ಕೆಆರ್ಎಸ್ನಲ್ಲಿ 350 ಅಡಿ ಎತ್ತರದ ಕಾವೇರಿ ತಾಯಿ ಪ್ರತಿಮೆ ನಿರ್ಮಾಣ
Recommended Video

ಬೆಂಗಳೂರು, ನವೆಂಬರ್ 15: ಹಗಲಿನಲ್ಲಿ ಮನಮೋಹಕ ಪರಿಸರ, ಸಂಜೆ ವೇಳೆ ಬೆಳಕಿನ ರಂಗು ಪಡೆದುಕೊಂಡು ಪ್ರವಾಸಿಗರನ್ನು ಸೆಳೆಯುತ್ತಿರುವ ಮಂಡ್ಯದ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯ ಮತ್ತಷ್ಟು ಕಂಗೊಳಿಸಲಿದೆ.
ಕೆಆರ್ಎಸ್ ಅನ್ನು ಅಮೆರಿಕದ ಡಿಸ್ನಿಲ್ಯಾಂಡ್ನಂತೆ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಅಲ್ಲಿ ಬೃಹತ್ ಪ್ರತಿಮೆ ನಿರ್ಮಾಣವಾಗಲಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಹೊಸ ಯೋಜನೆಗೆ ಮುಂದಾಗಿದೆ.
ಕಾವೇರಿ ತಾಯಿಯ 350 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕನ್ನಡಿಗರ ಭಾವನಾತ್ಮಕತೆಯ ಪ್ರತೀಕವಾಗಿರುವ ಕಾವೇರಿ ತಾಯಿಯನ್ನು ಈ ಪ್ರತಿಮೆಯ ರೂಪದಲ್ಲಿ ಕಾಣಲಾಗುತ್ತಿದೆ.
ಈ ಪ್ರತಿಮೆಗೆ 125 ಅಡಿ ಎತ್ತರದ ನೆಲಗಟ್ಟು ಇರಲಿದ್ದು, ಸಾರ್ವಜನಿಕರು ಅಣೆಕಟ್ಟು ವೀಕ್ಷಿಸುವ ಗ್ಯಾಲರಿಯಲ್ಲಿ ಇದನ್ನು ನಿರ್ಮಿಸಲಾಗುವುದು.

ನಾಲ್ವಡಿ ಒಡೆಯರ್ ಪ್ರತಿಮೆ ಪಕ್ಕದಲ್ಲಿ
ರಾಜ್ಯದಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರವಾಸೋದ್ಯಮ ಮತ್ತು ಜಲ ಸಂಪನ್ಮೂಲ ಇಲಾಖೆಗಳು ಜಂಟಿಯಾಗಿ ಈ ಯೋಜನೆಯನ್ನು ಕೈಗೆತ್ತಿಕೊಂಡಿವೆ. ಮೈಸೂರು ರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಪಕ್ಕದಲ್ಲಿಯೇ ಈ ಪ್ರತಿಮೆ ನಿರ್ಮಾಣವಾಗಲಿದ್ದು, ಎರಡೂ ಪ್ರತಿಮೆಗಳು ಈ ಭಾಗದ ಪ್ರಮುಖ ಆಕರ್ಷಣೆಗಳಾಗಲಿವೆ.

ಯೋಜನೆಗೆ ಅನುಮತಿ
ಬುಧವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಪ್ರತಿಮೆ ನಿರ್ಮಾಣ ಯೋಜನೆಗೆ ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಈ ಯೋಜನೆಗೆ ಅನುಮತಿ ನೀಡಿದರು.
ಮಹಿಳೆ ಹಿಡಿದ ಬಿಂದಿಗೆಯಿಂದ ನೀರು ಹೊರಬರುವ ಚಿತ್ರದ ಮಾದರಿಯಲ್ಲಿಯೇ ಈ ಪ್ರತಿಮೆ ನಿರ್ಮಾಣವಾಗಲಿದ್ದು, ಬಿಂದಿಗೆಯಿಂದ ನಿರಂತರವಾಗಿ ನೀರು ಸುರಿಯುವಂತೆ ಪಂಪ್ ಮೂಲಕ ನೀರು ಹರಿಸಲಾಗುವುದು.

ಅಮ್ಯೂಸ್ಮೆಂಟ್ ಪಾರ್ಕ್
ಇಡೀ ಯೋಜನೆಯಲ್ಲಿ ಪ್ರಮುಖವಾಗಿ ಗಮನ ಸೆಳೆಯುವುದು ಅಮ್ಯೂಸ್ಮೆಂಟ್ ಪಾರ್ಕ್. ಇದರಲ್ಲಿ ಪೆಂಗ್ವಿನ್ ಪಾರ್ಕ್, ಸುಗಂಧದ ಪಾರ್ಕ್ ಮುಂತಾದ ಥೀಮ್ ಪಾರ್ಕ್ಗಳು ಸಹ ಇರಲಿವೆ. ಐತಿಹಾಸಿಕ ಹಂಪಿ, ಬೇಲೂರು, ಹಳೆಬೀಡುವಿನ ಸೊಬಗನ್ನು ನೆನಪಿಸುವ ನಕಲು ಸೃಷ್ಟಿಗಳು ಸಹ ಇಲ್ಲಿ ನೆಲೆಯೂರಲಿವೆ. ಜತೆಗೆ ಹೋಟೆಲ್ ಹಾಗೂ ಫುಡ್ಕೋರ್ಟ್ಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ.
ರಾಜ್ಯ ಹಾಗೂ ದೇಶದ ಗಣ್ಯ ವ್ಯಕ್ತಿಗಳ ಪ್ರತಿಮೆಗಳನ್ನು ಒಳಗೊಳ್ಳುವ ಮೇಣದ ಮ್ಯೂಸಿಯಂ ಕೂಡ ನಿರ್ಮಾಣವಾಗಲಿದೆ.

ಎರಡು ತಿಂಗಳಿನಲ್ಲಿ ಟೆಂಡರ್
ಮುಂದಿನ ಎರಡು ತಿಂಗಳಿನಲ್ಲಿ ಈ ಕುರಿತು ಟೆಂಡರ್ ಹೊರಡಿಸಲಾಗುವುದು. ಬಿಲ್ಡ್ ಓನ್ ಆಪರೇಟ್ ಟ್ರಾನ್ಸ್ ಫರ್ ಮಾದರಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ.

1500-2000 ಕೋಟಿ ರೂ. ವೆಚ್ಚ
ಕೆಆರ್ಎಸ್ ಸುತ್ತಮುತ್ತ 500 ಎಕರೆ ಭೂಮಿ ಲಭ್ಯವಿದೆ. ಇದರಲ್ಲಿ ಸುಮಾರು 350 ಎಕರೆ ಭೂಮಿಯನ್ನು ಯೋಜನೆಗಾಗಿ ಬಳಸಿಕೊಳ್ಳಲಾಗುತ್ತದೆ. ಇಡೀ ಯೋಜನೆಗೆ 1500-2000 ಕೋಟಿ ರೂ. ತಗಲುತ್ತದೆ. ಜೈಪುರ ಮೂಲದ ವಾಸ್ತುಶಿಲ್ಪಿಗಳ ತಂಡ ಈ ಯೋಜನೆಯನ್ನು ನಿಭಾಯಿಸಲಿದೆ.
ಈ ಯೋಜನೆಯಿಂದ ಸಮೀಪದ ಬೃಂದಾವನ ಉದ್ಯಾನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದೂ ಅವರು ಸ್ಪಷ್ಟನೆ ನೀಡಿದ್ದಾರೆ.

ಬಜೆಟ್ನಲ್ಲಿಯೇ ಘೋಷಣೆ
ಕೆಆರ್ಎಸ್ಅನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಜುಲೈ 5ರಂದು ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಸ್ತಾವ ಮುಂದಿರಿಸಿದ್ದರು.
ಅದಕ್ಕಾಗಿ ಆರಂಭದಲ್ಲಿ ಐದು ಕೋಟಿ ರೂ. ಮೀಸಲಿರಿಸಿದ್ದರು. ಜಾಗತಿಕ ಹೂಡಿಕೆದಾರರು ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಸಿದ್ಧರಾಗಿದ್ದಾರೆ ಎಂದು ತಿಳಿಸಿದ್ದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications