ಸಾವನ್ನಪ್ಪುವ ದಿನ ಡಿಕೆ ರವಿಗೆ ಬಂದಿದ್ದು 4 ಫೋನ್ ಕರೆ
ಬೆಂಗಳೂರು, ಮೇ 22 : ಐಎಎಸ್ ಅಧಿಕಾರಿ ಡಿಕೆ ರವಿ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರವಿ ಅವರಿಗೆ ಬಂದ ಫೋನ್ ಕರೆಗಳ ಮಾಹಿತಿಗಳನ್ನು ಸಂಗ್ರಹಣೆ ಮಾಡುತ್ತಿದ್ದಾರೆ. ಅವರು ಸಾವನ್ನಪ್ಪಿದ ದಿನ 4 ಫೋನ್ ಕರೆಗಳು ಬಂದಿದ್ದು, ಅವುಗಳ ಕುರಿತು ತನಿಖೆ ಆರಂಭಿಸಿದ್ದಾರೆ.
ಮಾರ್ಚ್ 16ರ ಸೋಮವಾರ ಸಂಜೆ ಕೋರಮಂಗಲ ಬಳಿಯ ತಾವರೆಕೆರೆ ರಸ್ತೆಯಲ್ಲಿರುವ ಪ್ರೆಸ್ಟೀಜ್ ಗ್ರೂಪ್ಗೆ ಸೇರಿದ 'ಸೇಂಟ್ ಜಾನ್ಸ್ವುಡ್ ಅಪಾರ್ಟ್ಮೆಂಟ್'ನಲ್ಲಿ ಡಿ.ಕೆ.ರವಿ ಅವರ ಮೃತದೇಹ ಪತ್ತೆಯಾಗಿತ್ತು. ಇದಕ್ಕೂ ಮೊದಲು ಅಂದು ಅವರಿಗೆ 4 ಕರೆಗಳು ಬಂದಿದ್ದವು ಎಂಬುದನ್ನು ಸಿಬಿಐ ಪತ್ತೆ ಹಚ್ಚಿದ್ದು, ತನಿಖೆ ನಡೆಸುತ್ತಿದೆ. [ರವಿ ಲವ್ ಅಫೇರ್ ಎಲ್ಲಾ ಕಟ್ಟುಕಥೆ]

ತನಿಖೆ ನಡೆಸುತ್ತಿರುವ ಸಿಬಿಐ ರವಿ ಅವರು ಅವರು ತಮ್ಮ ಬ್ಯಾಚ್ ಮೇಟ್ಗೆ ಮಾಡಿದ ಕರೆಯ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಫೋನ್ ಮೂಲಕ ಬೆದರಿಕೆ ಕರೆ ಬಂದು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೇ? ಎಂದು ತನಿಖೆ ನಡೆಸಲಾಗುತ್ತಿದೆ.[ಡಿಕೆ ರವಿ ಸಾವು: ಸಿಬಿಐ ತನಿಖೆಯ ಮೊದಲ ಪುಟ!]
ಕೇವಲ ವೈಯಕ್ತಿಕ ಕಾರಣವಲ್ಲ : ಡಿಕೆ ರವಿ ಅವರ ಸಾವು ಕೇವಲ ವೈಯಕ್ತಿಕ ಕಾರಣದಿಂದ ಸಂಭವಿಸಿಲ್ಲ ಎಂದು ಸಿಬಿಐ ಪ್ರಾಥಮಿಕ ತನಿಖೆಯಿಂದ ಅಭಿಪ್ರಾಯಪಟ್ಟಿದ್ದು, ಸಾವಿಗೆ ಬೇರೆ ಕಾರಣಗಳಿರಬಹುದು ಎಂಬ ಕುರಿತು ಸಿಬಿಐ ತನಿಖೆ ಮುಂದುವರೆಸಿದೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಆದ ನಷ್ಟವೂ ಸಾವಿಗೆ ಕಾರಣವಿರಬಹುದು ಎಂದು ಸಿಬಿಐ ಶಂಕಿಸಿದೆ. [ಡಿಕೆ ರವಿ ಕೇಸ್ Timeline]
ತನಿಖೆಗೆ ಸೇರಿಕೊಳ್ಳಲಿದೆ ಐಡಿ : ಡಿ.ಕೆ. ರವಿ ಸಾವಿನ ಪ್ರಕರಣದ ತನಿಖೆ ಹೊಸ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಸಾವಿನ ಜೊತೆಗೆ ರಿಯಲ್ ಎಸ್ಟೇಟ್ ವ್ಯವಹಾರವೂ ಸೇರಿಕೊಂಡಿರುವ ಬಗ್ಗೆ ಸಿಬಿಐ ಮಾಹಿತಿ ಸಂಗ್ರಹಿಸಿದೆ. ಆದ್ದರಿಂದ ಜಾರಿ ನಿರ್ದೇಶನಾಲಯ (ಐಡಿ) ಕೂಡ ಸಿಬಿಐನೊಂದಿಗೆ ತನಿಖೆಯಲ್ಲಿ ಶೀಘ್ರದಲ್ಲೇ ಸೇರಿಕೊಳ್ಳಲಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications