ಸುಪ್ರೀಂನಲ್ಲಿ ಸಲ್ಲಿಕೆಯಾಗದ ಮೇಲ್ಮನವಿ, ಕಾವೇರಿ ವಿವಾದ ಅಂತ್ಯ?
ನವದೆಹಲಿ, ಮಾರ್ಚ್ 21: ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್ ಕಾವೇರಿ ಪ್ರಕರಣದಲ್ಲಿ ಅಂತಿಮ ತೀರ್ಪು ನೀಡಿತ್ತು. ಇದೀಗ ತೀರ್ಪು ನೀಡಿ ತಿಂಗಳಾಗುತ್ತಾ ಬಂದರೂ ಕರ್ನಾಟಕವಾಗಲಿ, ತಮಿಳುನಾಡಾಗಲಿ ಮೇಲ್ಮನವಿ ಸಲ್ಲಿಸಿಲ್ಲ.
ಈ ಮೂಲಕ 200 ವರ್ಷಗಳ ಹಿಂದಿನ ಕಾವೇರಿ ಜಲ ವಿವಾದ ಅಂತ್ಯವಾಗಿದೆ ಎಂದು ಕಾನೂನು ತಜ್ಞರು ವಿಶ್ಲೇಷಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ, ಕರ್ನಾಟಕ ಪರ ಹಿರಿಯ ವಕೀಲ ಮೋಹನ್ ಕಾತರಕಿ, ಕೊನೆಗೂ ಪ್ರಕರಣದಲ್ಲಿ ಶಾಂತಿ ನೆಲೆಸಿದೆ ಎಂದಿದ್ದಾರೆ.
"ಎರಡೂ ರಾಜ್ಯಗಳು ಈ ವಿಚಾರದಲ್ಲಿ ಶಾಂತಿ ಕಾಪಾಡಲು ನಿರ್ಧರಿಸಿದ್ದು ಇದೊಂದು ಐತಿಹಾಸಿಕ ತೀರ್ಮಾನ," ಎಂದವರು ಹೇಳಿದ್ದಾರೆ. ಈ ತೀರ್ಪಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಸಮಯಾವಕಾಶವಿದ್ದು ತಮಿಳುನಾಡು ಮತ್ತು ಕರ್ನಾಟಕ ಎರಡೂ ಮೇಲ್ಮನವಿ ಸಲ್ಲಿಸಿಲ್ಲ.

ಮೇಲ್ಮನವಿ ಸಲ್ಲಿಸಲು ವಿಳಂಬವಾಗಿದ್ದಕ್ಕೆ ಕಾರಣ ನೀಡಿ ಈಗಲೂ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ಈ ಸಾಧ್ಯತೆಗಳು ತೀರಾ ಕಡಿಮೆ ಎನ್ನುತ್ತಾರೆ ಮೋಹನ್ ಕಾತರಕಿ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಸದ್ಯಕ್ಕೆ ತೀರ್ಪಿನ ಬಗ್ಗೆ ಕೇರಳ ಮಾತ್ರ ಮೇಲ್ಮನವಿ ಸಲ್ಲಿಸಿದೆ. ಜತೆಗೆ ಇದರಲ್ಲಿ ಸೀಮಿತ ಅಂಶಗಳು ಮಾತ್ರ ಇದೆ. ಜತೆಗೆ ಪ್ರಕರಣದಲ್ಲಿ ಕೇರಳ ಮುಖ್ಯ ಕಕ್ಷಿದಾರ ರಾಜ್ಯವೂ ಅಲ್ಲ. ಒಂದೊಮ್ಮೆ ಮೇಲ್ಮನವಿಯನ್ನು ಪುರಸ್ಕರಿಸಿದರೂ ಮೂಲ ಆದೇಶಕ್ಕೆ ಯಾವುದೇ ಬದಲಾವಣೆಯಾಗುವುದಿಲ್ಲ.
ರಾಜ್ಯದ ಒಳಗೆ ತನ್ನ ಪಾಲಿನ 30 ಟಿಎಂಸಿ ನೀರನ್ನು ತಿರುಗಿಸಲು ಅನುಮತಿ ಕೋರಿ ಕೇರಳ ಸರ್ಕಾರ ಅರ್ಜಿ ಸಲ್ಲಿಸಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications