ಕಾವೇರಿ ನೀರು ಹಂಚಿಕೆ, ಕರ್ನಾಟಕದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ ಸುಪ್ರೀಂಕೋರ್ಟ್ ಶುಕ್ರವಾರದಂದು ಆದೇಶ ನೀಡಿದೆ
ನವದೆಹಲಿ, ಏಪ್ರಿಲ್ 07: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ ಸುಪ್ರೀಂಕೋರ್ಟ್ ಶುಕ್ರವಾರದಂದು ಆದೇಶ ನೀಡಿದೆ. ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
ಕರ್ನಾಟಕ ಒಟ್ಟು ಮೂರು ಮರು ಪರಿಶೀಲನಾ ಅರ್ಜಿಗಳನ್ನು ಹಾಕಿತ್ತು. ಕಾವೇರಿ ಜಲ ನಿರ್ವಹಣಾ ಮಂಡಳಿ ಸ್ಥಾಪನೆಗೆ ನೀಡಿರುವ ಆದೇಶವನ್ನು ರದ್ದುಪಡಿಸಬೇಕು. [ಜುಲೈ 11 ರ ತನಕ ತಮಿಳುನಾಡಿಗೆ ಕಾವೇರಿ ಹರಿಸಿ, ಕರ್ನಾಟಕಕ್ಕೆ ಸೂಚನೆ]

ತಮಿಳುನಾಡಿಗೆ ಆಕ್ಟೋಬರ್ 06ರತನಕ 6,000 ಕ್ಯೂಸೆಕ್ಸ್ ನೀರು ಹರಿಸಬೇಕು ಎಂಬ ಆದೇಶ ಮರು ಪರಿಶೀಲನೆ ಮಾಡಬೇಕು. ಮುಂಗಾರು ದುರ್ಬಲವಾಗಿರುವ ಮುನ್ಸೂಚನೆ ಸಿಕ್ಕಿರುವುದರಿಂದ ಮುಂದಿನ ಮಳೆಗಾಲದ ತನಕ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶಿಸುವಂತೆ ಕೋರಲಾಗಿತ್ತು.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]
ಈಶಾನ್ಯ್ ಮಾರುತಗಳಿಂದ ಉತ್ತಮ ಮುಂಗಾರಿನ ನಿರೀಕ್ಷೆಯಿಲ್ಲ. ಕರ್ನಾಟಕ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ನಡೆಸಿದೆ. ಕಾವೇರಿ ಕೊಳ್ಳದಲ್ಲಿ ಕುಡಿಯುವ ನೀರಿನ ಕ್ಷಾಮ ಉಂಟಾಗಿದೆ ಎಂದು ಕರ್ನಾಟಕ ವಾದಿಸಿದೆ.












Click it and Unblock the Notifications