ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!

ಬೆಂಗಳೂರು, ನ. 05: ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. 2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಕೆಲ ಹೊತ್ತಿಗೆ ಮೊದಲು ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೀಗ ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಸಿಬಿಐ ಪೊಲೀಸರು ವಿಚಾರಣೆಗೆ ಒಳಪಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆಗ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿದ್ದ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿ ಬಂದಿತ್ತು. ಕಂದಾಯ ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು, ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದರು.

CBI has taken custody former minister Vinay Kulkarni in connection with Yogesh Gowda murder case

Recommended Video

      Hindu ಭಾವನೆಗಳನ್ನು ಘಾಸಿಗೊಳಿಸಿದ್ರಾ Amithabh bachan | KBC | Oneindia Kannada

      ಕೆಲ ತಿಂಗಳುಗಳ ಹಿಂದಷ್ಟೇ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರು ಸಿಬಿಐ ವಿಚಾರಣೆ ಎದುರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರಕರಣದಿಂದ ಬಚಾವಾಗಲು ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಪ್ರಯತ್ನ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಆದರೆ ಆ ಆರೋಪವನ್ನು ವಿನಯ್ ಕುಲಕರ್ಣಿ ನಿರಾಕರಿಸಿದ್ದರು. ಜೊತೆಗೆ ಬಿಜೆಪಿ ನಾಯಕರೂ ಕೂಡ ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+