡೂ ರಾಜ್ಯಗಳ ಜಲಾಶಯಗಳ ವಾಸ್ತವ ಸ್ಥಿತಿಯ ಕುರಿತು ವರದಿ ಸಲ್ಲಿಕೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿತ್ತು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ಕರೆದು ಪ್ರತಿನಿತ್ಯ ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಸೂಚನೆ ನೀಡಿತ್ತು.
ಕರ್ನಾಟಕ ರಾಜ್ಯದ ರೈತರ ವಿರೋಧದ ನಡುವೆಯೇ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದರಿಂದಾಗಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 100 ಅಡಿಗೆ ಕುಸಿದಿದೆ. ಕಾವೇರಿ ಜಲಾನಯನ ಪ್ರದೇಶಗಳ ಡ್ಯಾಂಗಳ ಕುರಿತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಪ್ರೀಂಕೋರ್ಟ್ಗೆ ಗುರುವಾರ ಅಫಿಡೆವಿಟ್ ಸಲ್ಲಿಕೆ ಮಾಡಿದೆ.
ಕೋರ್ಟ್ಗೆ ಸಲ್ಲಿಕೆ ಮಾಡಿರುವ ಅಫಿಡೆವಿಟ್ನಲ್ಲಿ ಕರ್ನಾಟಕ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಆದರೆ ತಮಿಳುನಾಡು ಸರ್ಕಾರ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಹೇಳಿದೆ. ಇದರಿಂದಾಗಿ ಸುಪ್ರೀಂಕೋರ್ಟ್ನಲ್ಲಿ ನಡೆಯಲಿರುವ ವಿಚಾರಣೆ ಕುತೂಹಲಕ್ಕೆ ಕಾರಣವಾಗಿದೆ.
ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ವೇಳೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ ಎಂದು ಹೇಳಿದರೆ ಕರ್ನಾಟಕಕ್ಕೆ ರಿಲೀಫ್ ಸಿಗಲಿದೆ. ಇಲ್ಲವಾದಲ್ಲಿ ಕೆಆರ್ಎಸ್ ಖಾಲಿಯಾಗಿ ಬೆಂಗಳೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಮೈಸೂರು ನಗರಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications