ಸಿಬಿಐ ಅಧಿಕೃತ ಹೇಳಿಕೆ: ದಾಳಿಯ ವೇಳೆ ಡಿಕೆಶಿ ಮನೆಯಲ್ಲಿ ಸಿಕ್ಕಿದ್ದು ಬರೀ ಪಂಚೆ, ಸೀರೆಯಲ್ಲ
ಬೆಂಗಳೂರು, ಅ 5: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮತ್ತು ವಿವಿದೆಡೆ ನಡೆದ ಸಿಬಿಐ ದಾಳಿ ಸೋಮವಾರ (ಅ 5) ಸಂಜೆ ಮುಕ್ತಾಯಗೊಂಡಿದೆ. ಇದಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, "ತಿಹಾರ್ ಜೈಲಿನಿಂದ ಹೊರಗೆ ಬಂದಾಗ, ಕೈಮುಗಿದು ಹೊರಗೆ ಬಂದಿದ್ದೇನೆ, ನೊಂದು ಹೊರಗೆ ಬಂದಿದ್ದೇನೆ"ಎಂದು ಹೇಳಿದರು.
ಇದಕ್ಕೂ ಮೊದಲು ಸದಾಶಿವ ನಗರದ ನಿವಾಸದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್,"ನೀವು ತೋರಿದ ಪ್ರೀತಿಗೆ ಆಭಾರಿಯಾಗಿದ್ದೇನೆ. ಈ ಜನ್ಮದಲ್ಲಿ ಇದನ್ನು ಮರೆಯುವುದಿಲ್ಲ"ಎಂದು ಭಾವನಾತ್ಮಕವಾಗಿ ನುಡಿದರು.
"ಮುಂಬೈನಲ್ಲಿ ಮೂರು ಕೋಟಿ ಸಿಕ್ಕಿತು, ಬೆಂಗಳೂರಿನಲ್ಲಿ ಐವತ್ತು ಲಕ್ಷ ಸಿಕ್ಕಿತು ಎಂದು ಮಾಧ್ಯಮದದಲ್ಲಿ ವರದಿಯಾಗಿದೆ. ಹಾರೆ, ಪಿಕ್ಕಾಸಿನಿಂದ ಬಾಗಿಲು ಒಡೆದರು ಎಂದೆಲ್ಲಾ ಮಾಧ್ಯಮದವರು ವರದಿ ಮಾಡಿದರು. ಆದರೆ, ಈ ಬಗ್ಗೆ ನನಗೆ ಬೇಸರವಿಲ್ಲ"ಎಂದು ಡಿಕೆಶಿ ಹೇಳಿದರು.
"ಸಿಬಿಐ ದಾಳಿಯ ವೇಳೆ ಪಂಚೆ, ಸೀರೆ, ಪ್ಯಾಂಟ್, ಶರ್ಟ್ ಸಿಕ್ಕಿದೆ, ಅದನ್ನು ಅಧಿಕಾರಿಗಳು ತೆಗೆದುಕೊಂಡಿದ್ದಾರೆ"ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು. ಆದರೆ, ಅಧಿಕೃತವಾಗಿ ಡಿಕೆಶಿ ಮನೆಯಲ್ಲಿ ಸಿಕ್ಕಿದ್ದೇನು?ಮುಂದೆ ಓದಿ..

ಡಿ.ಕೆ.ಶಿವಕುಮಾರ್
ನನ್ನ ಮನೆಯಲ್ಲಿ 1.77ಲಕ್ಷ, ನನ್ನ ತಮ್ಮನ ದೆಹಲಿ ನಿವಾಸದಲ್ಲಿ ಒಂದೆರಡು ಲಕ್ಷ ರೂಪಾಯಿ ಸಿಕ್ಕಿರಬಹುದು. ಇನ್ನು ನನ್ನ ತಾಯಿಯ ಮನೆಯಲ್ಲಿ ಏನೇನು ಸಿಕ್ಕಿದೆ ಎನ್ನುವುದು ನನಗೆ ತಿಳಿದಿಲ್ಲ. ದಾಳಿಯ ವೇಳೆ, ಬೇರೆಯವರ ಮನೆಯಲ್ಲಿ ಏನೇನು ಸಿಕ್ಕಿದರೆ, ಅದಕ್ಕೆ ನಾನು ಜವಾಬ್ದಾರನಲ್ಲ"ಎಂದು ಡಿ.ಕೆ.ಶಿವಕುಮಾರ್ ಹೇಳಿದರು. (ಚಿತ್ರ: ಡಿಕೆಶಿ ಮನೆ, ಕೃಪೆ ಪಿಟಿಐ)

ಸಿಬಿಐ ಅಧಿಕೃತವಾಗಿ ಈ ಸಂಬಂಧ ಟ್ವಿಟ್ಟರ್ ಮೂಲಕ ಸ್ಪಷ್ಟನೆ
ದಾಳಿಯ ವೇಳೆ 57ಲಕ್ಷ ರೂಪಾಯಿ ಹಣವನ್ನು ವಶ ಪಡಿಸಿಕೊಳ್ಳಲಾಗಿದೆ. ಇದಲ್ಲದೇ, 74.93ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಡಿಕೆಶಿ ಮತ್ತು ಇತರರ ಮೇಲೆ ಪ್ರಕರಣವೂ ದಾಖಲಾಗಿದೆ ಎಂದು. ಸಿಬಿಐ ಅಧಿಕೃತವಾಗಿ ಈ ಸಂಬಂಧ ಟ್ವಿಟ್ಟರ್ ಮೂಲಕ ಸ್ಪಷ್ಟ ಪಡಿಸಿದೆ.

ಡಿಕೆಶಿ ಒಡೆತನಕ್ಕೆ ಸಂಬಂಧಿಸಿದ ದಾಖಲೆಗಳು
ಕರ್ನಾಟಕದ ಒಂಬತ್ತು, ದೆಹಲಿಯ ನಾಲ್ಕು ಮತ್ತು ಮುಂಬೈನ ಒಂದು ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ಸಿಬಿಐ ಹೇಳಿದೆ. ಇದರ ಜೊತೆಗೆ, ಡಿಕೆಶಿ ಒಡೆತನಕ್ಕೆ ಸಂಬಂಧಿಸಿದ ದಾಖಲೆಗಳು, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಮತ್ತು ಇತರ ದಾಖಲೆಗಳನ್ನೂ ವಶ ಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಹೇಳಿದೆ.
Recommended Video

ಸತ್ಯವನ್ನೂ ತೋರಿಸಿದ್ದೀರಿ, ಅಸತ್ಯವನ್ನೂ ಹೇಳಿದ್ದೀರಿ
ನನಗೆ ಕೊಟ್ಟಿರುವ ಪಂಚನಾಮ ನನಗೆ ಸಿಕ್ಕ ಶಕ್ತಿ. ನೀವು (ಮಾಧ್ಯಮದವರು) ಇಂದು ಸತ್ಯವನ್ನೂ ತೋರಿಸಿದ್ದೀರಿ, ಅಸತ್ಯವನ್ನೂ ಹೇಳಿದ್ದೀರಿ. ಆದರೆ, ನನ್ನ ಕುಟುಂಬ ಈ ದೇಶದ ಕಾನೂನಿಗೆ ಬೆಲೆ ಕೊಡುವವರು. ಇಂತಹ ದಾಳಿಯಿಂದ ನನ್ನನ್ನು ಕುಗ್ಗಿಸಬಹುದು ಎಂದರೆ ಅದು ಸಾಧ್ಯವಿಲ್ಲ"ಎಂದು ಡಿಕೆಶಿ ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications