ಜಯಾ-ಸಿದ್ದರಾಮಯ್ಯ ಕುಂತು ಮಾತಾಡಿದ್ರೆ ಸಮಸ್ಯೆ ಇರಲ್ಲ: ಶೆಟ್ಟರ್
ಬೆಂಗಳೂರು, ಸೆ. 23: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲಿಸದಿರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿಗಾಗಿ ಇಂಥ ನಿರ್ಣಯ ಕೈಗೊಳ್ಳುವುದರಲ್ಲಿ ತಪ್ಪೇನಿಲ್ಲ, ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ, ಎಚ್ ಡಿ ಕುಮಾರಸ್ವಾಮಿ ಒಕ್ಕೊರಲಿನಿಂದ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಬೀಡಬೇಕೆ? ಬೇಡವೇ? ಕುಡಿಯುವ ನೀರಿಗಾಗಿ ಏನು ಮಾಡಬೇಕು? ಕಾನೂನು ಹೋರಾಟ ಹೇಗೆ ಸಾಗಿದೆ ಎಂಬುದರ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ವಿಶೇಷ ಅಧಿವೇಶನ ಶುಕ್ರವಾರ ನಡೆಸಲಾಗಿದೆ.
ಕುಡಿಯುವ ನೀರು ಮುಖ್ಯ: ಕುಡಿಯುವ ನೀರು ಮುಖ್ಯ, ಸದ್ಯದ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಅನಿವಾರ್ಯ ಎಂದು ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ಒಕ್ಕೊರಲ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪಕ್ಷಾತೀತವಾಗಿ ಬೆಂಬಲ ಸಿಕ್ಕಿದೆ. [LIVE:ಕನಿಷ್ಠ 40 ಸಾವಿರ ಕೋಟಿ ರಾಜ್ಯಕ್ಕೆ ನಷ್ಟ: ಈಶ್ವರಪ್ಪ]

ನೀರಿನ ಮಟ್ಟ ಕುಸಿತ: ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ನಾಲ್ಕು ಅಣೆಕಟ್ಟುಗಳಲ್ಲಿರುವ ನೀರಿನ ಪ್ರಮಾಣ 27.6 ಟಿಎಂಸಿ ಟಿಎಂಸಿ ಅಡಿ ದಾಟುವುದಿಲ್ಲ. ಬೆಂಗಳೂರು, ಮೈಸೂರು, ಮಂಡ್ಯ ಭಾಗಗಳ ಕುಡಿಯುವ ನೀರಿಗಾಗಿ 32ಕ್ಕೂ ಅಧಿಕ ಟಿಎಂಸಿ ಅಡಿ ನೀರು ಅಗತ್ಯವಿದೆ. ಹೀಗಾಗಿ ಕುಡಿಯುವ ನೀರಿಗಾಗಿ ಇಂಥ ನಿರ್ಣಯ ತಪ್ಪಲ್ಲ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟರು.[ತಮಿಳರ 'ಅಮ್ಮ' ಜಯಲಲಿತಾರಿಗೆ ಏನು ಕಾಯಿಲೆ?]
ಸಾಂಬಾ ಬೆಳೆಗೆ ನೀರು ಬಿಡಲು ಕೇಳುತ್ತಿದ್ದರೆ, ಇಲ್ಲಿ ಕುಡಿಯಲು ನೀರಿಲ್ಲ. ಜನರು ಇಲ್ಲಿ ತೆಗೆದುಕೊಳ್ಳುವ ನಿರ್ಣಯದ ಬಗ್ಗೆ ಕಾತುರರಾಗಿ ಕಾಯುತ್ತಿದ್ದಾರೆ. ಕಾವೇರಿ ಕೊಳ್ಳದ ಜನತೆ ಬರ ಪರಿಸ್ಥಿತಿಯಿಂದ ಬಳಲಿದ್ದಾರೆ. ಸಹಜ ಸ್ಥಿತಿ ಬರಲು 2017ರ ಮಾರ್ಚ್ ತನಕ ಕಾಯಬೇಕು.
ತಮಿಳುನಾಡು ಸಿಎಂ ಜತೆ ಮಾತನಾಡಿ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಸಾಧ್ಯವಿದೆ. ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಇಲ್ಲಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಬೇಕಿದೆ. ಸಿಎಂ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ತೆಗೆದುಕೊಳ್ಳುವ ನಿಲುವಿಗೆ ಬಿಜೆಪಿ ಬೆಂಬಲಿಸಲಿದೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications