ಮತ್ತೆ ಜೈಲು ಸೇರಿದ ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ
ಬೆಂಗಳೂರು, ಜೂ. 04 : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಿಗಿ ಶಾಸಕ ನಾಗೇಂದ್ರ ಅವರನ್ನು ಸಿಬಿಐ ಅಧಿಕಾರಿಗಳು ಮತ್ತೆ ಬಂಧಿಸಿದ್ದಾರೆ. ನಾಗೇಂದ್ರ ಸೇರಿದಂತೆ 7 ಜನರನ್ನು ಸಿಬಿಐ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದು, ಎಲ್ಲರನ್ನು ಜೂ.8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಕ್ರಮ ಗಣಿಗಾರಿಕೆ ಸುಳಿಯಲ್ಲಿ ಸಿಲುಕಿರುವ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಜಾಮೀನಿನ ಮೇಲೆ ಹೊರಬಂದ ಕೆಲವೇ ತಿಂಗಳಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಬೇಲೆಕೇರಿ ಬಂದರಿನಿಂದ ಐಎಲ್ಸಿ ಇಂಡಸ್ಟ್ರೀಸ್ ಕಂಪನಿಯು ಅಕ್ರಮವಾಗಿ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. [ಬೇಲೇಕೇರಿ ಪ್ರಕರಣ, ಆನಂದ್ ಸಿಂಗ್ ಗೆ ಜಾಮೀನು]

ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ, ಕೆ. ನಾಗರಾಜ್, ಫರ್ಹಾನ್ ಶೇಖ್, ಅಜಯ್ ಖರ್ಬಂಡ, ರಾಣಿ ಸಮ್ಯುಕ್ತ, ನಂದಿನಿ ಮತ್ತು ಎರ್ರಿಬಾಬಾ ಎಂಬುವರು ಬಂಧಿತರಾಗಿದ್ದಾರೆ. ಎಲ್ಲರನ್ನು ಬುಧವಾರ ಸಂಜೆಯೇ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. [ರೆಡ್ಡಿ ಆಪ್ತ ಶಾಸಕ ನಾಗೇಂದ್ರ ಮೇಲೆ ಸಿಬಿಐ ದಾಳಿ]
ಆರೋಪಗಳೇನು? : ಐಎಲ್ಸಿ ಇಂಡಸ್ಟ್ರೀಸ್ ಕಂಪನಿಗೆ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್, ಎಫ್ಕೆ ಅಸೋಸಿಯೇಟ್ಸ್, ಗ್ರೀನ್ಟೆಕ್ ಮೈನಿಂಗ್, ನಾಗೇಂದ್ರ ಅವರ ಪಾಲುದಾರಿಕೆ ಹೊಂದಿರುವ ಈಗಲ್ ಟ್ರೇಡರ್ಸ್ ಅಂಡ್ ಲಾಜಿಸ್ಟಿಕ್ಸ್ ಕಂಪೆನಿಗಳೂ ಅದಿರು ಪೂರೈಸಿವೆ ಎಂಬ ಆರೋಪವಿದೆ.
2006ರಿಂದ 2010ರವರೆಗೆ 1,300 ಕೋಟಿ ರೂ. ಮೌಲ್ಯದ 11.61 ಲಕ್ಷ ಟನ್ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂಬುದು ಆರೋಪ. ಅಕ್ರಮ ಅದಿರು ಸಾಗಣೆಯಲ್ಲಿ ಬಂಧಿತರು ಭಾಗಿಯಾಗಿರುವುದು ವಿಚಾರಣೆ ವೇಳೆ ಖಚಿತವಾಗಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
3ನೇ ಬಾರಿ ಶಾಸಕರ ಬಂಧನ : ಅಕ್ರಮ ಗಣಿಗಾರಿಕೆ ಮತ್ತು ಬೇಲೆಕೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರನ್ನು 3ನೇ ಬಾರಿಗೆ ಬಂಧಿಸಲಾಗಿದೆ. ಮೊದಲು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಬಂಧಿಸಿತ್ತು. ಮತ್ತೆ ಜಾಮೀನಿನ ಮೇಲೆ ಹೊರಬಂದಿದ್ದ ಅವರನ್ನು ಸಿಬಿಐ ಅಧಿಕಾರಿಗಳು 2ನೇ ಬಾರಿಗೆ ಬಂಧಿಸಿದ್ದಾರೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿ.ನಾಗೇಂದ್ರ ಅವರು 71,477 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications