ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ : ಯಾರು, ಏನು ಹೇಳಿದರು?
ಬೆಂಗಳೂರು, ಸೆಪ್ಟೆಂಬರ್ 05 : ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದ ಬಳಿಕ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ.
ಕರ್ನಾಟಕ ಸರ್ಕರ ಮೊದಲು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಎಂ.ಕೆ.ಗಣಪತಿ ತಂದೆ ಕುಶಾಲಪ್ಪ, ಸಹೋದರ ಮಾಚಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಮಂಗಳವಾರ ಸಿಬಿಐ ತನಿಖೆಗೆ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಸಿಬಿಐ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿ ಎ.ಎಂ.ಪ್ರಸಾದ್, ಪ್ರಣಬ್ ಮೊಹಂತಿ ಪಾತ್ರದ ಬಗ್ಗೆ ತನಿಖೆ ನಡೆಸಿ, ಮೂರು ತಿಂಗಳಿನಲ್ಲಿ ವರದಿ ನೀಡುವಂತೆ ಸೂಚಿಸಿದೆ.
ಕರ್ನಾಟಕದ ಬಿಜೆಪಿ ನಾಯಕರು ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಂದಿನ ಗೃಹ ಸಚಿವ, ಇಂದಿನ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಷಕ್ಷಪಾತ ತನಿಖೆಗೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಿತ್ರಗಳಲ್ಲಿ ನೋಡಿ...

ರಾಜೀನಾಮೆ ಪಡೆಯದಿದ್ದರೆ ಹೋರಾಟ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಆದೇಶ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಮುಖ್ಯಂಮತ್ರಿ ಸಿದ್ದರಾಮಯ್ಯ ಅವರು ಸಚಿವ ಜಾರ್ಜ್ ರಾಜೀನಾಮೆ ಪಡೆಯದೆ ಇದ್ದರೆ, ಇಬ್ಬರು ಅಧಿಕಾರಿಗಳನ್ನು ಅಮಾನತ್ತಿನಲ್ಲಿ ಇಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ' ಎಂದು ಎಚ್ಚರಿಕೆ ನೀಡಿದರು.

ತೀರ್ಪಿನ ಪ್ರತಿ ಸಿಕ್ಕ ಬಳಿಕ ಪ್ರತಿಕ್ರಿಯೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಕೋರ್ಟ್ ಆದೇಶದ ಪ್ರತಿ ಸಿಕ್ಕ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಕೋರ್ಟ್ ಮರು ತನಿಖೆಗೆ ಆದೇಶ ನೀಡಿದೆಯೋ?, ಬಿ ರಿಪೋರ್ಟ್ ರದ್ದು ಮಾಡಿದೆಯೋ ತಿಳಿದಿಲ್ಲ. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯುವುದಿಲ್ಲ. ಬಿಜೆಪಿಯವರು ರಾಜೀನಾಮೆ ಕೇಳಿದ ತಕ್ಷಣ ಪಡೆಯಲು ಸಾಧ್ಯವಿಲ್ಲ' ಎಂದು ಹೇಳಿದರು.
|
'ತಕ್ಷಣ ರಾಜೀನಾಮೆ ಪಡೆಯಿರಿ'
ತಕ್ಷಣ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಿರಿ

'ಸ್ವಾಗತ ಮಾಡುತ್ತೇನೆ'
ಯಡಿಯೂರಪ್ಪ ರಾಜೀನಾಮೆ ಕೊಡು ಅಂದ ಕೂಡಲೇ ಕೊಡಲು ಸಾಧ್ಯವಿಲ್ಲ. ಕೋರ್ಟ್ ತೀರ್ಮಾನ ಸ್ವಾಗತ ಮಾಡುತ್ತೇನೆ. ಆದರೆ, ಸಿಬಿಐ ತನಿಖೆ ನಡೆಸಲಿದೆ ಎಂಬ ಕಾರಣಕ್ಕೆ ಸಚಿವ ಸ್ಥಾನ ತೊರೆಯಲು ಸಾಧ್ಯವಿಲ್ಲ.

'ಸತ್ಯಾಂಶ ಹೊರಬರಲಿದೆ'
'ದಾಖಲೆಗಳನ್ನು ನಾಶ ಮಾಡಿದ್ದು ಕ್ರಿಮಿನಲ್ ಅಫೆನ್ಸ್. ಸಿಐಡಿ ವರದಿಯನ್ನು ತರಾತುರಿಯಲ್ಲಿ ಮಾಡಿಸಿರುವುದು ಸಾಬೀತಾಗಿದೆ. ಸಿಬಿಐ ತನಿಖೆಯನ್ನು ಸ್ವಾಗತ ಮಾಡುತ್ತೇನೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ' ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications