ಮತ್ತೆ ಜೈಲು ಸೇರಿದ ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ
ಬೆಂಗಳೂರು, ಜೂ. 04 : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಿಗಿ ಶಾಸಕ ನಾಗೇಂದ್ರ ಅವರನ್ನು ಸಿಬಿಐ ಅಧಿಕಾರಿಗಳು ಮತ್ತೆ ಬಂಧಿಸಿದ್ದಾರೆ. ನಾಗೇಂದ್ರ ಸೇರಿದಂತೆ 7 ಜನರನ್ನು ಸಿಬಿಐ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದು, ಎಲ್ಲರನ್ನು ಜೂ.8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಕ್ರಮ ಗಣಿಗಾರಿಕೆ ಸುಳಿಯಲ್ಲಿ ಸಿಲುಕಿರುವ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಜಾಮೀನಿನ ಮೇಲೆ ಹೊರಬಂದ ಕೆಲವೇ ತಿಂಗಳಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಬೇಲೆಕೇರಿ ಬಂದರಿನಿಂದ ಐಎಲ್ಸಿ ಇಂಡಸ್ಟ್ರೀಸ್ ಕಂಪನಿಯು ಅಕ್ರಮವಾಗಿ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. [ಬೇಲೇಕೇರಿ ಪ್ರಕರಣ, ಆನಂದ್ ಸಿಂಗ್ ಗೆ ಜಾಮೀನು]

ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ, ಕೆ. ನಾಗರಾಜ್, ಫರ್ಹಾನ್ ಶೇಖ್, ಅಜಯ್ ಖರ್ಬಂಡ, ರಾಣಿ ಸಮ್ಯುಕ್ತ, ನಂದಿನಿ ಮತ್ತು ಎರ್ರಿಬಾಬಾ ಎಂಬುವರು ಬಂಧಿತರಾಗಿದ್ದಾರೆ. ಎಲ್ಲರನ್ನು ಬುಧವಾರ ಸಂಜೆಯೇ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. [ರೆಡ್ಡಿ ಆಪ್ತ ಶಾಸಕ ನಾಗೇಂದ್ರ ಮೇಲೆ ಸಿಬಿಐ ದಾಳಿ]
ಆರೋಪಗಳೇನು? : ಐಎಲ್ಸಿ ಇಂಡಸ್ಟ್ರೀಸ್ ಕಂಪನಿಗೆ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್, ಎಫ್ಕೆ ಅಸೋಸಿಯೇಟ್ಸ್, ಗ್ರೀನ್ಟೆಕ್ ಮೈನಿಂಗ್, ನಾಗೇಂದ್ರ ಅವರ ಪಾಲುದಾರಿಕೆ ಹೊಂದಿರುವ ಈಗಲ್ ಟ್ರೇಡರ್ಸ್ ಅಂಡ್ ಲಾಜಿಸ್ಟಿಕ್ಸ್ ಕಂಪೆನಿಗಳೂ ಅದಿರು ಪೂರೈಸಿವೆ ಎಂಬ ಆರೋಪವಿದೆ.
2006ರಿಂದ 2010ರವರೆಗೆ 1,300 ಕೋಟಿ ರೂ. ಮೌಲ್ಯದ 11.61 ಲಕ್ಷ ಟನ್ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂಬುದು ಆರೋಪ. ಅಕ್ರಮ ಅದಿರು ಸಾಗಣೆಯಲ್ಲಿ ಬಂಧಿತರು ಭಾಗಿಯಾಗಿರುವುದು ವಿಚಾರಣೆ ವೇಳೆ ಖಚಿತವಾಗಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
3ನೇ ಬಾರಿ ಶಾಸಕರ ಬಂಧನ : ಅಕ್ರಮ ಗಣಿಗಾರಿಕೆ ಮತ್ತು ಬೇಲೆಕೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರನ್ನು 3ನೇ ಬಾರಿಗೆ ಬಂಧಿಸಲಾಗಿದೆ. ಮೊದಲು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಬಂಧಿಸಿತ್ತು. ಮತ್ತೆ ಜಾಮೀನಿನ ಮೇಲೆ ಹೊರಬಂದಿದ್ದ ಅವರನ್ನು ಸಿಬಿಐ ಅಧಿಕಾರಿಗಳು 2ನೇ ಬಾರಿಗೆ ಬಂಧಿಸಿದ್ದಾರೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿ.ನಾಗೇಂದ್ರ ಅವರು 71,477 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications