ಲಾಟರಿ ಹಗರಣ ಸಿಬಿಐ ತನಿಖೆಗೆ : ಯಾರು, ಏನು ಹೇಳಿದರು?
ಬೆಂಗಳೂರು, ಮೇ 27 : ಬಹುಕೋಟಿ ರೂಪಾಯಿ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದ ಬಳಿಕ ಸಿಬಿಐ ತನಿಖೆ ಆರಂಭವಾಗಲಿದೆ. ಸುಮಾರು 15 ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಮಂಗಳವಾರ ವಿಧಾನಸೌಧದಲ್ಲಿ ಸುಮಾರು 30 ನಿಮಿಷ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರ ಲಾಟರಿ ಹಗರಣವನ್ನು ಸಿಬಿಐಗೆ ವಹಿಸಲು ತೀರ್ಮಾನಿಸಿದೆ ಎಂದು ಪ್ರಕಟಿಸಿದರು. ಸಿಬಿಐ ತನಿಖೆ ಏಕೆ ಎಂದು ವಿವರಣೆ ನೀಡಿದರು. [ಲಾಟರಿ ಹಗರಣ ಸಿಬಿಐ ತನಿಖೆಗೆ ಕೊಟ್ಟಿದ್ದೇಕೆ? ಸಿದ್ದು ಉತ್ತರ ಕೇಳಿ]
ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸಿವೆ. ಸಿಬಿಐ ತನಿಖೆಗೆ ಒತ್ತಾಯಿಸಿ ಬುಧವಾರ ಬಿಜೆಪಿ ಪ್ರತಿ ಜಿಲ್ಲೆಯಲ್ಲಿಯೂ ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಸ್ ಪಡೆದಿದೆ. ಸಿಬಿಐ ತನಿಖೆ ಬಗ್ಗೆ ಯಾರು ಏನು ಹೇಳಿದರು ನೋಡೋಣ ಬನ್ನಿ... [ಸಿಐಡಿ ಹಾಗೂ ಸಿಬಿಐ ತನಿಖೆ ವ್ಯತ್ಯಾಸವೇನು?]

ಪ್ರಧಾನಿಗೆ ಪತ್ರ ಬರೆಯಲು ಸಿದ್ಧತೆ ನಡೆಸಿದ್ದೆ
'ಒಂದಂಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವುದರಲ್ಲಿದ್ದೆ. ಅಷ್ಟರಲ್ಲಿ ಪ್ರಕರಣ ಸಿಬಿಐಗೆ ವಹಿಸಿರುವುದು ಒಳ್ಳೆಯದಾಗಿದೆ, ಇದನ್ನು ಸ್ವಾಗತಿಸುತ್ತೇನೆ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಸತ್ಯಾಂಶ ಹೊರಗೆ ಬರಲಿ
'ಒಂದಂಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿರುವುದು ಉತ್ತಮ ಬೆಳವಣಿಗೆ 2007ರಿಂದ ಹಗರಣ ನಡೆದಿದೆ ಎಂಬ ಆರೋಪಗಳಿಗೆ ಸಿಬಿಐ ತನಿಖೆಯಾದರೆ ಎಲ್ಲವೂ ಹೊರಬರುತ್ತದೆ. ಬಿಜೆಪಿ ಸಿಬಿಐ ತನಿಖೆಗೆ ಆಗ್ರಹಿಸಿ ನಡೆಸಬೇಕಿದ್ದ ಹೋರಾಟವನ್ನು ವಾಪಸ್ ಪಡೆಯಲಿದೆ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ, ಜಾರ್ಜ್ ರಾಜೀನಾಮೆ ನೀಡಲಿ
'ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು' ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಹಗರಣದ ಬಗ್ಗೆ ಗುಪ್ತಚರ ಇಲಾಖೆ ಸಿಎಂಗೆ ಮಾಹಿತಿ ನೀಡಬೇಕಿತ್ತು. ಮಾಹಿತಿ ಸಂಹಿಸುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಈಶ್ವರಪ್ಪ ದೂರಿದ್ದಾರೆ.

ಪ್ರತಿಭಟನೆ ಕೈ ಬಿಟ್ಟಿದ್ದೇವೆ : ಜೋಶಿ
ಒಂದಂಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಬುಧವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷ ಹಮ್ಮಿಕೊಂಡಿದ್ದ ಹೋರಾಟವನ್ನು ಕೈ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.

ಬರೀ ಆರೋಪ ಮಾಡುವುದು ಸರಿಯಲ್ಲ
'ಲಾಟರಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಜೆ ಜಾರ್ಜ್ ಅವರ ವಿರುದ್ಧ ಆರೋಪ ಮಾಡುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೂಕ್ತ ದಾಖಲೆಗಳನ್ನು ನೀಡಲಿ. ಹಿರಿಯರಾದ ದೇವೇಗೌಡರು ಕೇವಲ ಆರೋಪ ಮಾಡಬಾರದು ಅದಕ್ಕೆ ಪುರಾವೆ ಕೊಡಬೇಕು' ಎಂದು ಪ್ರವಾಸೋದ್ಯಮ ಮತ್ತು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications