ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಚಿತ್ರಗಳು

|
Google Oneindia Kannada News

ಮಡಿಕೇರಿ, ಅ.19 : ಕನ್ನಡ ನಾಡಿನ ಜೀವನದಿ ಕಾವೇರಿ ತನ್ನ ಉಗಮಸ್ಥಾನ ತಲಕಾವೇರಿಯಲ್ಲಿ ಗುರುವಾರ ಮಧ್ಯಾಹ್ನ ಪವಿತ್ರ ತೀರ್ಥೋದ್ಭವವಾಗಿದೆ. ಕಾವೇರಿ ತುಲಾ ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿದ್ದರು.

ಈ ಬಾರಿಯ ಅ.17ರ ಗುರವಾರ ಮಧ್ಯಾಹ್ನ 12.01ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ತೀರ್ಥೋದ್ಭವವಾಯಿತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತ ಸಮೂಹ ಕಾವೇರಿಗೆ ಬ್ರಹ್ಮಕುಂಡಿಕೆಯಿಂದ ಚಿಮ್ಮಿದ ಪುಣ್ಯಜಲವನ್ನು ಸಂಗ್ರಹಿಸಿಲು ಮುಗಿಬಿದ್ದಿದ್ದರು.

ತೀರ್ಥೋದ್ಭವದ ನಂತರ ಭಕ್ತರು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ತುಲಾ ಸಂಕ್ರಮಣ ಜಾತ್ರೆಯ ಹಿನ್ನಲೆಯಲ್ಲಿ ಅ.20ರ ವರೆಗೆ ತಲಕಾವೇರಿಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯಿಂದ ಛತ್ರದಲ್ಲಿ ಅನ್ನದಾನ ವ್ಯವಸ್ಥೆ ಮಾಡಲಾಗಿದೆ.

ಅರ್ಚಕ ಸಮುದಾಯ ಧಾರ್ಮಿಕ ಕೈಂಕರ್ಯಗಳಿಗಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡರೆ. ಪವಿತ್ರ ಕ್ಷೇತ್ರಕ್ಕೆ ಆಗಮಿಸುವ ಭಕಕ್ತಾದಿಗಳಿಗೆ ತೊಂದರೆ ಆಗದಂತೆ ಧಾರ್ಮಿಕ ದತ್ತಿ ಇಲಾಖೆ, ಭಗಂಡೇಶ್ವರ ತಲಕಾವೇರಿ ದೇವಸ್ಥಾನ ಸಮಿತಿ ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ. ಚಿತ್ರಗಳಲ್ಲಿ ನೋಡಿ ಪವಿತ್ರ ತೀರ್ಥೋದ್ಭವ.

ಧನುರ್ ಲಗ್ನದಲ್ಲಿ ತೀರ್ಥೋದ್ಭವ

ಧನುರ್ ಲಗ್ನದಲ್ಲಿ ತೀರ್ಥೋದ್ಭವ

ಈ ಬಾರಿ ಅ.17ರಂದು ಗುರುವಾರ ಮಧ್ಯಾಹ್ನ 12.01ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ತೀರ್ಥೋದ್ಭವವಾಯಿತು. ಸಾವಿರಾರು ಭಕ್ತರು ಪವಿತ್ರ ತೀರ್ಥೋದ್ಭವ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬ್ರಹ್ಮಕುಂಡಿಕೆಯಿಂದ ಚಿಮ್ಮಿದ ಪುಣ್ಯಜಲವನ್ನು ಸಂಗ್ರಹಿಸಿಲು ಮುಗಿಬಿದ್ದಿದ್ದರು.

ಪುಣ್ಯ ಸ್ನಾನ

ಪುಣ್ಯ ಸ್ನಾನ

ತೀರ್ಥೋದ್ಭವದ ನಂತರ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ಭಕ್ತಾದಿಗಳ ಪುಣ್ಯ ಸ್ನಾನಕ್ಕೆ ಅಗತ್ಯ ವ್ಯವಸ್ಥೆಯನ್ನು ದೇವಾಲಯದ ಆಡಳಿತ ಮಂಡಳಿ ಸ್ಥಳದಲ್ಲಿ ಕಲ್ಪಿಸಿರುತ್ತದೆ.

ಪಿಂಡ ಪ್ರದಾನ, ಕೇಶ ಮುಂಡನ

ಪಿಂಡ ಪ್ರದಾನ, ಕೇಶ ಮುಂಡನ

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತರು ಕೇಶ ಮುಂಡನ ಮಾಡಿಸಿಕೊಳ್ಳುತ್ತಾರೆ. ಇದಕ್ಕಾಗಿಯೇ ನೂತನವಾಗಿ ಕಟ್ಟಡವೊಂದನ್ನು ನಿರ್ಮಿಸಲಾಗಿದೆ. ಪಿಂಡ ಪ್ರದಾನಕ್ಕೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇವೆರಡು ಕಾರ್ಯಗಳಿಗೆ ರೂ. 50 ಶುಲ್ಕ ಮತ್ತು ಟೋಕನ್ ವ್ಯವಸ್ಥೆ ಕಲ್ಪಿಸಲಾಗಿದೆ.

ಅನ್ನದಾನವಿರುತ್ತದೆ

ಅನ್ನದಾನವಿರುತ್ತದೆ

ತುಲಾ ಸಂಕ್ರಮಣ ಜಾತ್ರೆಯ ಹಿನ್ನಲೆಯಲ್ಲಿ ಮೂರು ದಿನಗಳ ವರೆಗೆ ತಲಕಾವೇರಿಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯಿಂದ ಛತ್ರದಲ್ಲಿ ಅನ್ನದಾನ ವ್ಯವಸ್ಥೆ ಮಾಡಲಾಗಿರುತ್ತದೆ. ಇಲ್ಲಿಗೆ ಆಗಮಿಸುವ ಭಕ್ತರು, ಪುಣ್ಯ ಸ್ನಾನ ಮಾಡಿ, ಪ್ರಸಾದ ಸ್ವೀಕರಿಸುತ್ತಾರೆ.

ದೇವಾಸ್ಥಾನದಿಂದ ಅನ್ನಸಂತರ್ಪಣೆ

ದೇವಾಸ್ಥಾನದಿಂದ ಅನ್ನಸಂತರ್ಪಣೆ

ಕಾವೇರಿ ಮಾತೆಗೆ ಪೂಜೆ ಸಲ್ಲಿಸಲು ಬರುವ ಭಕ್ತಾದಿಗಳಿಗೆ ಕಾವೇರಿ ತೀಥೋದ್ಭವ ಅನ್ನಸಂತರ್ಪಣೆ ಟ್ರಸ್ಟ್‌ ಕಳೆದ 12 ವರ್ಷಗಳಿಂದ ಅನ್ನದಾನ ಮಾಡುತ್ತಿತ್ತು. ಕೆಲವು ಸಂಘಟನೆಗಳೂ ಸಹ ಅನ್ನಸಂತರ್ಪಣೆ ಮಾಡುತ್ತಿವೆ. 2012ರಿಂದ ದೇವಸ್ಥಾನ ಸಮಿತಿಯೇ ಅನ್ನಸಂತರ್ಪಣೆ ಕಾರ್ಯ ಮಾಡುತ್ತಿದೆ.

ಭಕ್ತರ ಸಮಾಗಮ

ಭಕ್ತರ ಸಮಾಗಮ

ಪ್ರತಿ ವರ್ಷ ಅಕ್ಟೋಬರ್ ತಿಂಗಳಲ್ಲಿ ಕಾವೇರಿ ತೀರ್ಥೋದ್ಭವ ನಡೆಯುತ್ತದೆ. ಈ ವೇಳೆಯಲ್ಲಿ ಕರ್ನಾಟಕ ಕೇರಳ, ತಮಿಳುನಾಡು, ಪುದುಚೇರಿ ರಾಜ್ಯದ ಭಕ್ತರು ಕಾವೇರಿ ಮಾತೆಯನ್ನು ಪೂಜಿಸಲು ಇಲ್ಲಿಗೆ ಆಗಮಿಸುತ್ತಾರೆ.

ಇಲ್ಲಿದೆ ವಸ್ತ್ರ ಸಂಹಿತೆ

ಇಲ್ಲಿದೆ ವಸ್ತ್ರ ಸಂಹಿತೆ

ಕ್ಷೇತ್ರಕ್ಕೆ ಬರುವ ಭಕ್ತರು ತುಂಡುಡುಗೆ ತೊಡುವಂತಿಲ್ಲ. ಸ್ಲೀವ್ ಲೆಸ್, ಶಾರ್ಟ್ಸ್, ಪಾರದರ್ಶಕ ಬಟ್ಟೆ, ಬರ್ಮುಡಾ ತೊಟ್ಟು ಪುರುಷರು ಮಹಿಳೆಯರು ದೇಗುಲ ಪ್ರವೇಶಿಸುವಂತಿಲ್ಲ. ಇಂಥ ಉಡುಗೆ ತೊಟ್ಟವರನ್ನು ದೇವಾಲಯ ದ್ವಾರದಲ್ಲೇ ಸೆಕ್ಯೂರಿಟಿ ಗಾರ್ಡ್ ತಡೆಯುತ್ತಾರೆ.

ಬಿಗಿ ಭದ್ರತೆ

ಬಿಗಿ ಭದ್ರತೆ

ತೀರ್ಥೋದ್ಭವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಪೊಲೀಸ್ ಇಲಾಖೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುತ್ತದೆ. ಭಾಗಮಂಡಲ ಮತ್ತು ತಲಕಾವೇರಿಯ 25 ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತದೆ. ಜಿಲ್ಲಾಡಳಿತ ಹಾಗೂ ದೇವಸ್ಥಾನ ಸಮಿತಿ ಭಕ್ತರಿಗೆ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತದೆ.

ತುರ್ತು ಚಿಕಿತ್ಸೆ ವ್ಯವಸ್ಥೆ

ತುರ್ತು ಚಿಕಿತ್ಸೆ ವ್ಯವಸ್ಥೆ

ನಾಲ್ಕು ರಾಜ್ಯಗಳ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವುದರಿಂದ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಶೌಚಾಲಯ, ಆಂಬ್ಯುಲೆನ್ಸ್ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಜಿಲ್ಲಾಡಳಿತ ಕಲ್ಪಿಸಲಾಗಿದೆ.

English summary
The famous annual Teertodbhava would took place at Talacauvery in Kodagu On Thursday, October 17 in the Dhanur Lagna. Goddess Cauvery is believed to emerge from the Brahmakundike (tiny pond-like niche) at Talacauvery in the form of “Teerta” (holy water) at the appointed time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X