ಕದಂಬ ನೌಕಾ ನೆಲೆ ಮೇಲೆ ದಾಳಿ, ಇಬ್ಬರು ಅಧಿಕಾರಿಗಳು ಸಿಬಿಐ ವಶಕ್ಕೆ
ಕಾರವಾರ, ಜುಲೈ 28: ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಯ ಮೇಲೆ ಗುರುವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಿಲಿಟರಿ ಇಂಜಿನಿಯರಿಂಗ್ ಸರ್ವಿಸ್ ಅಧಿಕಾರಿಗಳ ಮೇಲೆ ಸಿಬಿಐ ದಾಳಿ ನಡೆದಿದೆ.
ಭ್ರಷ್ಟಾಚಾರ ಆರೋಪದಡಿ ಗ್ಯಾರಿಸನ್ ಇಂಜಿನಿಯರ್ ಜಿ.ಎಸ್.ದಾಸ್ ಹಾಗೂ ಸಹಾಯಕ ಗ್ಯಾರಿಸನ್ ಇಂಜಿನಿಯರ್ ಎಂ.ಚೌಹಾಣ್ ಎಂಬ ಇಬ್ಬರು ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಭಾರೀ ವಂಚನೆ
ಈ ಇಬ್ಬರು ಅಧಿಕಾರಿಗಳು ನೌಕಾನೆಲೆಯ ವಸ್ತುಗಳನ್ನು ಖರೀದಿಸಲು ಭಾರೀ ವಂಚನೆಯನ್ನು ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಈ ದಾಳಿ ನಡೆದಿದೆ.
ನೌಕಾನೆಲೆಯಲ್ಲಿ ಸಂಪೂರ್ಣ ಕಣ್ಗಾವಲು ಇರುವುದರಿಂದ ಈ ಅಧಿಕಾರಿಗಳು ಗುತ್ತಿಗೆದಾರರು ಹಾಗೂ ವಸ್ತು ಸರಬರಾಜುದಾರರೊಂದಿಗೆ ಕೋಡ್ ವರ್ಡ್ ಬಳಸಿ ಮಾತನಾಡಿ ಲಂಚ ಸ್ವೀಕರಿಸುತ್ತಿದ್ದರು.
ಇವರು ಅನೇಕ ಉನ್ನತ ಅಧಿಕಾರಿಗಳು, ಶ್ರೀಮಂತ ವ್ಯಕ್ತಿಗಳ ಸಂಪರ್ಕ ಹೊಂದಿದ್ದು, ಏಜೆಂಟ್ಗಳ ಮೂಲಕ ಹಣ ಪಡೆಯುತ್ತಿದ್ದರು ಎನ್ನಲಾಗಿದೆ.
ಕೋಡ್ ವರ್ಡ್ ಬಳಕೆ
ಇವರು ಸಕ್ಕರೆ ಹಾಗೂ ಚಿಕನ್ ಕೋಡ್ ವರ್ಡ್ ಬಳಸಿ ವ್ಯವಹಾರ ನಡೆಸುತ್ತಿದ್ದರು. 1 ಕೆಜಿ ಸಕ್ಕರೆಗೆ 2 ಲಕ್ಷ ರೂ. ಹಾಗೂ 1 ಕೆಜಿ ಚಿಕನ್ ಗೆ 3 ಲಕ್ಷ ನಿಗದಿಪಡಿಸಿದ್ದರು. ಗುತ್ತಿಗೆದಾರರೊಂದಿಗೆ ಇದೇ ಕೋಡ್ ವರ್ಡ್ ನ್ನು ಬಳಸಿ ಭ್ರಷ್ಟಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ನಿಖರ ಮಾಹಿತಿ ಪಡೆದ ಸಿಬಿಐ ಅಧಿಕಾರಿಗಳು ಸ್ಥಳೀಯ ಪೊಲೀಸರ ಸಹಾಯದಿಂದ ಇಂಜಿನಿಯರಿಂಗ್ ವಿಭಾಗಕ್ಕೆ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications